AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal Bihari Vajpayee Birthday: ಇಂದು ಅಟಲ್​ ಬಿಹಾರಿ ವಾಜಪೇಯಿ 97ನೇ ಜನ್ಮದಿನ; ಸ್ಮರಿಸಿ, ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

ಅಟಲ್​ ಬಿಹಾರಿ ವಾಜಪೇಯಿ ಅವರು 1924ರ ಡಿಸೆಂಬರ್​ 25ರಂದು ಜನಿಸಿದ್ದರು. ಪ್ರಖರ ವಾಗ್ಮಿ, ಕವಿ  ಮತ್ತು ರಾಜಕಾರಣಿ. ಅದರಲ್ಲೂ ಅಟಲ್​ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ 1998ರ ಮೇ 11ರಂದು ನಡೆಸಿದ್ದ ಪೋಖ್ರಾನ್​ ಪರಮಾಣು ಪರೀಕ್ಷೆ ಬಳಿಕ ಅದನ್ನು ಸಮರ್ಥಿಸಿಕೊಂಡ ವಾಜಪೇಯಿ ವಾಕ್ಚಾತುರ್ಯಕ್ಕೆ ಇಡೀ ದೇಶ ಬೆರಗಾಗಿತ್ತು.

Atal Bihari Vajpayee Birthday: ಇಂದು ಅಟಲ್​ ಬಿಹಾರಿ ವಾಜಪೇಯಿ 97ನೇ ಜನ್ಮದಿನ; ಸ್ಮರಿಸಿ, ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ
ಅಟಲ್​ ಬಿಹಾರಿ ವಾಜಪೇಯಿ ಮತ್ತು ಪ್ರಧಾನಿ ಮೋದಿ ಒಟ್ಟಿಗಿರುವ ಫೋಟೋ
TV9 Web
| Edited By: |

Updated on:Dec 25, 2021 | 10:31 AM

Share

ಇಂದು ಮಾಜಿ ಪ್ರಧಾನಮಂತ್ರಿ ಅಟಲ್​ ಬಿಹಾರಿ ವಾಜಪೇಯಿ(Atal Bihari Vajpayee) ಅವರ 97ನೇ ಜನ್ಮದಿನ. ಈ ಹೊತ್ತಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾಜಪೇಯಿ ಅವರನ್ನು ಸ್ಮರಿಸಿದ್ದಾರೆ.ಟ್ವೀಟ್ ಮಾಡಿರುವ ಅವರು, ಇಂದು ಅಟಲ್​ ಬಿಹಾರಿ ವಾಜಪೇಯಿ ಜನ್ಮ ದಿನ(Atal Bihari Vajpayee Birth Day). ಈ ಹೊತ್ತಲ್ಲಿ ಅವರಿಗೆ ಕೋಟಿ ಕೋಟಿ ನಮನಗಳು. ಈ ದೇಶಕ್ಕೆ ಅಟಲ್​ ಜೀ ಅವರು ಅತ್ಯಮೂಲ್ಯವಾದ ಸೇವೆ ಸಲ್ಲಿಸಿದ್ದಾರೆ. ಭಾರತವನ್ನು ಬಲಿಷ್ಠಗೊಳಿಸಿ, ಅದನ್ನು ಅಭಿವೃದ್ಧಿಗೊಳಿಸುವ ಸಲುವಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಅಭಿವೃದ್ಧಿ ಉಪಕ್ರಮಗಳು ಕೋಟ್ಯಂತರ ಭಾರತೀಯರ ಮೇಲೆ ಧನಾತ್ಮಕ ಪರಿಣಾಮ ಬೀರಿವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. 

ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನವನ್ನು ಕೇಂದ್ರ ಸರ್ಕಾರ ಉತ್ತಮ ಆಡಳಿತ ದಿನ (Good Governance Day)ವನ್ನಾಗಿ ಆಚರಿಸುತ್ತದೆ. ಅಟಲ್​ ಬಿಹಾರಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ 2014ರಿಂದ ಪ್ರತಿವರ್ಷವೂ ಡಿ.25ನ್ನು ಉತ್ತಮ ಆಡಳಿತ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದೆ. ಸರ್ಕಾರದ ಹೊಣೆಗಾರಿಕೆ, ಜವಾಬ್ದಾರಿ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಅಟಲ್​ ಬಿಹಾರಿ ವಾಜಪೇಯಿ ಅವರು 1924ರ ಡಿಸೆಂಬರ್​ 25ರಂದು ಜನಿಸಿದ್ದರು. ಪ್ರಖರ ವಾಗ್ಮಿ, ಕವಿ  ಮತ್ತು ರಾಜಕಾರಣಿ. ಅದರಲ್ಲೂ ಅಟಲ್​ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ 1998ರ ಮೇ 11ರಂದು ನಡೆಸಿದ್ದ ಪೋಖ್ರಾನ್​ ಪರಮಾಣು ಪರೀಕ್ಷೆ ಬಳಿಕ ಅದನ್ನು ಸಮರ್ಥಿಸಿಕೊಂಡ ವಾಜಪೇಯಿ ವಾಕ್ಚಾತುರ್ಯಕ್ಕೆ ಇಡೀ ದೇಶ ಬೆರಗಾಗಿತ್ತು. ಆ ದಿನವನ್ನೀಗ ರಾಷ್ಟ್ರೀಯ ತಂತ್ರಜ್ಞಾನ ದಿನವೆಂದು ಆಚರಿಸಲಾಗುತ್ತಿದೆ. ಅಂದು ಪರಮಾಣು ಪರೀಕ್ಷೆಯನ್ನು ಸಂಸತ್ತಿನಲ್ಲಿ ಸಮರ್ಥಿಸಿಕೊಂಡಿ ಅಟಲ್​ ಬಿಹಾರಿ ವಾಜಪೇಯಿ, ನಾವು ನಡೆಸಿದ ಪರಮಾಣು ಪರೀಕ್ಷೆಯನ್ನು ಕೆಲವರು ಟೀಕಿಸುತ್ತಿರುವುದು ನನಗೆ ನಿಜಕ್ಕೂ ಅಚ್ಚರಿ ತಂದಿದೆ. 1974ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿಯವರು ನ್ಯೂಕ್ಲಿಯರ್​ ಬಾಂಬ್​ ಟೆಸ್ಟ್ ನಡೆಸಿದಾಗ ನಾವು ಪ್ರತಿಪಕ್ಷದ ಸ್ಥಾನದಲ್ಲಿ ಇದ್ದೆವು. ಆದರೆ ಆ ಪರೀಕ್ಷೆಯನ್ನು ನಾವು ಸ್ವಾಗತಿಸಿದ್ದೆವು ಎಂದು ಹೇಳಿದ್ದರು.

ಅಟಲ್​ ಬಿಹಾರಿ ವಾಜಪೇಯಿ 1939ರಲ್ಲಿ ಆರ್​ಎಸ್​ಎಸ್​ ಸೇರ್ಪಡೆಯಾದರು. 1998-2004ರವರೆಗೆ ಎನ್​ಡಿಎ ಒಕ್ಕೂಟದ ನೇತೃತ್ವ ವಹಿಸಿದ್ದಾರೆ. ಹಾಗೇ, ಬಿಜೆಪಿಯಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿಯಾಗಿದ್ದಾರೆ. ಅವರು 1996ರಲ್ಲಿ ಒಮ್ಮೆ ಕೆಲವೇ ದಿನಗಳ ಕಾಲ ಪ್ರಧಾನಮಂತ್ರಿಯಾಗಿದ್ದರು. ನಂತರ 1998ರಿಂದ 2004ರ ಅವಧಿಯಲ್ಲಿ ಎರಡು ಬಾರಿ ಪ್ರಧಾನಿಯಾಗಿದ್ದರು. ಈ ಮೂಲಕ ಒಟ್ಟು ಮೂರು ಸಲ ಪ್ರಧಾನಮಂತ್ರಿ ಹುದ್ದೆಗೆ ಏರಿದ್ದಾರೆ.  ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಾಜಪೇಯಿ ನಂತರ 2018ರ ಆಗಸ್ಟ್​ 16ರಂದು ನಿಧನರಾದರು. ಆಗ ಅವರಿಗೆ 93ವರ್ಷ ವಯಸ್ಸಾಗಿತ್ತು.  ಅಟಲ್​ ಬಿಹಾರಿ ವಾಜಪೇಯಿ ಅವರಿಗೆ 2015ರಲ್ಲಿ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ಹಲವು ಜನಕಲ್ಯಾಣ ಯೋಜನೆಗಳನ್ನು ಅಟಲ್​ ಬಿಹಾರಿ ವಾಜಪೇಯಿ ಹೆಸರಲ್ಲಿ ಜಾರಿಗೊಳಿಸಿದೆ. ಅಂತರ್ಜಲ ನಿರ್ವಹಣೆ ಸುಧಾರಣೆ ಮಾಡಲು 6 ಸಾವಿರ ಕೋಟಿ ರೂ.ವೆಚ್ಚದ ಅಟಲ್ ಭೂಜಲ್​ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

ಇದನ್ನೂ ಓದಿ: Viral Video: ಮನೆಯ ಗೇಟಿನೊಳಗೆ ನುಗ್ಗಿ ನಾಯಿಯನ್ನು ಎಳೆದೊಯ್ದ ಚಿರತೆ: ವೀಡಿಯೋ ವೈರಲ್​

Published On - 9:56 am, Sat, 25 December 21

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್