AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾತ್ಮ ಗಾಂಧಿ-ಲಾಲ್​ ಬಹದ್ದೂರ್​ ಶಾಸ್ತ್ರಿ ಜನ್ಮದಿನ; ಇಬ್ಬರೂ ನಾಯಕರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಅವರೂ ಕೂಡ ರಾಜ್​ಘಾಟ್​​ನಲ್ಲಿ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸಿದ್ದಾರೆ.

ಮಹಾತ್ಮ ಗಾಂಧಿ-ಲಾಲ್​ ಬಹದ್ದೂರ್​ ಶಾಸ್ತ್ರಿ ಜನ್ಮದಿನ; ಇಬ್ಬರೂ ನಾಯಕರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ
ವಿಜಯ ಘಾಟ್​​ನಲ್ಲಿ ಲಾಲ್​ ಬಹದ್ದೂರ್​ ಶಾಸ್ತ್ರಿಯವರಿಗೆ ಪ್ರಧಾನಿ ಮೋದಿಯವರಿಗೆ ಪುಷ್ಪ ನಮನ
TV9 Web
| Edited By: |

Updated on:Oct 02, 2021 | 9:22 AM

Share

ಇಂದು ಮಹಾತ್ಮ ಗಾಂಧಿ (Mahatma Gandhi) ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ (Lal Bahadur Shastri) ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಬ್ಬರೂ ನಾಯಕರಿಗೆ ಗೌರವ ನಮನ ಸಲ್ಲಿಸಿದರು. ಮೊದಲು ರಾಜ್​ಘಾಟ್​ಗೆ ತೆರಳಿ ಮಹಾತ್ಮ ಗಾಂಧಿಯವರಿಗೆ ಪುಷ್ಪನಮನ ಸಲ್ಲಿಸಿದ ಮೋದಿ, ನಂತರ ವಿಜಯ್​ ಘಾಟ್​​ನಲ್ಲಿ ಲಾಲ್​ ಬಹದ್ದೂರ್​ ಶಾಸ್ತ್ರಿಯವರಿಗೆ ಗೌರವ ಸಲ್ಲಿಸಿದರು. ಅದಕ್ಕೂ ಮೊದಲು ಈ ಇಬ್ಬರೂ ನಾಯಕರ ಕುರಿತಾಗಿ ಟ್ವೀಟ್​ ಮಾಡಿದ್ದರು.​

ಮಹಾತ್ಮ ಗಾಂಧಿಯವರ ಬಗ್ಗೆ ಟ್ವೀಟ್ ಮಾಡಿದ ಪಿಎಂ ಮೋದಿ, ಗಾಂಧಿ ಜಯಂತಿಯಂದು ನಾನು ಬಾಪು ಅವರಿಗೆ ತಲೆ ಬಾಗುತ್ತೇನೆ. ಅವರ ಶಾಂತಿಯ ತತ್ವಗಳು ಜಾಗತಿಕವಾಗಿ ಈಗಲೂ ಪ್ರಸ್ತುತವಾಗಿವೆ. ಹಾಗೇ, ಲಕ್ಷಾಂತರ ಜನರಿಗೆ ಶಕ್ತಿ ನೀಡುತ್ತಿವೆ ಎಂದು ಹೇಳಿದ್ದಾರೆ.  ಹಾಗೇ, ಲಾಲ್​ ಬಹದ್ದೂರ್​ ಶಾಸ್ತ್ರಿಯವರನ್ನು ಟ್ವೀಟ್ ಮೂಲಕ ಸ್ಮರಿಸಿರುವ ಅವರು, ಮಾಜಿ ಪ್ರಧಾನಿ ಲಾಲ್​ ಬಹದ್ದೂರ್​ ಶಾಸ್ತ್ರಿಯವರ ಜನ್ಮದಿನದಂದು ಅವರಿಗೆ ನಮನಗಳು. ಮೌಲ್ಯಗಳು ಮತ್ತು ತತ್ವಗಳನ್ನು ಒಳಗೊಂಡಿದ್ದ ಅವರ ಜೀವನವು ಈ ದೇಶ ವಾಸಿಗಳಿಗೆ ಸದಾಕಾಲಕ್ಕೂ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ ಎಂದು ಹೇಳಿದ್ದಾರೆ.

ಇನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್​, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಅವರೂ ಕೂಡ ರಾಜ್​ಘಾಟ್​​ನಲ್ಲಿ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾದ ಅಮಿತ್​ ಶಾ, ರಾಜನಾಥ್​ ಸಿಂಗ್​ ಸೇರಿ ಎಲ್ಲ ರಾಜಕೀಯ ಗಣ್ಯರೂ ಇಬ್ಬರೂ ಮಹಾನ್ ನಾಯಕರಿಗೆ ಗೌರವ ಸಲ್ಲಿಸಿದ್ದಾರೆ.  ಇಂದು ರಾಜನಾಥ್​ ಸಿಂಗ್​ ಲಕ್ಷದ್ವೀಪದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಹಾಗೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು  ಜಲ ಜೀವನ್ ಮಿಷನ್ ಬಗ್ಗೆ ಗ್ರಾಮ ಪಂಚಾಯತ್ ಮತ್ತು ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

ಇದನ್ನೂ ಓದಿ: ಅಂಜನಾದ್ರಿ ಪರ್ವತದಲ್ಲಿ ಅನ್ಯ ಧರ್ಮಿಯರ ಅಂಗಡಿಗಳು ಇರಬಾರದು ಎಂದಿದ್ದ ಮಧುಗಿರಿ ಮೋದಿ ವಿರುದ್ಧ ಕೇಸ್ ದಾಖಲು

ಲಾಲ್ ಬಹಾದ್ದೂರ್ ಶಾಸ್ತ್ರಿ ಜನ್ಮದಿನ; ಬಗೆಹರಿದಿಲ್ಲ ಮಾಜಿ ಪ್ರಧಾನಿಯ ಸಾವಿನ ಸುತ್ತ ಇರುವ ಈ ನಾಲ್ಕು ರಹಸ್ಯಗಳು..

Published On - 9:14 am, Sat, 2 October 21

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್