AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ

ಚರಣಜಿತ್​ ಸಿಂಗ್ ಛನ್ನಿ ಅವರು ಪಂಜಾಬ್​ನ ಮೊದಲ ಸಿಖ್​ ದಲಿತ ಸಿಎಂ ಆಗಿದ್ದಾರೆ. ಇಂದು ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಾದ ಸುಖ್​ಜಿಂದರ್​ ಸಿಂಗ್​ ರಾಂಧವ ಮತ್ತು ಓಂ ಪ್ರಕಾಶ್​ ಸೋನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ
ನರೇಂದ್ರ ಮೋದಿ ಮತ್ತು ಚರಣಜಿತ್​ ಸಿಂಗ್​ ಛನ್ನಿ
TV9 Web
| Edited By: |

Updated on: Sep 20, 2021 | 4:31 PM

Share

ದೆಹಲಿ: ಪಂಜಾಬ್​ ನೂತನ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಪಿಎಂ ಮೋದಿ, ಪಂಜಾಬ್​ ಜನತೆಯ ಒಳಿತು, ಅಭಿವೃದ್ಧಿಗಾಗಿ ನಾವು ಅಲ್ಲಿನ ಹೊಸ ಸರ್ಕಾರದೊಂದಿಗೆ ಸೇರಿ ಕೆಲಸ ಮುಂದುವರಿಸುತ್ತೇವೆ ಎಂದಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಗುಜರಾತ್​ನಲ್ಲಿ ಮುಖ್ಯಮಂತ್ರಿಯ ಬದಲಾವಣೆ ಮಾಡಿ, ಅಲ್ಲಿ ಹೊಸ ಮುಖ್ಯಮಂತ್ರಿ ನೇಮಕ ಮಾಡಿದೆ. ಪಂಜಾಬ್​​ನಲ್ಲೂ ಕೂಡ ಕಾಂಗ್ರೆಸ್​ ಅದೇ ಮಾರ್ಗ ಅನುಸರಿಸಿದೆ. ಕ್ಯಾ.ಅಮರಿಂದರ್​ ಸಿಂಗ್​ರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿ, ನಿನ್ನೆ ಚರಣಜಿತ್​ ಸಿಂಗ್​ ಛನ್ನಿ ಅವರನ್ನು ಆಯ್ಕೆ ಮಾಡಿತ್ತು. ಇಂದು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಚರಣಜಿತ್​ ಸಿಂಗ್ ಛನ್ನಿ ಅವರು ಪಂಜಾಬ್​ನ ಮೊದಲ ಸಿಖ್​ ದಲಿತ ಸಿಎಂ ಆಗಿದ್ದಾರೆ. ಇಂದು ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಾದ ಸುಖ್​ಜಿಂದರ್​ ಸಿಂಗ್​ ರಾಂಧವ ಮತ್ತು ಓಂ ಪ್ರಕಾಶ್​ ಸೋನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಪಂಜಾಬ್​ನಲ್ಲಿ ಹಿಂದಿನ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಮತ್ತು ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ನಡುವಿನ ಬಹುಕಾಲದ ಜಗಳವೇ ಈ ಸಿಎಂ ಬದಲಾವಣೆಗೆ ಕಾರಣವಾಗಿದೆ. ನಿನ್ನೆ ಚರಣಜಿತ್​ ಸಿಂಗ್​ ಛನ್ನಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದ ರಾಹುಲ್​ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದರು. ಪಂಜಾಬ್​ ಜನರಿಗೆ ನೀಡಿದ್ದ ಭರವಸೆಯನ್ನು ಪೂರ್ಣಗೊಳಿಸಬೇಕು. ಅವರ ನಂಬಿಕೆ ಉಳಿಸಿಕೊಳ್ಳುವುದು ತುಂಬ ಮಹತ್ವ ಎಂದು ಹೇಳಿದ್ದಾರೆ. ಹಾಗೇ, ಇಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಹಾಜರಾಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್​​ಪಿ ನಾಯಕಿ ಮಾಯಾವತಿ

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

Follow Us
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ