Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲಭಭಾಯಿ ಪಟೇಲ್ ಜನ್ಮದಿನ: ಪ್ರಧಾನಿ ಮೋದಿ ಸೇರಿ ಇತರೆ ಗಣ್ಯರಿಂದ ನಮನ

Sardar Vallabhbhai Patel Birth Anniversary : ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್(Sardar Vallabhbhai Patel) ಅವರ 148ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿ ಅನೇಕ ಗಣ್ಯರು ವಲ್ಲಭಭಾಯಿ​ ಪಟೇಲ್​ಗೆ ಗೌರವ ಸೂಚಿಸಿದ್ದಾರೆ. ಮಂಗಳವಾರ ಪ್ರಧಾನಿ ಮೋದಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಏತನ್ಮಧ್ಯೆ, ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಜಗದೀಪ್ ಧನ್​ಕರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅನೇಕ ಗಣ್ಯರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲಭಭಾಯಿ ಪಟೇಲ್ ಜನ್ಮದಿನ: ಪ್ರಧಾನಿ ಮೋದಿ ಸೇರಿ ಇತರೆ ಗಣ್ಯರಿಂದ ನಮನ
ಸರ್ದಾರ್ ವಲ್ಲಭಭಾಯಿ ಪಟೇಲ್Image Credit source: Amarujala.com
Follow us
ನಯನಾ ರಾಜೀವ್
|

Updated on:Oct 31, 2023 | 8:50 AM

ಇಂದು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್(Sardar Vallabhbhai Patel) ಅವರ 148ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಸೇರಿ ಅನೇಕ ಗಣ್ಯರು ವಲ್ಲಭಭಾಯಿ​ ಪಟೇಲ್​ಗೆ ಗೌರವ ಸೂಚಿಸಿದ್ದಾರೆ. ಮಂಗಳವಾರ ಪ್ರಧಾನಿ ಮೋದಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಏತನ್ಮಧ್ಯೆ, ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಜಗದೀಪ್ ಧನ್​ಕರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅನೇಕ ಗಣ್ಯರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಪಟೇಲ್ ಅವರದ್ದು ಅದಮ್ಯ ಮನೋಭಾವ, ದೂರದೃಷ್ಟಿಯ ರಾಜಕಾರಣಿ ಮತ್ತು ಅವರು ನಮ್ಮ ದೇಶದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕತೆಗೆ ಅವರ ಕೊಡುಗೆ, ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಬಂದಿದೆ, ಅವರ ಸೇವೆಗೆ ನಾವು ಸದಾ ಋಣಿಯಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದಾರೆ.

ಮತ್ತಷ್ಟು ಓದಿ: ಸರ್ದಾರ್​ ವಲ್ಲಭಬಾಯಿ ಪಟೇಲ್​ ಇನ್ನೂ ಸ್ವಲ್ಪ ಕಾಲ ಬದುಕಿದ್ದರೆ, ಗೋವಾ ವಿಮೋಚನೆ ಮತ್ತೂ ಮೊದಲೇ ಆಗುತ್ತಿತ್ತು: ಪ್ರಧಾನಿ ಮೋದಿ

ರಾಜಧಾನಿಯ ಪಟೇಲ್ ಚೌಕ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ, ಅಧ್ಯಕ್ಷ ಧಂಖರ್ ಶಾ ಮತ್ತು ಇತರರು ಅವರ ಜನ್ಮದಿನದಂದು ಭಾರತದ ಮೊದಲ ಗೃಹ ಸಚಿವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು, ಇದನ್ನು ರಾಷ್ಟ್ರೀಯ ಏಕತಾ ದಿನವಾಗಿಯೂ ಆಚರಿಸಲಾಗುತ್ತದೆ.

1875 ರಲ್ಲಿ ಗುಜರಾತ್‌ನಲ್ಲಿ ಜನಿಸಿದ ಪಟೇಲ್ ಅವರು ವಕೀಲರಾಗಿದ್ದರು, ಸ್ವತಂತ್ರ ಭಾರತದ ಮೊದಲ ಗೃಹ ಮಂತ್ರಿಯಾಗಿದ್ದರು, ನೂರಾರು ರಾಜಪ್ರಭುತ್ವದ ರಾಜ್ಯಗಳನ್ನು ಒಕ್ಕೂಟಕ್ಕೆ ಒಂದುಗೂಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಹಾಗೆಯೇ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಪ್ರಮುಖ ಕಾಂಗ್ರೆಸ್​ ನಾಯಕರಾಗಿ, ಮಹಾತ್ಮ ಗಾಂಧಿಗೆ ಉತ್ತಮ ಸಹವರ್ತಿಯೂ ಆಗಿದ್ದರು.

ಏಕತಾ ಪ್ರತಿಮೆ ಈ ಪ್ರತಿಮೆ ನಿರ್ಮಾಣ ಮಾಡಲು ತಗುಲಿದ ವೆಚ್ಚ ಬರೋಬ್ಬರಿ 2989 ಕೋಟಿ ರೂಪಾಯಿಗಳು, 1,40,000 ಕ್ಯೂಬಿಕ್​ ಮೀಟರ್​ ಸಿಮೆಂಟ್​, 18,500 ಟನ್​ ಉಕ್ಕಿನ ಸರಳು, 2,000 ಟನ್​ ಕಂಚಿನ ಹಾಳೆ ಇಲ್ಲಿ ಬಳಕೆಯಾಗಿದೆ. ಅಚ್ಚರಿ ಎಂದರೆ ಕೇವಲ 2.7 ವರ್ಷ ಅವಧಿಯಲ್ಲಿ ಈ ಪ್ರತಿಮೆಯ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, 3,000 ಕಾರ್ಮಿಕರು ಕಷ್ಟಪಟ್ಟಿದ್ದಾರೆ.

ಈ ಪ್ರತಿಮೆಯು 180 ಕಿ.ಮೀ ವೇಗದ ಗಾಳಿ ಹಾಗೂ 6.5 ತೀವ್ರತೆಯ ಭೂಕಂಪವನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. 2010ರಲ್ಲಿ ಗುಜರಾತ್​ನ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಈ ಯೋಜನೆಯ ಘೋಷಣೆ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:49 am, Tue, 31 October 23