AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 3ಡಿ ಮುದ್ರಿತ ಅಂಚೆ ಕಚೇರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ

PM Narendra Modi: ಬೆಂಗಳೂರಿನ ಹಲಸೂರಿನ ಕೇಂಬ್ರಿಡ್ಜ್ ಲೇಔಟ್ ಬಳಿ ಆಗಸ್ಟ್ 18ರಂದು ಉದ್ಘಾಟನೆಗೊಂಡಿರುವ ಅಂಚೆ ಕಚೇರಿ ಭಾರತದ ಮೊದಲ 3ಡಿ ಪ್ರಿಂಟೆಡ್ ಸರ್ಕಾರಿ ಕಟ್ಟಡವೆಂಬ ದಾಖಲೆಗೆ ಬಾಜನವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ 3ಡಿ ಮುದ್ರಿತ ಅಂಚೆ ಕಚೇರಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ
3ಡಿ ಪ್ರಿಂಟೆಡ್ ಪೋಸ್ಟ್ ಆಫೀಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 18, 2023 | 3:58 PM

Share

ಬೆಂಗಳೂರು, ಆಗಸ್ಟ್ 18: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ (3D Printed Post Office) ನಿರ್ಮಾಣ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಹಲಸೂರು ಬಳಿಯ ಕೇಂಬ್ರಿಡ್ಜ್ ಲೇಔಟ್​ನಲ್ಲಿ ಎಲ್ ಅಂಡ್ ಟಿ ಸಂಸ್ಥೆ 3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ನಿರ್ಮಿಸಲಾಗಿರುವ ಅಂಚೆ ಕಚೇರಿ ಬಗ್ಗೆ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಇದು ಭಾರತದಲ್ಲಿ ಯಾವುದೇ ಸರ್ಕಾರಿ ಕಟ್ಟಡವೊಂದನ್ನು 3ಡಿ ಪ್ರಿಂಟಿಂಗ್ ತಂತ್ರಜ್ಞಾನ ಬಳಸಿ ನಿರ್ಮಿಸಿದ್ದು ಇದೇ ಮೊದಲು.

‘ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್​ನಲ್ಲಿ ಭಾರತದ ಮೊದಲ 3ಡಿ ಪ್ರಿಂಟೆಡ್ ಪೋಸ್ಟ್ ಆಫೀಸ್ ಬಗ್ಗೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ಆಗುತ್ತದೆ. ನಮ್ಮ ದೇಶದ ಪ್ರಗತಿ ಮತ್ತು ನಾವೀನ್ಯತೆಗೆ ಇದು ನಿದರ್ಶನವಾಗಿದೆ. ಸ್ವಾವಲಂಬಿ ಭಾರತದ ಆಶಯಕ್ಕೆ ಇದು ದ್ಯೋತಕವಾಗಿದೆ. ಪೋಸ್ಟ್ ಆಫೀಸ್ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ಶ್ರಮಿಸಿದವರಿಗೆ ಅಭಿನಂದನೆಗಳು’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 3D Printed Post Office: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಗೆ ಎಷ್ಟು ವೆಚ್ಚ? ಇದನ್ನು ನಿರ್ಮಾಣ ಹೇಗೆ? ಇಲ್ಲಿದೆ ಡೀಟೇಲ್ಸ್

ಎಲ್ ಅಂಡ್ ಟಿ ಸಂಸ್ಥೆ 1,100 ಚದರಡಿ ಸ್ಥಳದಲ್ಲಿ 3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ಅಂಚೆ ಕಚೇರಿ ನಿರ್ಮಿಸಿದೆ. ಕೇವಲ 44 ದಿನಗಳಲ್ಲಿ ಇದನ್ನು ಕಟ್ಟಲಾಗಿದ್ದು, 23ರಿಂದ 26 ಲಕ್ಷ ರೂ ವೆಚ್ಚವಾಗಿರುವುದು ತಿಳಿದುಬಂದಿದೆ.

3ಡಿ ಮುದ್ರಿತ ಟೆಕ್ನಾಲಜಿ ಬಳಸಿ ಕಟ್ಟಡ ನಿರ್ಮಿಸಿದರೆ ವೆಚ್ಚ ಶೇ. 40ರಷ್ಟು ಕಡಿಮೆ ಆಗುತ್ತದೆ. ಎಲ್ ಅಂಡ್ ಸಂಸ್ಥೆ ತಮಿಳುನಾಡಿನ ಕಾಂಚೀಪುರಂನಲ್ಲಿ 3ಡಿ ಪ್ರಿಂಟಿಂಗ್ ಕೇಂದ್ರ ಹೊಂದಿದ್ದು ಕಟ್ಟಡದ ಹಲವು ಭಾಗಗಳನ್ನು ಅಲ್ಲಿಯೇ ತಯಾರು ಮಾಡಿ, ಬಳಿಕ ಬೆಂಗಳೂರಿಗೆ ತಂದು ಅಸೆಂಬಲ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರಿಗನ ಖಾತೆಯಿಂದ 90 ಲಕ್ಷ ಹಣ ಕಾಣದಂತೆ ಮಾಯ; ಖದೀಮರು 2 ವರ್ಷದಲ್ಲಿ5,000 ಬಾರಿ ಕನ್ನ ಹಾಕಿದರೂ ಗೊತ್ತಾಗದೇಹೋಯಿತಾ?

ಭಾರತದಲ್ಲಿ 3ಡಿ ಪ್ರಿಂಟಿಂಗ್ ಬಳಸಿ ಕಟ್ಟಡ ನಿರ್ಮಿಸಿರುವುದು ಇದೇ ಮೊದಲಲ್ಲ. ಆದರೆ, ಈ ತಂತ್ರಜ್ಞಾನದಲ್ಲಿ ಕಟ್ಟಡಲಾದ ಮೊದಲ ಸರ್ಕಾರಿ ಕಟ್ಟಡ ಎಂಬ ಶ್ರೇಯಸ್ಸು ಬೆಂಗಳೂರಿನ ಈ ಅಂಚೆ ಕಚೇರಿಯದ್ದಾಗಿದೆ. ಎಲ್ ಅಂಡ್ ಮೂರು ವರ್ಷಗಳ ಹಿಂದೆ ಈ ತಂತ್ರಜ್ಞಾನದಲ್ಲಿ ಕಟ್ಟಡವೊಂದನ್ನು ಕಟ್ಟಿತ್ತು. ವಿಶ್ವದ ಹಲವು ಕಡೆ 3ಡಿ ಪ್ರಿಂಟೆಡ್ ಟೆಕ್ನಾಲಜಿಯಲ್ಲಿ ಕಟ್ಟಡಗಳನ್ನು ಕಟ್ಟಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Fri, 18 August 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ