AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ

ಚರಣಜಿತ್​ ಸಿಂಗ್ ಛನ್ನಿ ಅವರು ಪಂಜಾಬ್​ನ ಮೊದಲ ಸಿಖ್​ ದಲಿತ ಸಿಎಂ ಆಗಿದ್ದಾರೆ. ಇಂದು ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಾದ ಸುಖ್​ಜಿಂದರ್​ ಸಿಂಗ್​ ರಾಂಧವ ಮತ್ತು ಓಂ ಪ್ರಕಾಶ್​ ಸೋನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ
ನರೇಂದ್ರ ಮೋದಿ ಮತ್ತು ಚರಣಜಿತ್​ ಸಿಂಗ್​ ಛನ್ನಿ
TV9 Web
| Edited By: |

Updated on: Sep 20, 2021 | 4:31 PM

Share

ದೆಹಲಿ: ಪಂಜಾಬ್​ ನೂತನ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಪಿಎಂ ಮೋದಿ, ಪಂಜಾಬ್​ ಜನತೆಯ ಒಳಿತು, ಅಭಿವೃದ್ಧಿಗಾಗಿ ನಾವು ಅಲ್ಲಿನ ಹೊಸ ಸರ್ಕಾರದೊಂದಿಗೆ ಸೇರಿ ಕೆಲಸ ಮುಂದುವರಿಸುತ್ತೇವೆ ಎಂದಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಗುಜರಾತ್​ನಲ್ಲಿ ಮುಖ್ಯಮಂತ್ರಿಯ ಬದಲಾವಣೆ ಮಾಡಿ, ಅಲ್ಲಿ ಹೊಸ ಮುಖ್ಯಮಂತ್ರಿ ನೇಮಕ ಮಾಡಿದೆ. ಪಂಜಾಬ್​​ನಲ್ಲೂ ಕೂಡ ಕಾಂಗ್ರೆಸ್​ ಅದೇ ಮಾರ್ಗ ಅನುಸರಿಸಿದೆ. ಕ್ಯಾ.ಅಮರಿಂದರ್​ ಸಿಂಗ್​ರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿ, ನಿನ್ನೆ ಚರಣಜಿತ್​ ಸಿಂಗ್​ ಛನ್ನಿ ಅವರನ್ನು ಆಯ್ಕೆ ಮಾಡಿತ್ತು. ಇಂದು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಚರಣಜಿತ್​ ಸಿಂಗ್ ಛನ್ನಿ ಅವರು ಪಂಜಾಬ್​ನ ಮೊದಲ ಸಿಖ್​ ದಲಿತ ಸಿಎಂ ಆಗಿದ್ದಾರೆ. ಇಂದು ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಾದ ಸುಖ್​ಜಿಂದರ್​ ಸಿಂಗ್​ ರಾಂಧವ ಮತ್ತು ಓಂ ಪ್ರಕಾಶ್​ ಸೋನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಪಂಜಾಬ್​ನಲ್ಲಿ ಹಿಂದಿನ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಮತ್ತು ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ನಡುವಿನ ಬಹುಕಾಲದ ಜಗಳವೇ ಈ ಸಿಎಂ ಬದಲಾವಣೆಗೆ ಕಾರಣವಾಗಿದೆ. ನಿನ್ನೆ ಚರಣಜಿತ್​ ಸಿಂಗ್​ ಛನ್ನಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದ ರಾಹುಲ್​ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದರು. ಪಂಜಾಬ್​ ಜನರಿಗೆ ನೀಡಿದ್ದ ಭರವಸೆಯನ್ನು ಪೂರ್ಣಗೊಳಿಸಬೇಕು. ಅವರ ನಂಬಿಕೆ ಉಳಿಸಿಕೊಳ್ಳುವುದು ತುಂಬ ಮಹತ್ವ ಎಂದು ಹೇಳಿದ್ದಾರೆ. ಹಾಗೇ, ಇಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಹಾಜರಾಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್​​ಪಿ ನಾಯಕಿ ಮಾಯಾವತಿ

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?