AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲತಾ ದೀದಿ ಅಗಲಿಕೆ ದುಃಖ ಶಬ್ದಗಳಲ್ಲಿ ವಿವರಿಸಲಾಗದ್ದು; ಸರಣಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಹುಟ್ಟು ಹಾಕಿದವರು. ಅವರ ಧ್ವನಿಯಲ್ಲಿ ಅಂಥಾ ಶಕ್ತಿಯಿತ್ತು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಲತಾ ದೀದಿ ಅಗಲಿಕೆ ದುಃಖ ಶಬ್ದಗಳಲ್ಲಿ ವಿವರಿಸಲಾಗದ್ದು; ಸರಣಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಿ ಶೇರ್ ಮಾಡಿಕೊಂಡಿರುವ ಫೋಟೊ
TV9 Web
| Updated By: Lakshmi Hegde|

Updated on:Feb 06, 2022 | 10:33 AM

Share

ಜನಪ್ರಿಯ ಗಾಯಕಿ ಲತಾ ಮಂಗೇಶ್ಕರ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸರಣಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ತಾವು ಲತಾ ಮಂಗೇಶ್ಕರ್ (Lata Mangeshkar)​ ಅವರೊಂದಿಗೆ ಇದ್ದ ಕ್ಷಣಗಳ ಎರಡು ಫೋಟೋ ಶೇರ್​ ಮಾಡಿಕೊಂಡಿದ್ದಾರೆ. ಲತಾ ಮಂಗೇಶ್ಕರ್ ಕಳೆದ ಹಲವು ದಿನಗಳಿಂದ ಕೊವಿಡ್​ 19 ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. 92ವರ್ಷದ ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಮೊದಲ ಟ್ವೀಟ್​​ನಲ್ಲಿ ತಾವು ಲತಾ ಮಂಗೇಶ್ವರ್​ರಿಗೆ ಸನ್ಮಾನಿಸಿದ ಫೋಟೋವೊಂದನ್ನು ಶೇರ್ ಮಾಡಿಕೊಂಡಿರುವ ಪ್ರಧಾನಮಂತ್ರಿ, ದಯೆ ಮತ್ತು ಕಾಳಜಿಯ ಪ್ರತಿರೂಪದಂತಿದ್ದ ಲತಾ ದೀದಿಯನ್ನು ಕಳೆದುಕೊಂಡ ದುಃಖವನ್ನು ನನಗೆ ಶಬ್ದಗಳಲ್ಲಿ ವಿವರಿಸಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆಯಿಂದ ಉಂಟಾದ ಶೂನ್ಯವನ್ನು ತುಂಬಲು ಸಾಧ್ಯವಿಲ್ಲ. ಅವರ ಮಧುರ ಧ್ವನಿಗೆ ಜನರನ್ನು ಮಂತ್ರಮುಗ್ಧರನ್ನಾಗಿಸುವ ಅಪ್ರತಿಮ ಶಕ್ತಿಯಿತ್ತು. ಲತಾ ಮಂಗೇಶ್ಕರ್ ಅವರು ಭಾರತೀಯ ಸಂಸ್ಕೃತಿಯ ಬಲಾಢ್ಯ ಪ್ರತಿನಿಧಿಯಾಗಿದ್ದರು. ಮುಂದಿನ ಪೀಳಿಗೆಯ ನೆನಪಲ್ಲಿ ಸದಾ ಇರುತ್ತಾರೆ ಎಂದು ಹೇಳಿದ್ದಾರೆ.

ಹಾಗೇ ಇನ್ನೊಂದು ಟ್ವೀಟ್​​ ಮಾಡಿರುವ ಪ್ರಧಾನಿ ಮೋದಿ, ಲತಾ ದೀದಿಯವರ ಹಾಡುಗಳು ವಿವಿಧ ಭಾವನೆಗಳನ್ನು ಹುಟ್ಟು ಹಾಕಿದವರು. ಅವರ ಧ್ವನಿಯಲ್ಲಿ ಅಂಥಾ ಶಕ್ತಿಯಿತ್ತು. ಭಾರತೀಯ ಚಿತ್ರರಂಗದಲ್ಲಿ ದಶಕಗಳಿಂದ ಆದ ಪರಿವರ್ತನೆಯನ್ನು ಲತಾ ಮಂಗೇಶ್ಕರ್​ ತುಂಬ ಹತ್ತಿರದಿಂದ ನೋಡಿದವರು. ಸಿನಿಮಾ ಕ್ಷೇತ್ರದಿಂದ ಆಚೆ, ಭಾರತದ ಅಭಿವೃದ್ಧಿಯೆಡೆಗೆ ತುಡಿತವನ್ನು ಹೊಂದಿದ್ದರು. ಒಂದು ಬಲಿಷ್ಠ, ಅಭಿವೃದ್ಧಿ ಹೊಂದಿದ ಭಾರತವನ್ನು ನೋಡುವುದು ಅವರ ಅತಿದೊಡ್ಡ ಬಯಕೆಯಾಗಿತ್ತು ಎಂದು ಹೇಳಿದ್ದಾರೆ.  ಲತಾ ದೀದಿಯವರಿಂದ ನಾನು ಅಪಾರ ಪ್ರೀತಿ ಪಡೆದಿದ್ದೇನೆ. ಅವರ ಪ್ರೀತಿಪಾತ್ರರಲ್ಲಿ ನಾನೂ ಒಬ್ಬನಾಗಿದ್ದು ಬಹುದೊಡ್ಡ ಗೌರವ ಎಂದು ಭಾವಿಸುತ್ತೇನೆ. ನಾನು ಅವರೊಂದಿಗೆ ಕಳೆದ ಕ್ಷಣಗಳು, ಮಾತುಕತೆಗಳನ್ನೆಂದಿಗೂ ಮರೆಯಲು ಸಾಧ್ಯವಿಲ್ಲ. ಲತಾ ದೀದಿ ನಿಧನಕ್ಕೆ ನನ್ನ ಸಂತಾಪಗಳು.  ಅವರ ಕುಟುಂದೊಟ್ಟಿಗೆ ಮಾತನಾಡಿ ಸಾಂತ್ವನ ಹೇಳಿದ್ದೇನೆ ಎಂದೂ ಪ್ರಧಾನಿ ಹೇಳಿದ್ದಾರೆ.

ಇದನ್ನೂ ಓದಿ: 36 ಭಾಷೆಗಳಲ್ಲಿ ಗಾಯನದ ಮೋಡಿ ಮಾಡಿದ್ದ ‘ಬಾಲಿವುಡ್ ನೈಟಿಂಗೇಲ್’; ಅನನ್ಯ ಸಾಧಕಿ ಲತಾ ಮಂಗೇಶ್ಕರ್ ಜೀವನಯಾನದ ಮೆಲುಕು ಇಲ್ಲಿದೆ

Published On - 10:27 am, Sun, 6 February 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!