AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Surya Ghar Yojana: ಸೂರ್ಯ ಘರ್ ಯೋಜನೆ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಭಾರತದ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿದ್ದು, ಗುಜರಾತ್​ನಲ್ಲಿ ವಿವಿಧ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

Follow us
ನಯನಾ ರಾಜೀವ್
|

Updated on: Sep 18, 2024 | 11:56 AM

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ರಾಜಧಾನಿ ಗಾಂಧಿನಗರದಲ್ಲಿ ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಪ್ರಧಾನಿಯವರು ಬೆಳಗ್ಗೆ 10 ಗಂಟೆಗೆ ವಾವೋಲ್‌ನಲ್ಲಿರುವ ಶಾಲಿನ್-2 ಸೊಸೈಟಿಯನ್ನು ತಲುಪಿದರು ಮತ್ತು ಫೆಬ್ರವರಿ 29 ರಂದು ಪ್ರಾರಂಭಿಸಲಾದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 75,021 ಕೋಟಿ ರೂ. ಯೋಜನೆಯಡಿಯಲ್ಲಿ ತಮ್ಮ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿರುವ ಹಲವಾರು ನಿವಾಸಿಗಳೊಂದಿಗೆ ಸಂವಾದ ನಡೆಸಿದರು.

ಸುಮಾರು 20 ನಿಮಿಷಗಳ ಕಾಲ ಈ ವಸತಿ ಸಂಕೀರ್ಣದಲ್ಲಿ ಪ್ರಧಾನಿ ತಂಗಿದ್ದರು. ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಸತಿ ಗೃಹಗಳು ತಮ್ಮ ಸ್ವಂತ ವಿದ್ಯುತ್ ಉತ್ಪಾದಿಸಲು ಅನುವು ಮಾಡಿಕೊಡುವುದು ಈ ಯೋಜನೆಯ ಉದ್ದೇಶವಾಗಿದೆ.

ಸರ್ಕಾರಕ್ಕೆ ಒಟ್ಟು ವಿದ್ಯುತ್ ವೆಚ್ಚದಲ್ಲಿ ಉಳಿತಾಯವಾಗುತ್ತದೆ, ನವೀಕರಿಸಬಹುದಾದ ಶಕ್ತಿಯ ಸದ್ಬಳಕೆಯಾಗುವುದು, ಮನೆಗಳಿಗೆ ಉಚಿತ ವಿದ್ಯುತ್ ಸಿಗುವುದು. ಪ್ರಧಾನಿ ಮೋದಿ ಈ ಕುರಿತು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದು, ನಾನು ಇತ್ತೀಚೆಗೆ ಗುಜರಾತ್​ಗೆ ಭೇಟಿ ನೀಡಿದ್ದಾಗ ಶಗಶಿಭಾಯಿ ಸುತಾರ್ ಅವರ ಮನೆಗೆ ಹೋಗಿದ್ದೆ, ಅವರ ಕುಟುಂಬವು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯಿಂದ ಪ್ರಯೋಜನ ಪಡೆದಿದೆ. ನಾನು ಇತರೆ ಫಲಾನುಭವಿಗಳನ್ನು ಕೂಡ ಭೇಟಿಯಾದೆ ಅದರ ಹೈಲೈಟ್ಸ್​ ಇಲ್ಲಿದೆ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: PM Surya Ghar Yojana: ಮನೆಗಳಿಗೆ ಉಚಿತ ವಿದ್ಯುತ್ ಒದಗಿಸುವ ಪಿಎಂ ಸೂರ್ಯಘರ್ ಯೋಜನೆಯ ಪೂರ್ಣ ವಿವರ

ಯೋಜನೆಯ ಪ್ರಯೋಜನ ಪಡೆಯಲು ಮಾನದಂಡಗಳು ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು. ಸೌರ ಫಲಕಗಳನ್ನು ಅಳವಡಿಸಲು ಸೂಕ್ತವಾದ ಮೇಲ್ಛಾವಣಿಯನ್ನು ಹೊಂದಿರುವ ಮನೆಯನ್ನು ಹೊಂದಿರಬೇಕು. ಮನೆಯು ಮಾನ್ಯವಾದ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು. ಮನೆಯವರು ಸೋಲಾರ್ ಪ್ಯಾನೆಲ್‌ಗಳಿಗೆ ಬೇರೆ ಯಾವುದೇ ಸಬ್ಸಿಡಿಯನ್ನು ಪಡೆದಿರಬಾರದು.

1 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 30,000 ರೂ. ಸಬ್ಸಿಡಿ ದೊರೆಯುತ್ತಿದ್ದು, 2 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 60,000 ರೂ. ಸಬ್ಸಿಡಿ ನಿಗದಿಪಡಿಸಲಾಗಿದೆ. 3 ಕಿಲೋ ವ್ಯಾಟ್‌ ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ ಸಬ್ಸಿಡಿ ಮಿತಿ 78,000 ರೂ. ದೊರೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್