AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿಕೊಟ್ಟ ಅಫ್ಘಾನ್​​ ಹಿಂದು-ಸಿಖ್​ ಮುಖಂಡರು; ನರೇಂದ್ರ ಮೋದಿಯವರಿಗೆ ರುಮಾಲು, ಸಾಂಪ್ರದಾಯಿಕ ಉಡುಪು ಉಡುಗೊರೆ

ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದ ಹಿಂದು-ಸಿಖ್​ ಮುಖಂಡರ ನಿಯೋಗವೊಂದು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿತ್ತು. ಅವರ ಬಳಿ ಮಾತನಾಡಿದ ಮೋದಿ, ಭಾರತ ನಿಮಗೆ ಮನೆಯೇ ಹೊರತು, ನೀವು ಇಲ್ಲಿ ಅತಿಥಿಗಳಲ್ಲ ಎಂದಿದ್ದಾರೆ.

ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿಕೊಟ್ಟ ಅಫ್ಘಾನ್​​ ಹಿಂದು-ಸಿಖ್​ ಮುಖಂಡರು; ನರೇಂದ್ರ ಮೋದಿಯವರಿಗೆ ರುಮಾಲು, ಸಾಂಪ್ರದಾಯಿಕ ಉಡುಪು ಉಡುಗೊರೆ
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಅಫ್ಘಾನ್​ ಸಿಖ್​-ಹಿಂದು ಮುಖಂಡರು
TV9 Web
| Edited By: |

Updated on:Feb 19, 2022 | 6:00 PM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)  ನಿವಾಸಕ್ಕೆ ಅಫ್ಘಾನಿಸ್ತಾನದ ಹಿಂದು ಮತ್ತು ಸಿಖ್​ ಸಮುದಾಯದ ನಾಯಕರನ್ನೊಳಗೊಂಡ ನಿಯೋಗ (Delegation of Sikhs and Hindus from Afghanistan)  ಭೇಟಿ ಕೊಟ್ಟಿತ್ತು.  ಹೀಗೆ ಮುಂಜಾನೆ ತಮ್ಮ ನಿವಾಸಕ್ಕೆ ಆಗಮಿಸಿದ ಅಫ್ಘಾನ್​ ಮೂಲದ ಹಿಂದು ಮತ್ತು ಸಿಖ್​ ನಾಯಕರಿಗೆ, ಭಾರತ ನಿಮ್ಮ ಮನೆಯೇ ಹೊರತು, ನೀವಿಲ್ಲ ಅತಿಥಿಗಳಲ್ಲ. ಭಾರತೀಯರು ನಿಮ್ಮನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಎಂದು ಹೇಳಿದ್ದಾರೆ. ಹಾಗೇ, ಈ ನಿಯೋಗವನ್ನು ಭೇಟಿಯಾದ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಫೋಟೋಗಳನ್ನು ಶೇರ್ ಮಾಡಿಕೊಂಡು, ಅಫ್ಘಾನ್​​ನಿಂದ ನಿರಾಶ್ರಿತರಾಗಿ ಭಾರತಕ್ಕೆ ಬಂದವರನ್ನು ಇಂದು ಭೇಟಿಯಾದೆ ಎಂದು ಕ್ಯಾಪ್ಷನ್​ ಬರೆದುಕೊಂಡಿದ್ದಾರೆ.

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಆಡಳಿತಕ್ಕೆ ಬಂದ ಮೇಲೆ ಅಲ್ಲಿನ ಅಲ್ಪಸಂಖ್ಯಾತ ಸಮುದಾಯಗಳಾದ ಹಿಂದು ಮತ್ತು ಸಿಖ್​ರು ಅನೇಕರು ಭಾರತಕ್ಕೆ ಬಂದಿದ್ದಾರೆ. ಹೀಗೆ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂದವರ ನಿಯೋಗವೊಂದು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿತ್ತು. ಹಾಗೇ, ಪ್ರಧಾನಿ ಮೋದಿಯವರಿಗೆ ಅಫ್ಘಾನ್​ ಪೇಟ ಮತ್ತು ಸಾಂಪ್ರದಾಯಿಕ ಉಡುಗೆಯೊಂದನ್ನು ನೀಡಿದ್ದಾರೆ. ಈ ಪೇಟ (ಟರ್ಬನ್​) ಅಫ್ಘಾನಿಸ್ತಾನದ ಸಂಕೇತವಾಗಿದೆ. ನೀವಿದನ್ನು ಧರಿಸಿದರೆ ಅಫ್ಘಾನ್​​ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯಿ ಅವರಿಗೆ ನಿಜಕ್ಕೂ ಸಂತೋಷವಾಗಲಿದೆ ಎಂದು ಅವರು ಪಿಎಂಗೆ ಹೇಳಿದ್ದಾರೆ.

ಇಂದು ಅಫ್ಘಾನಿಸ್ತಾನ ಹಿಂದೂ-ಸಿಖ್​ ಸಮುದಾಯದವರು ತಮ್ಮನ್ನು ಭೇಟಿಯಾದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ, ತಾವು 2015ರಲ್ಲಿ ಅಫ್ಘಾನ್​ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ್ದನ್ನು ನೆನಪಿಸಿಕೊಂಡರು. ಇನ್ನು ಭೇಟಿಗೆ ಬಂದ ಅಫ್ಘಾನ್​ ಅಲ್ಪಸಂಖ್ಯಾತರು, ತಾಲಿಬಾನ್​ ಆಕ್ರಮಣ ಮಾಡಿದಾಗ ತಮಗೆ ಭಾರತ ಸರ್ಕಾರ ನೀಡಿದ ನೆರವನ್ನು ನೆನಪಿಸಿಕೊಂಡು, ಕೃತಜ್ಞತೆ ಸಲ್ಲಿಸಿದರು.  ಮುಂದಿನ ವಾರ ಭಾರತ ಅಫ್ಘಾನಿಸ್ತಾನದ ಜನರಿಗಾಗಿ ಸುಮಾರು 50 ಸಾವಿರ ಮೆಟ್ರಿಕ್​ ಟನ್​ಗಳಷ್ಟು ಗೋಧಿ ಕಳಿಸಿಕೊಡಲಿದೆ. ಗೋಧಿಯನ್ನು ಹೊತ್ತು ಹೋಗುವ ಅಫ್ಘಾನ್​ ಟ್ರಕ್​ ಪಾಕಿಸ್ತಾನಿ ಭೂಪ್ರದೇಶದ ಮೂಲಕವೇ ಹಾದುಹೋಗಲಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಅರಿಂದಾಮ್​ ಬಾಗ್ಚಿ ಗುರುವಾರ ತಿಳಿಸಿದ್ದಾರೆ.

ನಿನ್ನೆ (ಫೆ.18) ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಮನೆಯಲ್ಲಿ ಭಾರತದ ಹಿರಿಯ ಸಿಖ್​ ನಾಯಕರೊಂದಿಗೆ ಸಂವಾದ ನಡೆಸಿದ್ದರು. ಪಂಜಾಬ್​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಿಖ್​ ನಾಯಕರನ್ನು ಭೇಟಿ ಮಾಡಿದ್ದ ಅವರು, 1947 ರ ವಿಭಜನೆಯ ಸಮಯದಲ್ಲಿ ಸಿಖ್ ಪುಣ್ಯಕ್ಷೇತ್ರ ಕರ್ತಾರ್‌ಪುರ ಸಾಹಿಬ್​​ನ್ನು ಭಾರತದಲ್ಲಿಯೇ ಉಳಿಸಿಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ ಎಂದೂ ಹೇಳಿದ್ದರು.

ಇದನ್ನೂ ಓದಿ:  ಭಾರತ 1947ರಲ್ಲಿ ಹುಟ್ಟಿಲ್ಲ: ಹಿರಿಯ ಸಿಖ್ ನಾಯಕರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

Published On - 5:34 pm, Sat, 19 February 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು