AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ

ಚರಣಜಿತ್​ ಸಿಂಗ್ ಛನ್ನಿ ಅವರು ಪಂಜಾಬ್​ನ ಮೊದಲ ಸಿಖ್​ ದಲಿತ ಸಿಎಂ ಆಗಿದ್ದಾರೆ. ಇಂದು ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಾದ ಸುಖ್​ಜಿಂದರ್​ ಸಿಂಗ್​ ರಾಂಧವ ಮತ್ತು ಓಂ ಪ್ರಕಾಶ್​ ಸೋನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಪಂಜಾಬ್​ ನೂತನ ಮುಖ್ಯಮಂತ್ರಿಗೆ ಪ್ರಧಾನಿ ಅಭಿನಂದನೆ; ಜನರ ಒಳಿತು ನಮ್ಮ ಆದ್ಯತೆಯಾಗಲಿ ಎಂದ ಮೋದಿ
ನರೇಂದ್ರ ಮೋದಿ ಮತ್ತು ಚರಣಜಿತ್​ ಸಿಂಗ್​ ಛನ್ನಿ
TV9 Web
| Edited By: |

Updated on: Sep 20, 2021 | 4:31 PM

Share

ದೆಹಲಿ: ಪಂಜಾಬ್​ ನೂತನ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮಾಡಿರುವ ಪಿಎಂ ಮೋದಿ, ಪಂಜಾಬ್​ ಜನತೆಯ ಒಳಿತು, ಅಭಿವೃದ್ಧಿಗಾಗಿ ನಾವು ಅಲ್ಲಿನ ಹೊಸ ಸರ್ಕಾರದೊಂದಿಗೆ ಸೇರಿ ಕೆಲಸ ಮುಂದುವರಿಸುತ್ತೇವೆ ಎಂದಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಗುಜರಾತ್​ನಲ್ಲಿ ಮುಖ್ಯಮಂತ್ರಿಯ ಬದಲಾವಣೆ ಮಾಡಿ, ಅಲ್ಲಿ ಹೊಸ ಮುಖ್ಯಮಂತ್ರಿ ನೇಮಕ ಮಾಡಿದೆ. ಪಂಜಾಬ್​​ನಲ್ಲೂ ಕೂಡ ಕಾಂಗ್ರೆಸ್​ ಅದೇ ಮಾರ್ಗ ಅನುಸರಿಸಿದೆ. ಕ್ಯಾ.ಅಮರಿಂದರ್​ ಸಿಂಗ್​ರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿ, ನಿನ್ನೆ ಚರಣಜಿತ್​ ಸಿಂಗ್​ ಛನ್ನಿ ಅವರನ್ನು ಆಯ್ಕೆ ಮಾಡಿತ್ತು. ಇಂದು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಚರಣಜಿತ್​ ಸಿಂಗ್ ಛನ್ನಿ ಅವರು ಪಂಜಾಬ್​ನ ಮೊದಲ ಸಿಖ್​ ದಲಿತ ಸಿಎಂ ಆಗಿದ್ದಾರೆ. ಇಂದು ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಾದ ಸುಖ್​ಜಿಂದರ್​ ಸಿಂಗ್​ ರಾಂಧವ ಮತ್ತು ಓಂ ಪ್ರಕಾಶ್​ ಸೋನಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಪಂಜಾಬ್​ನಲ್ಲಿ ಹಿಂದಿನ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಮತ್ತು ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ನಡುವಿನ ಬಹುಕಾಲದ ಜಗಳವೇ ಈ ಸಿಎಂ ಬದಲಾವಣೆಗೆ ಕಾರಣವಾಗಿದೆ. ನಿನ್ನೆ ಚರಣಜಿತ್​ ಸಿಂಗ್​ ಛನ್ನಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಟ್ವೀಟ್ ಮಾಡಿದ್ದ ರಾಹುಲ್​ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದರು. ಪಂಜಾಬ್​ ಜನರಿಗೆ ನೀಡಿದ್ದ ಭರವಸೆಯನ್ನು ಪೂರ್ಣಗೊಳಿಸಬೇಕು. ಅವರ ನಂಬಿಕೆ ಉಳಿಸಿಕೊಳ್ಳುವುದು ತುಂಬ ಮಹತ್ವ ಎಂದು ಹೇಳಿದ್ದಾರೆ. ಹಾಗೇ, ಇಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಹಾಜರಾಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್​​ಪಿ ನಾಯಕಿ ಮಾಯಾವತಿ

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ