AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ

ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ.

ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Sep 10, 2023 | 1:25 PM

Share

ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ. ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಹಸ್ತಾಂತರಿಸಿದರು. ಬ್ರೆಜಿಲ್ ಅಧಿಕೃತವಾಗಿ ಈ ವರ್ಷದ ಡಿಸೆಂಬರ್ 1 ರಂದು ಜಿ20ಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದೆ.

ಈ ಸಂದರ್ಭದಲ್ಲಿ ಲುಲಾ ಅವರು ಪ್ರಧಾನಿ ಮೋದಿಯನ್ನು ಅಭಿನಂದಿಸಿದರು. ಭಾರತವು ನವೆಂಬರ್​ವರೆಗೆ ಜಿ20 ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರೆಯಲಿದೆ. 2022 ರಲ್ಲಿ ಇಂಡೋನೇಷ್ಯಾ G20 ಅಧ್ಯಕ್ಷ ಸ್ಥಾನವನ್ನು ಹೊಂದಿತ್ತು. ಪ್ರಸ್ತುತ ಭಾರತವು ಅದನ್ನು ಹೊಂದಿದೆ ಮತ್ತು ಬ್ರೆಜಿಲ್ ಮುಂದಿನ ವರ್ಷಕ್ಕೆ ಅಧಿಕಾರ ವಹಿಸಿಕೊಳ್ಳಲಿದೆ. 2025ರಲ್ಲಿ ದಕ್ಷಿಣ ಆಫ್ರಿಕಾ ಜಿ20 ಅಧ್ಯಕ್ಷ ರಾಷ್ಟ್ರವಾಗಲಿದೆ.

ನಾವು ಸಂಪತ್ತು ಹೆಚ್ಚು ಕೇಂದ್ರೀಕೃತವಾಗಿರುವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ, ಅದರಲ್ಲಿ ಲಕ್ಷಾಂತರ ಮಾನವರು ಇನ್ನೂ ಹಸಿವಿನಿಂದ ಬಳಲುತ್ತಿದ್ದಾರೆ, ಅಸಮಾನತೆ ಎನ್ನುವ ಸಮಸ್ಯೆಯನ್ನು ಮೊದಲು ಪರಿಹರಿಸಬೇಕು ಎಂದು ಲುಲಾ ಹೇಳಿದ್ದಾರೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆಯು ವಿಶ್ವದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಸಾಬೀತುಪಡಿಸಿದೆ: ಜೋ ಬೈಡನ್

ಆದಾಯದ ಅಸಮಾನತೆ, ಆರೋಗ್ಯ ರಕ್ಷಣೆ, ಶಿಕ್ಷಣ, ಆಹಾರ, ಲಿಂಗ ಮತ್ತು ಜನಾಂಗದ ಪ್ರವೇಶ ಮತ್ತು ಪ್ರಾತಿನಿಧ್ಯವೂ ಈ ವೈಪರೀತ್ಯಗಳ ಮೂಲವಾಗಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:15 pm, Sun, 10 September 23

ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ