AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆಯ ಶೌರ್ಯ ಸ್ಮರಿಸಿದ ಪ್ರಧಾನಿ ಮೋದಿ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಕೂಡ ಟ್ವೀಟ್ ಮಾಡಿದ್ದು, ರಾಜ್ಯದ ಪ್ರತಿಯೊಬ್ಬರಿಗೂ ಒನಕೆ ಓಬವ್ವ ಜಯಂತಿಯ ಶುಭಾಶಯಗಳು. ಮಾತೃಭೂಮಿ ಮೇಲಿನ ಅವರ ಭಕ್ತಿ ಅನನ್ಯವಾದದ್ದು ಎಂದು ಹೇಳಿದ್ದಾರೆ.

ಒನಕೆ ಓಬವ್ವ ಜಯಂತಿ: ಕನ್ನಡದಲ್ಲೇ ಟ್ವೀಟ್​ ಮಾಡಿ ವೀರವನಿತೆಯ ಶೌರ್ಯ ಸ್ಮರಿಸಿದ ಪ್ರಧಾನಿ ಮೋದಿ
ಒನಕೆ ಓಬವ್ವನ ಪ್ರತಿಮೆ
Follow us
TV9 Web
| Updated By: Lakshmi Hegde

Updated on: Nov 11, 2021 | 10:06 AM

ಇಂದು ವೀರವನಿತೆ ಒನಕೆ ಓಬವ್ವ ಜಯಂತಿ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್​ ಮಾಡಿ ಒನಕೆ ಓಬವ್ವನ ಸ್ಮರಣೆ ಮಾಡಿದ್ದಾರೆ. 18ನೇ ಶತಮಾನದ ಪಾಳೆಗಾರ ವೀರ ಮದಕರಿ ನಾಯಕನ ಆಡಳಿತದಲ್ಲಿ ಚಿತ್ರದುರ್ಗ ಕೋಟೆಯ ಕಾವಲುಗಾರನಾಗಿದ್ದ ಕಹಳೆ ಮದ್ದಹನುಮಪ್ಪನ ಪತ್ನಿ ಒನಕೆ ಓಬವ್ವನ ಸಾಹಸ ಇತಿಹಾಸದಲ್ಲಿ ಸದಾ ಹಸಿರು. ದಾಳಿ ಮಾಡಲು ಕಳ್ಳತನದಲ್ಲಿ ನುಗ್ಗಿದ ಹೈದರಲಿ ಸೈನಿಕರನ್ನು ತನ್ನ ಒನಕೆಯಲ್ಲೇ ಕೊಂದು ಬಿಸಾಕಿ, ಕೊನೆಗೆ ವೀರ ಮರಣವನ್ನಪ್ಪಿದ ಧೀರ ಮಹಿಳೆ ಇವರು. ಒನಕೆ ಓಬವ್ವನ ಜಯಂತಿಯನ್ನು ರಾಜ್ಯಾದ್ಯಂತ ನವೆಂಬರ್​ 11ಕ್ಕೆ ಆಚರಿಸುವಂತೆ ರಾಜ್ಯ ಸರ್ಕಾರ ಅಕ್ಟೋಬರ್​ನಲ್ಲಿಯೇ ಆದೇಶ ಹೊರಡಿಸಿತ್ತು. ಕನ್ನಡ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಈ ಜಯಂತಿ ಆಚರಣೆ ನಡೆಯಲಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಇಂದು ಒನಕೆ ಓಬವ್ವ ಜಯಂತಿ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿ, ವೀರವನಿತೆ ಒಕನೆ ಓಬವ್ವ ಜಯಂತಿ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ, ಯಾರೂ ಮರೆಯಲು ಸಾಧ್ಯವಿಲ್ಲ. ಅವರು ನಾರಿಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಹಾಗೇ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಕೂಡ ಟ್ವೀಟ್ ಮಾಡಿದ್ದು, ರಾಜ್ಯದ ಪ್ರತಿಯೊಬ್ಬರಿಗೂ ಒನಕೆ ಓಬವ್ವ ಜಯಂತಿಯ ಶುಭಾಶಯಗಳು. ಮಾತೃಭೂಮಿ ಮೇಲಿನ ಅವರ ಭಕ್ತಿ ಅನನ್ಯವಾದದ್ದು ಎಂದು ಹೇಳಿದ್ದಾರೆ. ಹಾಗೇ, ಸಂಸದ ಪ್ರತಾಪ್​ ಸಿಂಹ ಮತ್ತು ಕರ್ನಾಟಕ ಬಿಜೆಪಿ ಕೂಡ ಟ್ವೀಟ್​ ಮೂಲಕ ವೀರ ವನಿತೆ ಒನಕೆ ಓಬವ್ವ ಸ್ಮರಣೆ ಮಾಡಿದೆ.

ಇದನ್ನೂ ಓದಿ: ಡಿಸೆಂಬರ್ 1 ರಿಂದ ಪರಿಷ್ಕೃತ ಆಟೋ ಬಾಡಿಗೆ ಜಾರಿ, ಚಾಲಕರಿಗೆ ಸಂತಸ ಜನಸಾಮಾನ್ಯನಿಗೆ ಇನ್ನಷ್ಟು ಹೊರೆ!

ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ