AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವಾಗಿ ಮಾಡೋಣ; ಬಿಎಪಿಎಸ್​ ಸ್ವಯಂಸೇವಕರನ್ನು ಹುರಿದುಂಬಿಸಿದ ಮೋದಿ

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಪ್ರಯತ್ನಗಳನ್ನು ಮಾಡಬೇಕೆಂದು BAPS ಸ್ವಯಂಸೇವಕರ ಬಳಿ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ. ಕಾರ್ಯಕರ್ ಸುವರ್ಣ ಮಹೋತ್ಸವವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಜಾಗತಿಕ ಮಾನವೀಯ ಪ್ರಯತ್ನಗಳಿಗಾಗಿ ಬಿಎಪಿಎಸ್​ ಅನ್ನು ಶ್ಲಾಘಿಸಿದ್ದಾರೆ.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶವಾಗಿ ಮಾಡೋಣ; ಬಿಎಪಿಎಸ್​ ಸ್ವಯಂಸೇವಕರನ್ನು ಹುರಿದುಂಬಿಸಿದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Follow us
ಸುಷ್ಮಾ ಚಕ್ರೆ
|

Updated on:Dec 07, 2024 | 9:20 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ BAPS ಸ್ವಯಂಸೇವಕರ ಸಮರ್ಪಣೆಗಾಗಿ ಶ್ಲಾಘಿಸಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಕಾರ್ಯಕರ್ತರ ಸಮ್ಮೇಳನದಲ್ಲಿ ವರ್ಚುವಲ್ ಭಾಷಣದಲ್ಲಿ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡುವಂತೆ ಒತ್ತಾಯಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಆಧ್ಯಾತ್ಮಿಕ ಮತ್ತು ಸ್ವಯಂಸೇವಕ ಚಾಲಿತ ಸಂಸ್ಥೆಯಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥೆ (BAPS)ಯ ಸ್ವಯಂಸೇವಕರ ಸಮರ್ಪಿತ ಸೇವೆಯನ್ನು ಶ್ಲಾಘಿಸಿದ್ದಾರೆ. ಆದರೆ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡುವಂತೆ ಅವರನ್ನು ಪ್ರೋತ್ಸಾಹಿಸಿದರು.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವರ್ಚುವಲ್ ಕಾರ್ಯಕರ್ತರ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರ ಮೋದಿ, ನಿಸ್ವಾರ್ಥ ಸೇವೆಯ ಪ್ರಾಮುಖ್ಯತೆಯನ್ನು ತಿಳಿಸಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ “ಸೇವಾ ಪರಮ ಧರ್ಮ” (ಸೇವೆ ಅತ್ಯುನ್ನತ ಕರ್ತವ್ಯ) ಎಂಬ ಮಾತಿದೆ. ಭಾರತೀಯ ಸಮಾಜದಲ್ಲಿ ಸೇವೆ ಮತ್ತು ಸಹಾನುಭೂತಿಯ ಆಳವಾದ ಬೇರೂರಿರುವ ಮೌಲ್ಯಗಳನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಜೀವ ಬೆದರಿಕೆ: ಮುಂಬೈ ಪೊಲೀಸರಿಗೆ ಐಎಸ್‌ಐ ಸಂಚಿನ ಬಗ್ಗೆ ಮೆಸೇಜ್

2047ರಲ್ಲಿ 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಗುರಿಯತ್ತ ಕೆಲಸ ಮಾಡಲು ನಿರ್ದೇಶಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸೇವಾ ಆಧಾರಿತ ಪ್ರಯತ್ನಗಳನ್ನು ಮುಂದುವರಿಸಲು BAPS ಸ್ವಯಂಸೇವಕರಿಗೆ ಕರೆ ನೀಡಿದರು. ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿ ರಾಷ್ಟ್ರದ ಬೆಳವಣಿಗೆಯಲ್ಲಿ ಸಕ್ರಿಯ ಪಾತ್ರ ವಹಿಸುವಂತೆ ಒತ್ತಾಯಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದು ದೇಶಾದ್ಯಂತದ BAPS ಸಮುದಾಯದ ಸದಸ್ಯರು ಮತ್ತು ಸ್ವಯಂಸೇವಕರನ್ನು ಒಟ್ಟುಗೂಡಿಸಿತು. BAPS ಆಯೋಜಿಸಿದ ಕಾರ್ಯಕರ್ತರ ಸಮ್ಮೇಳನವು ಸಮಾಜದ ಸುಧಾರಣೆಯ ಸಂಘಟನೆಯ ಧ್ಯೇಯವನ್ನು ಉತ್ತೇಜಿಸಲು ಅವಿರತವಾಗಿ ಶ್ರಮಿಸಿದ ಸ್ವಯಂಸೇವಕರ ಸಮರ್ಪಣೆಯನ್ನು ಆಚರಿಸುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: ಕರ್ನಾಟಕಕ್ಕೆ ಮೋದಿ ಸರ್ಕಾರದಿಂದ ಮತ್ತೊಂದು ಗಿಫ್ಟ್: ಬಳ್ಳಾರಿಗೆ ಹೊಸ ನವೋದಯ ವಿದ್ಯಾಲಯ

BAPS ಸ್ವಾಮಿನಾರಾಯಣ ಸಂಸ್ಥೆಯು ನಂಬಿಕೆ, ಸೇವೆ ಮತ್ತು ಜಾಗತಿಕ ಸಾಮರಸ್ಯದ ಪ್ರಮುಖ ಹಿಂದೂ ಮೌಲ್ಯಗಳನ್ನು ಪೋಷಿಸುವ ಮೂಲಕ ಸಮಾಜದ ಕಲ್ಯಾಣಕ್ಕೆ ಬದ್ಧವಾಗಿರುವ ಆಧ್ಯಾತ್ಮಿಕ ಫೆಲೋಶಿಪ್ ಆಗಿದೆ. ವಿವಿಧ ಸಮುದಾಯ-ಆಧಾರಿತ ಕಾರ್ಯಕ್ರಮಗಳು ಮತ್ತು ಉಪಕ್ರಮಗಳ ಮೂಲಕ ಸಮಾಜಕ್ಕೆ ಧನಾತ್ಮಕವಾಗಿ ಕೊಡುಗೆ ನೀಡುವಾಗ ವೈಯಕ್ತಿಕ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಇದು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 pm, Sat, 7 December 24