AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Modi-Putin Meeting ಹೈದರಾಬಾದ್ ಹೌಸ್‌ನಲ್ಲಿ ವ್ಲಾಡಿಮಿರ್ ಪುಟಿನ್ ಭೇಟಿ ಮಾಡಿದ ಮೋದಿ, ಭಾರತ-ರಷ್ಯಾ ಬಾಂಧವ್ಯ ಸದೃಢವಾಗಿದೆ ಎಂದ ಪ್ರಧಾನಿ

ದ್ವಿಪಕ್ಷೀಯ ಮಾತುಕತೆಗಾಗಿ ಹೈದರಾಬಾದ್ ಹೌಸ್‌ನಲ್ಲಿ ಪುಟಿನ್ ಅವರನ್ನು ಭೇಟಿಯಾದ ಮೋದಿ 'ಭಾರತದ ಕಡೆಗೆ ನಿಮ್ಮ ಪ್ರೀತಿ ಸ್ಪಷ್ಟವಾಗಿದೆ. ಕೊವಿಡ್ ಮತ್ತು ಇತರ ಸವಾಲುಗಳ ಹೊರತಾಗಿಯೂ, ಭಾರತ-ರಷ್ಯಾ ಸಂಬಂಧ  ಸದೃಢವಾಗಿದೆ ಎಂದು ಹೇಳಿದ್ದಾರೆ.

Modi-Putin Meeting  ಹೈದರಾಬಾದ್ ಹೌಸ್‌ನಲ್ಲಿ ವ್ಲಾಡಿಮಿರ್ ಪುಟಿನ್ ಭೇಟಿ ಮಾಡಿದ ಮೋದಿ, ಭಾರತ-ರಷ್ಯಾ ಬಾಂಧವ್ಯ ಸದೃಢವಾಗಿದೆ ಎಂದ ಪ್ರಧಾನಿ
ವ್ಲಾಡಿಮಿರ್ ಪುಟಿನ್ - ನರೇಂದ್ರ ಮೋದಿ
TV9 Web
| Edited By: |

Updated on:Dec 06, 2021 | 7:08 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹೈದರಾಬಾದ್ ಹೌಸ್‌ನಲ್ಲಿ (Hyderabad House) ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಅವರನ್ನು ಬರಮಾಡಿಕೊಂಡರು. ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 21 ನೇ ವಾರ್ಷಿಕ ಭಾರತ-ರಷ್ಯಾ ಶೃಂಗಸಭೆ ನಡೆಸಲಿದ್ದಾರೆ. ನವೆಂಬರ್ 2019 ರಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯ ಹಿನ್ನೆಲೆಯಲ್ಲಿ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ನಂತರ ಇದು ಮೊದಲ ಮುಖಾಮುಖಿ ಭೇಟಿಯಾಗಿದೆ. ದ್ವಿಪಕ್ಷೀಯ ಮಾತುಕತೆಗಾಗಿ ಹೈದರಾಬಾದ್ ಹೌಸ್‌ನಲ್ಲಿ ಪುಟಿನ್ ಅವರನ್ನು ಭೇಟಿಯಾದ ಮೋದಿ ‘ಭಾರತದ ಕಡೆಗೆ ನಿಮ್ಮ ಪ್ರೀತಿ ಸ್ಪಷ್ಟವಾಗಿದೆ. ಕೊವಿಡ್ ಮತ್ತು ಇತರ ಸವಾಲುಗಳ ಹೊರತಾಗಿಯೂ, ಭಾರತ-ರಷ್ಯಾ ಸಂಬಂಧ  ಸದೃಢವಾಗಿದೆ ಎಂದು ಹೇಳಿದ್ದಾರೆ. ಕಳೆದ ಕೆಲವು ದಶಕಗಳಲ್ಲಿ ಪ್ರಪಂಚವು ಅನೇಕ ಮೂಲಭೂತ ಬದಲಾವಣೆಗಳಿಗೆ ಸಾಕ್ಷಿಯಾಗಿದೆ ಮತ್ತು ವಿವಿಧ ರೀತಿಯ ಭೌಗೋಳಿಕ ರಾಜಕೀಯ ಸಮೀಕರಣಗಳು ಹೊರಹೊಮ್ಮಿದವು. ಆದರೆ ಭಾರತ ಮತ್ತು ರಷ್ಯಾದ ಸ್ನೇಹವು ಸ್ಥಿರವಾಗಿತ್ತು. ಭಾರತ ಮತ್ತು ರಷ್ಯಾ ನಡುವಿನ ಸಂಬಂಧವು ಅಂತರರಾಜ್ಯ ಸ್ನೇಹದ ಅನನ್ಯ ಮತ್ತು ವಿಶ್ವಾಸಾರ್ಹ ಮಾದರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

ಪ್ರಸ್ತುತ  ಪರಸ್ಪರ ಹೂಡಿಕೆಗಳು ಸುಮಾರು 38 ಬಿಲಿಯನ್ ಆಗಿದ್ದು, ರಷ್ಯಾದ ಕಡೆಯಿಂದ ಸ್ವಲ್ಪ ಹೆಚ್ಚು ಹೂಡಿಕೆ ಬರುತ್ತದೆ. ಬೇರೆ ಯಾವುದೇ ದೇಶದಂತೆ ನಾವು ಮಿಲಿಟರಿ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚು ಸಹಕರಿಸುತ್ತೇವೆ. ನಾವು ಒಟ್ಟಾಗಿ ಉನ್ನತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತೇವೆ ಮತ್ತು ಭಾರತದಲ್ಲಿ ಉತ್ಪಾದಿಸುತ್ತೇವೆ. ಸ್ವಾಭಾವಿಕವಾಗಿ, ಭಯೋತ್ಪಾದನೆಗೆ ಸಂಬಂಧಿಸಿದ ಎಲ್ಲದರ ಬಗ್ಗೆ ನಾವು ಕಾಳಜಿ ವಹಿಸುತ್ತೇವೆ. ಭಯೋತ್ಪಾದನೆಯ ವಿರುದ್ಧದ ಹೋರಾಟವು ಮಾದಕವಸ್ತು ಕಳ್ಳಸಾಗಣೆ ಮತ್ತು ಸಂಘಟಿತ ಅಪರಾಧಗಳ ವಿರುದ್ಧದ ಹೋರಾಟವಾಗಿದೆ. ಆ ನಿಟ್ಟಿನಲ್ಲಿ ಅಫ್ಘಾನಿಸ್ತಾನದ ಪರಿಸ್ಥಿತಿಯ ಬೆಳವಣಿಗೆಗಳ ಬಗ್ಗೆ ನಾವು ಕಾಳಜಿ ವಹಿಸುತ್ತೇವೆ. ನಾವು ಭಾರತವನ್ನು ಮಹಾನ್ ಶಕ್ತಿ, ಸ್ನೇಹಪರ ರಾಷ್ಟ್ರ ಮತ್ತು ಸಮಯ ಪರೀಕ್ಷಿತ ಸ್ನೇಹಿತ ಎಂದು ಗ್ರಹಿಸುತ್ತೇವೆ. ನಮ್ಮ ರಾಷ್ಟ್ರಗಳ ನಡುವಿನ ಸಂಬಂಧಗಳು ಬೆಳೆಯುತ್ತಿವೆ ಮತ್ತು ನಾನು ಭವಿಷ್ಯವನ್ನು ನೋಡುತ್ತಿದ್ದೇನೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ.

ಈ ವರ್ಷದಲ್ಲಿ ಎರಡನೇ ಬಾರಿಗೆ ಪುಟಿನ್ ವಿದೇಶ ಪ್ರವಾಸ ಭಾರತ-ರಷ್ಯಾದ ಈ ಸಂಬಂಧ, ಬಾಂಧವ್ಯವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮುಂದಾಗಿದ್ದಾರೆ. 21ನೇ ಭಾರತ-ರಷ್ಯಾ ವಾರ್ಷಿಕ ಸಭೆಯ ಭಾಗವಾಗಿ ಪುಟಿನ್-ಮೋದಿ ಭೇಟಿಯಾಗುತ್ತಿದ್ದಾರೆ. ಈ ವರ್ಷ ಎರಡನೇ ಬಾರಿಗೆ ವ್ಲಾಡಿಮಿರ್ ಪುಟಿನ್ ರಷ್ಯಾದಿಂದ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಜೂನ್ ತಿಂಗಳಲ್ಲಿ ಜಿನೆವಾದಲ್ಲಿ ಆಮೆರಿಕ ಅಧ್ಯಕ್ಷ ಜೋ ಬೈಡೆನ್​ರನ್ನು ಭೇಟಿಯಾಗಿದ್ದರು. ಈಗ ಭಾರತಕ್ಕೆ ಬಂದು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಆದರೆ ಜಿ-20 ಶೃಂಗಸಭೆ, ಹವಾಮಾನ ಬದಲಾವಣೆಯ ಬಗ್ಗೆ ಆಸ್ಟ್ರೇಲಿಯಾದಲ್ಲಿ ನಡೆದ COP26 ಸಭೆಗಳಿಗೆ ಪುಟಿನ್ ಹೋಗಿರಲಿಲ್ಲ. ಭಾರತದೊಂದಿಗಿನ ಗಟ್ಟಿ ಭಾಂಧವ್ಯದ ಕಾರಣದಿಂದ ಈ ವರ್ಷದಲ್ಲಿ 2ನೇ ಬಾರಿಗೆ ಪುಟಿನ್ ವಿದೇಶ ಪ್ರವಾಸ ಕೈಗೊಂಡು ಭಾರತಕ್ಕೆ ಬಂದಿದ್ದಾರೆ. 2019ರಲ್ಲಿ ದೆಹಲಿಗೆ ಪುಟಿನ್ ಬಂದಾಗ, ಆಗಿನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ವಾಗತಿಸಿದ್ದರು.

ಇದನ್ನೂ ಓದಿ:  ಭಾರತದಲ್ಲಿ ವ್ಲಾದಿಮಿರ್ ಪುಟಿನ್: ರಷ್ಯಾ-ಭಾರತ ದ್ವಿಪಕ್ಷೀಯ ಸಂಬಂಧಕ್ಕಿದೆ ಶತಮಾನಗಳ ಇತಿಹಾಸ

Published On - 6:51 pm, Mon, 6 December 21

ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ