AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಶೃಂಗಸಭೆಗಾಗಿ ರೋಮ್​​ಗೆ ತೆರಳಿದ ನರೇಂದ್ರ ಮೋದಿ; ಪ್ರಧಾನಿಯಾದ ಬಳಿಕ ಇದು ಮೊದಲ ಭೇಟಿ

ಜಿ20 ಶೃಂಗಸಭೆಗಾಗಿ ಇಟಲಿಗೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್​ 31ರವರೆಗೆ ಅಲ್ಲಿಯೇ ಇರಲಿದ್ದಾರೆ. ಈ ವೇಳೆ ವ್ಯಾಟಿಕನ್​ ನಗರಕ್ಕೂ ಭೇಟಿ ನೀಡುವರು.

ಜಿ20 ಶೃಂಗಸಭೆಗಾಗಿ ರೋಮ್​​ಗೆ ತೆರಳಿದ ನರೇಂದ್ರ ಮೋದಿ; ಪ್ರಧಾನಿಯಾದ ಬಳಿಕ ಇದು ಮೊದಲ ಭೇಟಿ
ರೋಮ್​​ಗೆ ಹೊರಟ ಪ್ರಧಾನಿ ಮೋದಿ
Lakshmi Hegde
|

Updated on:Oct 29, 2021 | 9:16 AM

Share

ಪ್ರಧಾನಿ ನರೇಂದ್ರ ಮೋದಿಯವರು ಜಿ20 ಶೃಂಗಸಭೆಗಾಗಿ ರೋಮ್​​ಗೆ ತೆರಳಿದ್ದಾರೆ. ಅವರು ರೋಮ್​ಗಾಗಿ ಪ್ರಯಾಣ ಬೆಳೆಸಿದ್ದು, ಇನ್ನೂ ಕೆಲವೇ ತಾಸುಗಳಲ್ಲಿ ಅಲ್ಲಿಗೆ ತಲುಪಲಿದ್ದಾರೆ. ಅಂದಹಾಗೆ ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್​​ಗೆ ಭೇಟಿ ನೀಡುತ್ತಿರುವುದು ವಿಶೇಷವೂ ಹೌದು. ನರೇಂದ್ರ ಮೋದಿಯವರು ರೋಮ್​​ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ ರಾಯಭಾರಿ ನೀನಾ ಮಲ್ಹೋತ್ರಾ ಕೂಡ ಖಚಿತ ಪಡಿಸಿದ್ದರು. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್​ಗೆ ಭೇಟಿಕೊಡುತ್ತಿದ್ದಾರೆ ಎಂದೂ ತಿಳಿಸಿದ್ದರು. 

ಬೆಳಗ್ಗೆ 9.30ರ ಹೊತ್ತಿಗೆ ರೋಮ್​ ತಲುಪಲಿರುವ ಪ್ರಧಾನಿ ಮೋದಿ, ಇಂದು ಮಧ್ಯಾಹ್ನ 3.30ಕ್ಕೆ ಅಲ್ಲಿರುವ ಗಾಂಧಿ ಪ್ರತಿಮೆ ಬಳಿ ತೆರಳಲಿದ್ದಾರೆ. ಅದಾದ ನಂತರ ಸಂಜೆ 5.30ಕ್ಕೆ ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಜಿ20 ಶೃಂಗಸಭೆಗಾಗಿ ಇಟಲಿಗೆ ಭೇಟಿ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್​ 31ರವರೆಗೆ ಅಲ್ಲಿಯೇ ಇರಲಿದ್ದಾರೆ. ಈ ವೇಳೆ ವ್ಯಾಟಿಕನ್​ ನಗರಕ್ಕೂ ಭೇಟಿ ನೀಡುವರು. ನಂತರ ಅಲ್ಲಿಂದ ಯುಕೆ (ಇಂಗ್ಲೆಂಡ್​)ಗೆ ತೆರಳುವರು. ಇನ್ನು ರೋಮ್​​ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಅವರು, ಕೊರೊನಾ ಸಾಂಕ್ರಾಮಿಕದಿಂದ ಆರೋಗ್ಯ ಚೇತರಿಕೆ ಮತ್ತು ಜಾಗತಿಕ ಆರ್ಥಿಕತೆ ಚೇತರಿಕೆ ಕಾಣುತ್ತಿರುವ ಬಗ್ಗೆ ಮಾತನಾಡಲಿದ್ದಾರೆ.  ನಂತರ ಯುಕೆಯ ಗ್ಲಾಸ್ಗೋದಲ್ಲಿ, ಹವಾಮಾನ ವೈಪರಿತ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅಗತ್ಯತೆಯ ಬಗ್ಗೆ ಸಮಗ್ರವಾಗಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಕಡಿಮೆ ನೀರು ಕುಡಿಯುತ್ತಿದ್ದೀರಾ? ಆರೋಗ್ಯದಲ್ಲಿನ ಈ ಬದಲಾವಣೆ ಬಗ್ಗೆ ಇರಲಿ ಎಚ್ಚರ

ಲೋಕ ಕಲ್ಯಾಣ, ಕೊರೊನಾ ನಿರ್ಮೂಲನೆಗಾಗಿ ರಾಚೋಟೇಶ್ವರ ಶ್ರೀಗಳಿಂದ ಸಮಾಧಿಯೋಗ; ಗಾಳಿ, ಅನ್ನ, ನೀರು ಇಲ್ಲದೆ 11 ದಿನಗಳ ಕಠಿಣ ಅನುಷ್ಠಾನ ಅಂತ್ಯ

Published On - 9:09 am, Fri, 29 October 21

ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ