AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನದ ಮೇಲಿನ ಉಗ್ರರ ದಾಳಿಗೆ 19 ವರ್ಷ; ಹೇಡಿತನದ ಕ್ರೌರ್ಯವನ್ನೆಂದೂ ಮರೆಯೋದಿಲ್ಲವೆಂದ ಪ್ರಧಾನಿ ನರೇಂದ್ರ ಮೋದಿ

2001ರ ಡಿಸೆಂಬರ್​ 13ರಂದು ಪಾಕ್​ ಮೂಲದ ಲಷ್ಕರ್​ ಎ ತೊಯ್ಬಾ (LeT) ಮತ್ತು ಜೈಷ್ ಎ ಮೊಹಮ್ಮದ್​ (JeM) ಉಗ್ರರು ತಮ್ಮ ಕಾರಿಗೆ ಗೃಹಸಚಿವಾಲಯ ಮತ್ತು ಸಂಸತ್ತಿನ ಲೇಬಲ್​ (ಸಂಸತ್ತಿನ ಆವರಣ ಪ್ರವೇಶಿಸಲು ಅನುಮತಿ ಪಡೆಯುವ ಸ್ಟಿಕರ್​) ಅಂಟಿಸಿಕೊಂಡು ಬಂದು ಭದ್ರತಾ ಸಿಬ್ಬಂದಿಯನ್ನು ಸುಲಭವಾಗಿ ನಂಬಿಸಿದ್ದರು.

ಸಂಸತ್ ಭವನದ ಮೇಲಿನ ಉಗ್ರರ ದಾಳಿಗೆ 19 ವರ್ಷ; ಹೇಡಿತನದ ಕ್ರೌರ್ಯವನ್ನೆಂದೂ ಮರೆಯೋದಿಲ್ಲವೆಂದ ಪ್ರಧಾನಿ ನರೇಂದ್ರ ಮೋದಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 13, 2020 | 10:48 AM

Share

ದೆಹಲಿ: ದೇಶದ ಶಕ್ತಿಕೇಂದ್ರ ಸಂಸತ್​ ಭವನದ ಮೇಲೆ ಉಗ್ರರ ದಾಳಿ ನಡೆದು ಇಂದಿಗೆ 19 ವರ್ಷ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ, ಟ್ವೀಟ್​ ಮಾಡಿ ಅಂದಿನ ದಾಳಿಯನ್ನು ನೆನಪಿಸಿಕೊಂಡಿದ್ದಾರೆ. ಅಂದು ಉಗ್ರರೊಂದಿಗಿನ ಹೋರಾಟದಲ್ಲಿ ಮಡಿದ ಯೋಧರು, ಪೊಲೀಸ್​ ಸಿಬ್ಬಂದಿಗೆ ಗೌರವ ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

2001ರ ಡಿಸೆಂಬರ್​ 13ರಂದು ನಮ್ಮ ಸಂಸತ್​ ಭವನದ ಮೇಲೆ ನಡೆಸಲಾದ ಹೇಡಿತನದ ದಾಳಿಯನ್ನು ನಾವೆಂದೂ ಮರೆಯುವುದಿಲ್ಲ. ಅಂದು ಸಂಸತ್ತನ್ನು ಉಳಿಸಿ, ಜನರ ಪ್ರಾಣ ಉಳಿಸಲು ತಮ್ಮ ಜೀವವನ್ನೇ ತ್ಯಾಗ ಮಾಡಿದ ಯೋಧರ ಶೌರ್ಯವನ್ನು ನೆನಪಿಸಿಕೊಳ್ಳಲೇಬೇಕು..ಅವರಿಗೆ ಸದಾ ಕೃತಜ್ಞರಾಗಿರಬೇಕು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಕರಾಳ ದಿನದ ಮೆಲುಕು 2001ರ ಡಿಸೆಂಬರ್​ 13ರಂದು ಪಾಕ್​ ಮೂಲದ ಲಷ್ಕರ್​ ಎ ತೊಯ್ಬಾ (LeT) ಮತ್ತು ಜೈಷ್ ಎ ಮೊಹಮ್ಮದ್​ (JeM) ಉಗ್ರರು ತಮ್ಮ ಕಾರಿಗೆ ಗೃಹಸಚಿವಾಲಯ ಮತ್ತು ಸಂಸತ್ತಿನ ಲೇಬಲ್​ (ಸಂಸತ್ತಿನ ಆವರಣ ಪ್ರವೇಶಿಸಲು ಅನುಮತಿ ಪಡೆಯುವ ಸ್ಟಿಕರ್​) ಅಂಟಿಸಿಕೊಂಡು ಬಂದು ಭದ್ರತಾ ಸಿಬ್ಬಂದಿಯನ್ನು ಸುಲಭವಾಗಿ ನಂಬಿಸಿದ್ದರು. AK47, ಗ್ರೆನೇಡ್​, ಪಿಸ್ತೂಲ್​ಗಳನ್ನು ತಂದು ದಾಳಿ ನಡೆಸಿದ್ದರು. ಆಗಿನ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಆಗಲೇ ಸಂಸತ್ ಭವನದಿಂದ ಹೊರಟಾಗಿತ್ತು. ಆದರೆ ಅಂದಿನ ಗೃಹಸಚಿವ ಎಲ್​.ಕೆ.ಆಡ್ವಾಣಿ ಮತ್ತು ಕೇಂದ್ರ ರಕ್ಷಣಾ ಖಾತೆಯ ರಾಜ್ಯ ಸಚಿವ ಹರಿನ್​ ಪಾಠಕ್​ ಸೇರಿ 100ಕ್ಕೂ ಹೆಚ್ಚು ರಾಜಕೀಯ ಗಣ್ಯರು ಸಂಸತ್ತಿನ ಕಟ್ಟಡದೊಳಗೆ ಇದ್ದರು.

ಮೊದಲು ಉಪರಾಷ್ಟ್ರಪತಿ ಕಿಶನ್ ಕಾಂತ್​ ಅವರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ ಉಗ್ರರನ್ನು ಅಲ್ಲಿದ್ದ ಭದ್ರತಾ ಸಿಬ್ಬಂದಿ ತಡೆದರು. ಅವರೂ ಪ್ರತಿಯಾಗಿ ಗುಂಡಿನ ದಾಳಿ ಶುರು ಮಾಡಿದರು. ಈ ಭಯಾನಕ ಘಟನೆಯಲ್ಲಿ 9 ಮಂದಿ ಮೃತಪಟ್ಟು, 22 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಉಗ್ರರು ನಡೆಸಬಹುದಾಗಿದ್ದ ಬಹುದೊಡ್ಡ ದಾಳಿಯನ್ನು ಭದ್ರತಾ ಸಿಬ್ಬಂದಿ ತಡೆದಿದ್ದರು. ಹಾಗೇ 5 ಮಂದಿ ಉಗ್ರರರನ್ನು ಹೊಡೆದುರುಳಿಸಿದ್ದರು.

ಪ್ರಕರಣದ ನಂತರ ಪೊಲೀಸರ ತನಿಖೆಯಲ್ಲಿ ಮೊಹಮ್ಮದ್​ ಅಫ್ಜಲ್​ ಗುರು, ಶೌಕತ್​ ಹುಸೇನ್​ ಗುರು, ಸೈಯದ್​ ಅಬ್ದುಲ್​ ರೆಹಮಾನ್​ ಗಿಲಾನಿ ಮತ್ತು ಶೌಕತ್​ನ ಪತ್ನಿ ಆಫ್ಸಾ ಗುರು (ನವಜೋತ್​ ಸಂಧು) ಆರೋಪಿಗಳೆಂದು ಸಾಬೀತಾಯಿತು. ಆರೇ ತಿಂಗಳಲ್ಲಿ ವಿಚಾರಣೆ ಮುಗಿಸಿದ ಕೋರ್ಟ್ ಅಫ್ಜಲ್​ ಗುರು, ಶೌಕತ್​ ಹುಸೇನ್​ ಗುರು, ಸೈಯದ್​ ಅಬ್ದುಲ್​ ರೆಹಮಾನ್​ ಗಿಲಾನಿಗೆ ಮರಣದಂಡನೆ ವಿಧಿಸಿತ್ತು. ನವಜೋತ್ ಸಂಧುಗೆ 5 ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಲಾಗಿತ್ತು.

ಮೇಲ್ಮನವಿ ಸಲ್ಲಿಸಿದ್ದ ಗಿಲಾನಿ ಪರ ಖ್ಯಾತ ವಕೀಲ ರಾಮ್​ ಜೇಠ್ಮಲಾನಿ ವಕಾಲತ್ತು ವಹಿಸಿದ್ದರು. ಗಿಲಾನಿ ನಂತರ ಬಿಡುಗಡೆಯಾದ. ಆದರೆ ಶೌಕತ್ ಮತ್ತು ಅಫ್ಜಲ್ ಗುರುವಿಗೆ ಮರಣದಂಡನೆಯಲ್ಲಿ ವಿನಾಯಿತಿ ನೀಡಿರಲಿಲ್ಲ. ಆದರೆ 9 ತಿಂಗಳ ನಂತರ ಶೌಕತ್​ ತನ್ನ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಆದ. ಆಫ್ಜಲ್​ ಗುರು 2013ರಲ್ಲಿ ನೇಣಿಗೇರಿದೆ. ಈತ ರಾಷ್ಟ್ರಪತಿ ಪ್ರಣಬ್​ ಮುಖರ್ಜಿಯವರಿಗೆ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದ. ಆದರೆ ಅವರು ನಿರಾಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಪವಾರ್​ಗೆ ಎರಡು ಬಾರಿ ಪ್ರಧಾನಿ ಹುದ್ದೆ ತಪ್ಪಿಸಿದ್ದು ಕಾಂಗ್ರೆಸ್ಸಿನ ದರಬಾರಿ ಗಣಗಳು; ಪ್ರಫುಲ್ ಪಟೇಲ್

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು