AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನ್ ನಾಯಕ ಶಿಂಜೋ ಅಬೆ ಅಂತ್ಯಕ್ರಿಯೆ ಸಮಾರಂಭದಲ್ಲಿ ಮೋದಿ ಭಾಗವಹಿಸುವ ಸಾಧ್ಯತೆ: ವರದಿ

ನರೇಂದ್ರ ಮೋದಿ ಅವರು ಅಧಿಕೃತ ವಿದಾಯ ಸಮಾರಂಭದಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ಕ್ಯೊಡೊ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜಪಾನ್ ನಾಯಕ ಶಿಂಜೋ ಅಬೆ ಅಂತ್ಯಕ್ರಿಯೆ ಸಮಾರಂಭದಲ್ಲಿ ಮೋದಿ ಭಾಗವಹಿಸುವ ಸಾಧ್ಯತೆ: ವರದಿ
ಶಿಂಜೋ ಅಬೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Aug 24, 2022 | 5:48 PM

Share

ಟೋಕಿಯೊ: ಜಪಾನ್​​ನ ಮಾಜಿ ಪ್ರಧಾನಿ ಶಿಂಜೋ ಅಬೆಯವರ (Shinzo Abe) ಅಂತ್ಯಕ್ರಿಯೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗವಹಿಸುವ ಸಾಧ್ಯತೆ ಇದೆ ಎಂದು ಜಪಾನ್​​ನ ಮಾಧ್ಯಮಗಳು ವರದಿ ಮಾಡಿವೆ. ಸೆಪ್ಟೆಂಬರ್ 27ಕ್ಕೆ ಅಬೆ ಅವರ ಅಂತ್ಯಕ್ರಿಯೆ ಸಮಾರಂಭ ಟೋಕಿಯೊದ ಕಿಟನುಮರು ನ್ಯಾಷನಲ್ ಗಾರ್ಡನ್​​ನ ನಿಪ್ಪೋನ್ ಬುಡೋಕನ್ ಪ್ರದೇಶದಲ್ಲಿ ನಡೆಯಲಿದೆ. ನರೇಂದ್ರ ಮೋದಿ ಅವರು ಅಧಿಕೃತ ವಿದಾಯ ಸಮಾರಂಭದಲ್ಲಿಯೂ ಭಾಗಿಯಾಗಲಿದ್ದಾರೆ ಎಂದು ಕ್ಯೊಡೊ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೋದಿ ಅವರು ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರ ಜತೆ ಸಭೆ ನಡೆಸಲಿದ್ದಾರೆ ಎಂದು ಈ ಮಾಧ್ಯಮ ವರದಿ ಮಾಡಿದೆ. ಜಪಾನ್ ಭಾರತದೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದು, ಉಭಯ ರಾಷ್ಟ್ರಗಳು ಅಮೆರಿಕ ಮತ್ತು ಆಸ್ಟ್ರೇಲಿಯಾ ಜತೆ ಸಮಗ್ರ ಪಾಲುದಾರಿಕೆಯ ಕ್ವಾಡ್ ಸ್ವರೂಪದಲ್ಲಿ ಎರಡೂ ದೇಶಗಳು ಸಹಕರಿಸುತ್ತವೆ. ಮೋದಿ ಮತ್ತು ಅಬೆ ಅವರ ಅಧಿಕಾರಾವಧಿಯಲ್ಲಿ ಮತ್ತು ನಂತರವೂ ಎರಡೂ ದೇಶಗಳ ಸ್ನೇಹ ಸಂಬಂಧಗಳನ್ನು ಉಳಿಸಿಕೊಂಡರು. 2018ರಲ್ಲಿ ಮೋದಿ ಅವರು ಜಪಾನ್​​ಗೆ ಅಧಿಕೃತ ಪ್ರವಾಸ ಕೈಗೊಂಡಾಗ ಅಬೆ ಅವರು ಮೋದಿಯನ್ನು ಯಮನಾಶಿ ಪ್ರಿಫೆಕ್ಚರ್‌ನಲ್ಲಿರುವ ಮನೆಗೆ ಆಹ್ವಾನಿಸಿದ್ದರು.

ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಜಪಾನ್‌ಗೆ ಭೇಟಿ ನೀಡಿದ ಭಾಗವಾಗಿ ಜಪಾನ್ ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ಸುಮಾರು ಎರಡು ವರ್ಷಗಳ ನಂತರ ಮೇ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಅಬೆ ಅವರನ್ನು ಭೇಟಿಯಾದರು.

ಜುಲೈ 8 ರಂದು ಜಪಾನಿನ ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಅಬೆ ಮೇಲೆ ದಾಳಿ ನಡೆಸಲಾಯಿತು. ಹಿಂಬದಿಯಿಂದ ಗುಂಡು ತಗುಲಿದ ತಕ್ಷಣ ಅವರು ಪ್ರಜ್ಞಾವಸ್ಥೆಯಲ್ಲಿದ್ದರು. ಆದರೆ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾರ ಹೃದಯ ಮತ್ತು ಶ್ವಾಸಕೋಶದ ಸ್ತಂಭನದೊಂದಿಗೆ ಅವರ ಸ್ಥಿತಿ ಗಂಭೀರವಾಯಿತು. ಇದಾದ ನಂತರ ಸ್ಥಳೀಯ ಆಸ್ಪತ್ರೆಯು ಅವರು ಸಾವನ್ನಪ್ಪಿದ್ದಾರೆ.

ಅಬೆ ಅವರ ಹತ್ಯೆಯ ನಂತರ  ಪ್ರಧಾನಿ ಮೋದಿ ಭಾರತದಲ್ಲಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದರು.

ಪ್ರಧಾನಿ ಮೋದಿ ಅವರು “ಮೈ ಫ್ರೆಂಡ್, ಅಬೆ ಸ್ಯಾನ್” ಎಂಬ ಶೀರ್ಷಿಕೆಯ ಬ್ಲಾಗ್ ಅನ್ನು ಸಹ ಬರೆದಿದ್ದಾರೆ. “ಅಬೆ ಅವರ ನಿಧನದಲ್ಲಿ ಜಪಾನ್ ಮತ್ತು ಜಗತ್ತು ಒಬ್ಬ ಮಹಾನ್ ದಾರ್ಶನಿಕನನ್ನು ಕಳೆದುಕೊಂಡಿದೆ ಮತ್ತು ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ” ಎಂದು ಅವರು ಹೇಳಿದ್ದರು. ಸೆಪ್ಟೆಂಬರ್ 27 ರಂದು ಅಬೆ ಅವರ ಅಂತ್ಯಕ್ರಿಯೆಯು ವಿಶ್ವ ಯುದ್ಧ 2 ರ ನಂತರ ಮಾಜಿ ಪ್ರಧಾನಿಯ ಎರಡನೇ ಸರ್ಕಾರಿ ಅಂತ್ಯಕ್ರಿಯೆಯಾಗಿದೆ. ಮೊದಲನೆಯದನ್ನು 1967 ರಲ್ಲಿ ಶಿಗೆರು ಯೋಶಿಡಾಗಾಗಿ ನಡೆಸಲಾಗಿತ್ತು.

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ