AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಜೆಐ ಮನೆಯಲ್ಲಿ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ಟೀಕೆ; ವಿವಾದ ಬಗ್ಗೆ ಮೌನ ಮುರಿದ ಮೋದಿ

ಗಣೇಶ ಉತ್ಸವ ನಮ್ಮ ದೇಶಕ್ಕೆ ಕೇವಲ ನಂಬಿಕೆಯ ಹಬ್ಬವಲ್ಲ. ಇದು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ.ಆ ಕಾಲದಲ್ಲೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದ ಬ್ರಿಟಿಷರು ಗಣೇಶ ಉತ್ಸವವನ್ನು ದ್ವೇಷಿಸುತ್ತಿದ್ದರು. ಇಂದಿಗೂ ಸಮಾಜವನ್ನು ಒಡೆಯುವ, ಒಡೆಯುವ ಕೆಲಸದಲ್ಲಿ ನಿರತರಾಗಿರುವ ಅಧಿಕಾರ ದಾಹಿಗಳಿಗೆ ಗಣೇಶ ಪೂಜೆಗೆ ತೊಂದರೆಯಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಸಿಜೆಐ ಮನೆಯಲ್ಲಿ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ಟೀಕೆ; ವಿವಾದ ಬಗ್ಗೆ ಮೌನ ಮುರಿದ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 17, 2024 | 8:19 PM

Share

ದೆಹಲಿ ಸಪ್ಟೆಂಬರ್ 17: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಕ್ಕೆ ಕಾಂಗ್ರೆಸ್ (Congress) ಪಕ್ಷ ಟೀಕೆ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ ಗಣೇಶ ಪೂಜೆಯಲ್ಲಿ ಭಾಗವಹಿಸಿದ್ದಕ್ಕಾಗಿ ಕಾಂಗ್ರೆಸ್ ಮತ್ತು ಅವರ ಪರಿವಾರ ನನ್ನ ಮೇಲೆ ಕೋಪಗೊಂಡಿದೆ ಎಂದು ಹೇಳಿದ್ದಾರೆ. ಭುವನೇಶ್ವರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಸಿಜೆಐ ಡಿ ವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣೇಶ ಪೂಜೆ ಆಚರಣೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ವಿರೋಧ ಪಕ್ಷಗಳ ಟೀಕೆಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿ ಈ ರೀತಿ ಹೇಳಿದ್ದಾರೆ.

“ಗಣೇಶ ಉತ್ಸವ ನಮ್ಮ ದೇಶಕ್ಕೆ ಕೇವಲ ನಂಬಿಕೆಯ ಹಬ್ಬವಲ್ಲ. ಇದು ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ.ಆ ಕಾಲದಲ್ಲೂ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದ ಬ್ರಿಟಿಷರು ಗಣೇಶ ಉತ್ಸವವನ್ನು ದ್ವೇಷಿಸುತ್ತಿದ್ದರು. ಇಂದಿಗೂ ಸಮಾಜವನ್ನು ಒಡೆಯುವ, ಒಡೆಯುವ ಕೆಲಸದಲ್ಲಿ ನಿರತರಾಗಿರುವ ಅಧಿಕಾರ ದಾಹಿಗಳಿಗೆ ಗಣೇಶ ಪೂಜೆಗೆ ತೊಂದರೆಯಾಗುತ್ತಿದೆ. ನಾನು ಗಣೇಶ ಪೂಜೆಯಲ್ಲಿ ಭಾಗವಹಿಸಿದ್ದಕ್ಕಾಗಿ ಕಾಂಗ್ರೆಸ್ ಮತ್ತು ಅದರ ಪರಿವಾರ ಕೋಪಗೊಂಡಿರುವುದನ್ನು ನೀವು ನೋಡಿರಬೇಕು ಎಂದು ಹೇಳಿದ್ದಾರೆ.

ಮೋದಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಪ್ರಧಾನಿಯವರ ಭೇಟಿಯನ್ನು ಮುಖ್ಯ ನ್ಯಾಯಮೂರ್ತಿಗಳ ತವರು ರಾಜ್ಯವಾದ ಮಹಾರಾಷ್ಟ್ರದ ಮುಂಬರುವ ವಿಧಾನಸಭಾ ಚುನಾವಣೆಯೊಂದಿಗೆ ಜೋಡಿಸಲು ಪ್ರಯತ್ನಿಸಿದರು.  “ರಾಜಕೀಯದಲ್ಲಿ ನಿಜವಾದ ಭಕ್ತಿ ಮತ್ತು ಧರ್ಮದ ದುರುಪಯೋಗದ ನಡುವಿನ ವ್ಯತ್ಯಾಸವನ್ನು ಯಾರಿಂದಲೂ ಮರೆಮಾಡಲಾಗಿಲ್ಲ” ಎಂದು ವೇಣುಗೋಪಾಲ್ ಹೇಳಿದ್ದಾರೆ. “ಮಹಾರಾಷ್ಟ್ರದಲ್ಲಿ ಚುನಾವಣೆಗಳು ಸಮೀಪದಲ್ಲಿರುವಾಗ, ಜೈವಿಕವಲ್ಲದ ಪ್ರಧಾನ ಮಂತ್ರಿಯು ವಿಸ್ತೃತ ಕ್ಯಾಮೆರಾ ಸಿಬ್ಬಂದಿಯೊಂದಿಗೆ ಸಂಪೂರ್ಣ ಮಹಾರಾಷ್ಟ್ರದ ಉಡುಪಿನಲ್ಲಿ ಗಣೇಶ ಪೂಜೆಗೆ ಹೋಗಲು ನಿರ್ಧರಿಸುತ್ತಾರೆ. ಅಷ್ಟೇ ಅಲ್ಲ, ಇದು ಸಿಜೆಐ ಅವರ ಮನೆಗೆ, ನ್ಯಾಯಾಂಗ ಪ್ರತ್ಯೇಕತೆಯ ಎಲ್ಲಾ ತತ್ವಗಳಿಗೆ ವಿರುದ್ಧವಾಗಿದೆ. ಯಾವ ಸಂದೇಶ ಇಲ್ಲಿ ನೀಡಲಾಗುತ್ತಿದೆ ಎಂದು ಪ್ರಧಾನಿ ಯೋಚಿಸಲಿಲ್ಲವೇ?

ನಿಮ್ಮ ಅಯೋಗ್ಯತೆಯ ಬಗ್ಗೆ ಎದ್ದಿರುವ ನಿಜವಾದ ಪ್ರಶ್ನೆಗಳಿಂದ ವಿಮುಖರಾಗಲು ಗಣೇಶ ದೇವರನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ವೇಣುಗೋಪಾಲ್ ಹೇಳಿದ್ದಾರೆ.

ಇದನ್ನೂ ಓದಿ: ಸೆ.21-23ರವರೆಗೆ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಇದಲ್ಲದೆ ಅವರು ಆಡಳಿತಾರೂಢ ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್ ಅನ್ನು ‘ಸಾಂಸ್ಥಿಕ ಸಮಗ್ರತೆ’ ಮತ್ತು ‘ಸಾಂವಿಧಾನಿಕ ಮೌಲ್ಯಗಳ’ ಕಡೆಗಣಿಸುವ ಬಗ್ಗೆ ದಾಳಿ ಮಾಡಿದರು.  “ಈ ಕಡೆಗಣನೆಯು ಎಲ್ಲರಿಗೂ ತಿಳಿದಿದೆ. ಪ್ರಧಾನಮಂತ್ರಿಯವರು ಏಕೆ ಭೇಟಿ ನೀಡಲು ನಿರ್ಧರಿಸಿದರು ಎಂಬ ಪ್ರಶ್ನೆಗಳನ್ನು ಮತ್ತಷ್ಟು ಹುಟ್ಟುಹಾಕುತ್ತದೆ” ಎಂದು ಹಿರಿಯ ಕಾಂಗ್ರೆಸ್ ಸದಸ್ಯರು ಟೀಕಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!