Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೇರಿ ಮಾಟಿ, ಮೇರಾ ದೇಶ್’ ಭಾರತೀಯ ಯುವಕರು ಪ್ರತಿ ಗುರಿಯನ್ನು ಹೇಗೆ ಸಾಧಿಸಬಹುದು ಎಂಬುದನ್ನು ತೋರಿಸುತ್ತದೆ: ಮೋದಿ

ದಂಡಿ ಯಾತ್ರೆಯು ಜನರನ್ನು ಒಟ್ಟುಗೂಡಿಸಿತು, ಅದೇ ರೀತಿ ಆಜಾದಿ ಕಾ ಅಮೃತ್ ಮಹೋತ್ಸವವು ಜನರ ಭಾಗವಹಿಸುವಿಕೆಯ ಪ್ರಮಾಣದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿತು ಎಂದಿದ್ದಾರೆ ಮೋದಿ. ಅಮೃತ ಕಲಶಕ್ಕೆ ಮಣ್ಣನ್ನು ಅರ್ಪಿಸುವ ಹಿಂದಿನ ಕಾರಣದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಅನೇಕ ಮಹಾನ್ ನಾಗರಿಕತೆಗಳು ಕೊನೆಗೊಂಡಿವೆ. ಆದರೆ ಪ್ರಾಚೀನ ಕಾಲದಿಂದ ಇಂದಿನವರೆಗೂ ಈ ದೇಶವನ್ನು ಉಳಿಸಿದ ಪ್ರಜ್ಞೆ ಭಾರತದ ಮಣ್ಣಿನಲ್ಲಿದೆ ಎಂದು ಹೇಳಿದರು.

'ಮೇರಿ ಮಾಟಿ, ಮೇರಾ ದೇಶ್' ಭಾರತೀಯ ಯುವಕರು ಪ್ರತಿ ಗುರಿಯನ್ನು ಹೇಗೆ ಸಾಧಿಸಬಹುದು ಎಂಬುದನ್ನು ತೋರಿಸುತ್ತದೆ: ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:Oct 31, 2023 | 10:14 PM

ದೆಹಲಿ ಅಕ್ಟೋಬರ್ 31: ‘ಮೇರಿ ಮಾಟಿ ಮೇರಾ ದೇಶ್’ (Meri Maati Mera Desh )ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ಕರ್ತವ್ಯ ಪಥದಲ್ಲಿ ಅಮೃತ ಕಲಶಕ್ಕೆ ಮಣ್ಣನ್ನು ಅರ್ಪಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಮೇರಿ ಮಾಟಿ ಮೇರಾ ದೇಶ್’ ಅಭಿಯಾನವು ಭಾರತದ ಯುವಕರು ಹೇಗೆ ಒಂದಾಗಬಹುದು ಮತ್ತು ಪ್ರತಿಯೊಂದು ಗುರಿಯನ್ನು ಸಾಧಿಸಬಹುದು ಎಂಬುದಕ್ಕೆ ನೇರ ಉದಾಹರಣೆಯಾಗಿದೆ ಎಂದು ಹೇಳಿದರು.

ದಂಡಿ ಯಾತ್ರೆಯು ಜನರನ್ನು ಒಟ್ಟುಗೂಡಿಸಿತು, ಅದೇ ರೀತಿ ಆಜಾದಿ ಕಾ ಅಮೃತ್ ಮಹೋತ್ಸವವು ಜನರ ಭಾಗವಹಿಸುವಿಕೆಯ ಪ್ರಮಾಣದಲ್ಲಿ ಹೊಸ ಇತಿಹಾಸವನ್ನು ನಿರ್ಮಿಸಿತು ಎಂದಿದ್ದಾರೆ ಮೋದಿ. ಅಮೃತ ಕಲಶಕ್ಕೆ ಮಣ್ಣನ್ನು ಅರ್ಪಿಸುವ ಹಿಂದಿನ ಕಾರಣದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಅನೇಕ ಮಹಾನ್ ನಾಗರಿಕತೆಗಳು ಕೊನೆಗೊಂಡಿವೆ. ಆದರೆ ಪ್ರಾಚೀನ ಕಾಲದಿಂದ ಇಂದಿನವರೆಗೂ ಈ ದೇಶವನ್ನು ಉಳಿಸಿದ ಪ್ರಜ್ಞೆ ಭಾರತದ ಮಣ್ಣಿನಲ್ಲಿದೆ ಎಂದು ಹೇಳಿದರು.

ಪವಿತ್ರ ಮಣ್ಣು ಪ್ರೇರಣೆಯ ಚಿಲುಮೆಯಾಗಿ ಕಾರ್ಯನಿರ್ವಹಿಸುತ್ತದೆ, ‘ವಿಕಸಿತ್ ಭಾರತ’ದ ನಮ್ಮ ದೃಷ್ಟಿಯನ್ನು ಸಾಕಾರಗೊಳಿಸುವತ್ತ ನಮ್ಮ ಪ್ರಯತ್ನಗಳನ್ನು ದ್ವಿಗುಣಗೊಳಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು. ಪ್ರಧಾನಿ ಮೋದಿ ಅವರು ಯುವಕರಿಗಾಗಿ ಮೇರಾ ಯುವ ಭಾರತ್ (MY ಭಾರತ್) ವೇದಿಕೆಯನ್ನು ಪ್ರಾರಂಭಿಸಿದ್ದು, ವರ್ಚುವಲ್ ಆಗಿ ‘ಅಮೃತ್ ಮಹೋತ್ಸವ ಸ್ಮಾರಕ ಮತ್ತು ಅಮೃತ ವಾಟಿಕಾ’ದ ಅಡಿಪಾಯವನ್ನು ಹಾಕಿದರು.

“ಸ್ಮಾರಕವು ಇಂದಿನ ಐತಿಹಾಸಿಕ ಘಟನೆಯನ್ನು ಮುಂದಿನ ಪೀಳಿಗೆಗೆ ನೆನಪಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲಭಭಾಯಿ ಪಟೇಲ್ ಜನ್ಮದಿನ: ಪ್ರಧಾನಿ ಮೋದಿ ಸೇರಿ ಇತರೆ ಗಣ್ಯರಿಂದ ನಮನ

ಮೇರಿ ಮಾಟಿ ಮೇರಾ ದೇಶ್

ಅಭಿಯಾನವು ಕರ್ತವ್ಯದ ವೇಳೆ ಅತ್ಯುನ್ನತ ತ್ಯಾಗ ಮಾಡಿದ ಸೈನಿಕರಿಗೆ ಗೌರವವಾಗಿದೆ. ಜನರ ಸಹಭಾಗಿತ್ವದ ಉತ್ಸಾಹದಲ್ಲಿ (ಜನ ಭಾಗಿದಾರಿ), ಈ ಅಭಿಯಾನವು ದೇಶದಾದ್ಯಂತ ಪಂಚಾಯತ್, ಗ್ರಾಮ, ಬ್ಲಾಕ್, ನಗರ ಸ್ಥಳೀಯ ಸಂಸ್ಥೆ, ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನಡೆಸಲಾದ ಅನೇಕ ಚಟುವಟಿಕೆಗಳು ಮತ್ತು ಸಮಾರಂಭಗಳನ್ನು ಒಳಗೊಂಡಿದೆ.

ಈ ಘಟನೆಯು ಭಾರತದ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲು ಮಾರ್ಚ್ 12, 2021 ರಂದು ಪ್ರಾರಂಭವಾದ ಎರಡು ವರ್ಷಗಳ ಅಭಿಯಾನದ ‘ಆಜಾದಿ ಕಾ ಅಮೃತ್ ಮಹೋತ್ಸವ’ದ ಸಮಾರೋಪವನ್ನು ಸೂಚಿಸುತ್ತದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜಿ ಕಿಶನ್ ರೆಡ್ಡಿ ಮತ್ತು ಮೀನಾಕ್ಷಿ ಲೇಖಿ ಉಪಸ್ಥಿತರಿದ್ದರು.

‘MY ಭಾರತ್’ ವೇದಿಕೆ

ಪ್ರಧಾನಿ ನರೇಂದ್ರ ಮೋದಿ ಯುವಕರಿಗಾಗಿ ‘MY ಭಾರತ್’ ವೇದಿಕೆಯನ್ನು ಪ್ರಾರಂಭಿಸಿದ್ದಾರೆ. ಮೇರಾ ಯುವ ಭಾರತ್ (MY ಭಾರತ್) ಸ್ವಾಯತ್ತ ಸಂಸ್ಥೆಯಾಗಿದ್ದು, ಇದು ಯುವಜನರ ನೇತೃತ್ವದ ಅಭಿವೃದ್ಧಿಯ ಮೇಲೆ ಸರ್ಕಾರದ ಗಮನವನ್ನು ಕೇಂದ್ರೀಕರಿಸಲು ಸಹಾಯ ಮಾಡುತ್ತದೆ ಮತ್ತು ಯುವಕರನ್ನು ಅಭಿವೃದ್ಧಿಯ “ಸಕ್ರಿಯ ಚಾಲಕರು” ಮಾಡಲು ಸಹಾಯ ಮಾಡುತ್ತದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯ ಈ ಹಿಂದೆ ತಿಳಿಸಿದೆ. 21ನೇ ಶತಮಾನದಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ‘ನನ್ನ ಭಾರತ’ ದೊಡ್ಡ ಪಾತ್ರ ವಹಿಸಲಿದೆ ಎಂದು ಪ್ರಧಾನಿ ಹೇಳಿದರು.

ಬಳಿಕ ವೀಕ್ಷಕರೊಂದಿಗೆ ಮೋದಿ ಹಾಗೂ ಇತರ ಮುಖಂಡರು ‘ಪಂಚ ಪ್ರಾಣ’ ಪ್ರತಿಜ್ಞೆಯನ್ನೂ ಸ್ವೀಕರಿಸಿದರು. ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಈ ಸಂದರ್ಭವು “ಮಹಾ ಉತ್ಸವ” ದ ಮುಕ್ತಾಯವನ್ನು ಸೂಚಿಸುತ್ತದೆ ಮತ್ತು ಹೊಸ ಆರಂಭದ ಸಂಕಲ್ಪವನ್ನು ತರುತ್ತದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Tue, 31 October 23

ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ