AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ ಭದ್ರತಾ ಲೋಪದ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​ಗೆ ವಿವರಿಸಿದ ಪ್ರಧಾನಿ ಮೋದಿ; ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಪ್ರಧಾನಿ ಮೋದಿಗೆ ಖುದ್ದಾಗಿ ಕರೆ ಮಾಡಿ ಘಟನೆ ಬಗ್ಗೆ ವಿಚಾರಿಸಿದ್ದಾರೆ. ಹಾಗೇ, ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಂಜಾಬ್​​ ಭದ್ರತಾ ಲೋಪದ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್​ಗೆ ವಿವರಿಸಿದ ಪ್ರಧಾನಿ ಮೋದಿ; ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ
ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ
TV9 Web
| Updated By: Lakshmi Hegde|

Updated on:Jan 06, 2022 | 2:42 PM

Share

ಜ.5ರಂದು ಪಂಜಾಬ್​​ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರ ಭದ್ರತೆಯಲ್ಲಿ ಲೋಪ(PM security breach)ದ ಬಗ್ಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ (Ram Nath Kovind) ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು(  )ಕಳವಳ ವ್ಯಕ್ತಪಡಿಸಿದ್ದಾರೆ. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ಭವನದಲ್ಲಿ ರಾಮನಾಥ ಕೋವಿಂದ್​ರನ್ನು ಭೇಟಿಯಾಗಿ, ನಿನ್ನೆ ನಡೆದ ಘಟನೆಯನ್ನು ವಿವರಿಸಿದ್ದಾರೆ. ಬಳಿಕ ಟ್ವೀಟ್ ಮಾಡಿರುವ ರಾಷ್ಟ್ರಪತಿ, ಪಂಜಾಬ್​ನಲ್ಲಿ ಪ್ರಧಾನಮಂತ್ರಿ ಭದ್ರತೆಯಲ್ಲಿ ಆದ ಲೋಪದ ಬಗ್ಗೆ ನೇರವಾಗಿ ದೇಶದ ಪಿಎಂ ನರೇಂದ್ರ ಮೋದಿಯವರ ಬಳಿಯೇ ಕೇಳಿ ಮಾಹಿತಿ ಪಡೆಯಲಾಯಿತು. ಈ ಲೋಪದ ಬಗ್ಗೆ ನಿಜಕ್ಕೂ ಕಳವಳ ಉಂಟಾಗಿದೆ ಎಂದು ಹೇಳಿದ್ದಾರೆ.  ಹಾಗೇ, ಪ್ರಧಾನಿ ನರೇಂದ್ರ ಮೋದಿ ಭೇಟಿಯ ಫೋಟೋವನ್ನೂ ಶೇರ್​ ಮಾಡಿಕೊಂಡಿದ್ದಾರೆ. ಇನ್ನು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಪ್ರಧಾನಿ ಮೋದಿಗೆ ಖುದ್ದಾಗಿ ಕರೆ ಮಾಡಿ ಘಟನೆ ಬಗ್ಗೆ ವಿಚಾರಿಸಿದ್ದಾರೆ. ಭವಿಷ್ಯದಲ್ಲಿ ಇಂಥ ಘಟನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾಗಿ ಮೂಲಗಳು ತಿಳಿಸಿವೆ. 

ನಿನ್ನೆ ಪಂಜಾಬ್​ನ ಫಿರೋಜ್​ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ರ್ಯಾಲಿ ಹಮ್ಮಿಕೊಂಡಿದ್ದರು ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಭಟಿಂಡಾ ವಿಮಾನ ನಿಲ್ದಾಣದಲ್ಲಿ ಇಳಿದ ಪ್ರಧಾನಿ ಮೋದಿ ಹೆಲಿಕಾಪ್ಟರ್​ ಮೂಲಕ ಫಿರೋಜ್​ಪುರಕ್ಕೆ ಹೋಗಬೇಕಿತ್ತು. ಆದರೆ ಹವಾಮಾನ ಸರಿಯಿಲ್ಲದ ಕಾರಣ ರಸ್ತೆ ಮಾರ್ಗವಾಗಿ ಹೊರಟಿದ್ದರು. ಆದರೆ ಹುಸ್ಸೇನಿವಾಲಾ ಫ್ಲೈಓವರ್​ ಬಳಿ ರೈತರು ಪ್ರತಿಭಟನೆ ನಡೆಸುತ್ತ, ರಸ್ತೆ ಬ್ಲಾಕ್​ ಮಾಡಿದ್ದ ಕಾರಣ ಅವರು ಅಲ್ಲಿ 20 ನಿಮಿಷ ಕಾಯುವಂತಾಯ್ತು. ಕೊನೆಗೂ ವಾಪಸ್​ ದೆಹಲಿಗೆ ಬಂದರು. ಈ ಘಟನೆಯೀಗ ರಾಷ್ಟಾದ್ಯಂತ ಕಳವಳಕ್ಕೆ ಕಾರಣವಾಗಿದೆ. ಭಾರತದ ಇತಿಹಾಸದಲ್ಲಿ ಪ್ರಧಾನಿ ಭದ್ರತೆ ವಿಚಾರದಲ್ಲಿ ಇಷ್ಟುದೊಡ್ಡಮಟ್ಟದಲ್ಲಿ ಲೋಪ ಎಂದಿಗೂ ಆಗಿರಲಿಲ್ಲ ಎನ್ನಲಾಗುತ್ತಿದ್ದು, ಪಂಜಾಬ್​ ಕಾಂಗ್ರೆಸ್​ ಸರ್ಕಾರದ ವಿರುದ್ಧ ತೀವ್ರ ಸ್ವರೂಪದ ಟೀಕೆ ಕೇಳಿಬರುತ್ತಿದೆ.

ಇದನ್ನೂ ಓದಿ: ಪ್ರಧಾನಮಂತ್ರಿ ಭದ್ರತೆ ಲೋಪ; ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದ ಪಂಜಾಬ್​ ಸರ್ಕಾರ

Published On - 2:41 pm, Thu, 6 January 22

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್