AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​​ರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ; ನಿಮ್ಮ ಮೆಚ್ಚುಗೆಗೆ ಹೃತ್ಪೂರ್ವಕ ಧನ್ಯವಾದ ಎಂದ ಯುಪಿ ಸಿಎಂ

ಸದ್ಯ ಉತ್ತರ ಪ್ರದೇಶ ರಾಜಕೀಯ ಕುತೂಹಲಕ್ಕೆ ಕಾರಣವಾದ ರಾಜ್ಯ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಬೆನ್ನಲ್ಲೇ ಅಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆಯೂ ಸುದ್ದಿ ಎದ್ದಿತ್ತು. ಆದರೆ ಬಿಜೆಪಿ ವರಿಷ್ಠರು ಅದನ್ನು ಅಲ್ಲಗಳೆದಿದ್ದಾರೆ.

ಯೋಗಿ ಆದಿತ್ಯನಾಥ್​​ರನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ; ನಿಮ್ಮ ಮೆಚ್ಚುಗೆಗೆ ಹೃತ್ಪೂರ್ವಕ ಧನ್ಯವಾದ ಎಂದ ಯುಪಿ ಸಿಎಂ
ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Jun 14, 2021 | 8:05 AM

Share

ದೆಹಲಿ: ಹಿರಿಯ ನಾಗರಿಕರಿಗೆ ಆರೋಗ್ಯ ಸೇವೆ, ಕಾನೂನು ನೆರವು ಸೇರಿ ಅಗತ್ಯ ಸೇವೆಗಳನ್ನು ನೀಡುವ ಸಲುವಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಸಹಾಯವಾಣಿಯನ್ನು ಪ್ರಾರಂಭಿಸಿದೆ. ಯೋಗಿ ಆದಿತ್ಯನಾಥ್​​ ಅವರ ಈ ಯೋಜನೆಗೆ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ. ಹಾಗೇ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಗಳಿದ್ದಾರೆ.

ಟ್ವೀಟ್​ ಮಾಡಿರುವ ಪಿಎಂ ಮೋದಿ, ಇದು ಅತ್ಯುತ್ತಮವಾದ ಯೋಜನೆಯಾಗಿದ್ದು, ಒಳ್ಳೆಯ ಪ್ರಾರಂಭ ಎಂದು ಶ್ಲಾಘಿಸಿದ್ದಾರೆ. ಹಾಗೇ ಸಿಎಂ ಯೋಗಿ ಆದಿತ್ಯನಾಥ್​​ರನ್ನು ಟ್ಯಾಗ್​ ಮಾಡಿದ್ದಾರೆ. ಅದಾದ ಕೆಲವೇ ಹೊತ್ತಲ್ಲಿ ಯೋಗಿ ಆದಿತ್ಯನಾಥ್​ ಪ್ರಧಾನಿ ಟ್ವೀಟ್​​ಗೆ ಪ್ರತಿಕ್ರಿಯೆ ನೀಡಿ, ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಸಬ್​ ಕಾ ಸಾಥ್​, ಸಬ್​ ಕಾ ವಿಕಾಸ್​ ಮಂತ್ರದಡಿ ಈ ಎಲ್ಡರ್​​ಲೈನ್​ ಕಾರ್ಯಕ್ರಮ ಶುರು ಮಾಡಿದೆ. ಹಿರಿಯ ನಾಗರಿಕರಿಗೆ ಅಗತ್ಯವಿರುವ ಸಹಾಯ ಮತ್ತು ಮಾನಸಿಕ ಬೆಂಬಲ ನೀಡುವುದು ಇದರ ಉದ್ದೇಶ. ನೀವಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು ತುಂಬ ಖುಷಿಯಾಗಿದೆ. ರಾಜ್ಯದ ಎಲ್ಲ ಜನರ ಪರವಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು ಎಂದು ಹೇಳಿದ್ದಾರೆ.

ಸದ್ಯ ಉತ್ತರ ಪ್ರದೇಶ ರಾಜಕೀಯ ಕುತೂಹಲಕ್ಕೆ ಕಾರಣವಾದ ರಾಜ್ಯ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಬೆನ್ನಲ್ಲೇ ಅಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆಯೂ ಸುದ್ದಿ ಎದ್ದಿತ್ತು. ಆದರೆ ಬಿಜೆಪಿ ವರಿಷ್ಠರು ಅದನ್ನು ಅಲ್ಲಗಳೆದಿದ್ದಾರೆ. ಇತ್ತೀಚೆಗೆ ಯೋಗಿ ಆದಿತ್ಯನಾಥ್​ ಜನ್ಮದಿನಕ್ಕೂ ಪ್ರಧಾನಿ ಮೋದಿ ಶುಭಕೋರಲಿಲ್ಲ ಎಂಬುದೊಂದು ವಿಷಯವೂ ದೊಡ್ಡಮಟ್ಟಕ್ಕೆ ಚರ್ಚೆಯಾಗಿತ್ತು. ಆದರೆ ಕೊವಿಡ್​ 19 ಎರಡನೇ ಅಲೆ ಉಲ್ಬಣವಾದ ನಂತರ ಮೋದಿ ಯಾರಿಗೂ ವಿಶ್​ ಮಾಡಲಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿತ್ತು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ವಾರದ ಹಿಂದೆ ಯುಪಿ ಸಿಎಂ ಯೋಗಿ, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ನಂತರ ಈ Elderline ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಅಷ್ಟಕ್ಕೂ ಹೊಸ ಹೊಸ ಯೋಜನೆಗಳನ್ನು ಪರಿಚಯಿಸುವಲ್ಲಿ ಯೋಗಿ ಆದಿತ್ಯನಾಥ್​ ಸದಾ ಮುಂದಿರುತ್ತಾರೆ ಎಂಬುದನ್ನು ಅವರು ಅಧಿಕಾರಕ್ಕೆ ಬಂದಾಗಿನಿಂದಲೂ ಸಾಬೀತು ಮಾಡುತ್ತಿದ್ದಾರೆ.

ಇದನ್ನೂ ಓದಿ: Karnataka Unlock: ಕರ್ನಾಟಕ ಅನ್​ಲಾಕ್​ ಆದರೂ ಈ ನಿಯಮಗಳು ಮುಂದುವರೆಯಲಿವೆ; ಈ ಕೆಳಗಿನ 11 ಜಿಲ್ಲೆಗಳಲ್ಲಿ ವಿಶೇಷ ಮಾರ್ಗಸೂಚಿ ಜಾರಿ

PM Narendra Modi praises Uttar Pradesh government to offer helpline facility to senior citizens

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್