Parakram Diwas 2022: ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನ, ಪರಾಕ್ರಮ ದಿವಸ್​; ಪ್ರಧಾನಿ ಮೋದಿ, ರಾಷ್ಟ್ರಪತಿಯಿಂದ ಗೌರವ ಸಲ್ಲಿಕೆ

ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರು 1897ರ ಜನವರಿ 23ರಂದು ಒಡಿಶಾದ ಕಟಕ್​​ನಲ್ಲಿ ಜನಿಸಿದರು. ಇವರ ತಂದೆ ಹೆಸರು ಜಾನಕಿನಾಥ್​ ಬೋಸ್​ ಮತ್ತು ತಾಯಿಯ ಹೆಸರು ಪ್ರಭಾವತಿ ಬೋಸ್​. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾಮಿ ವಿವೇಕಾನಂದರು ತಮ್ಮ ಅಧ್ಯಾತ್ಮ ಗುರುವೆಂದು ಭಾವಿಸಿದ್ದರು.

Parakram Diwas 2022: ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನ, ಪರಾಕ್ರಮ ದಿವಸ್​; ಪ್ರಧಾನಿ ಮೋದಿ, ರಾಷ್ಟ್ರಪತಿಯಿಂದ ಗೌರವ ಸಲ್ಲಿಕೆ
ನೇತಾಜಿ ಸುಭಾಷ್​ ಚಂದ್ರ ಬೋಸ್​
Follow us
| Updated By: Lakshmi Hegde

Updated on: Jan 23, 2022 | 11:06 AM

ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ 125ನೇ ಜನ್ಮ ವಾರ್ಷಿಕೋತ್ಸವ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇಂದ್ರ ಸಚಿವರಾದ ಅಮಿತ್​ ಶಾ, ರಾಜನಾಥ್​ ಸಿಂಗ್​ ಸೇರಿ ಹಲವು ಗಣ್ಯರು ಅವರನ್ನು ಸ್ಮರಿಸಿದ್ದಾರೆ.  ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್​​ರ ಜಯಂತಿಯಂದು ನಾನು ಅವರ ಪಾದಗಳಿಗೆ ತಲೆಬಾಗುತ್ತೇನೆ. ನೇತಾಜಿಯವರು ಈ ದೇಶಕ್ಕೆ ನೀಡಿದ ಸ್ಮರಣೀಯ ಕೊಡುಗೆಗಳ ಬಗ್ಗೆ ಪ್ರತಿ ಭಾರತೀಯನೂ ಹೆಮ್ಮೆ ಪಡಬೇಕು ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನದಂದು ಇಡೀ ದೇಶ ಅವರನ್ನು ಕೃತಜ್ಞತೆಯಿಂದ ಸ್ಮರಿಸುತ್ತಿದೆ.  ಭಾರತ ಸ್ವಾತಂತ್ರ್ಯ ಪಡೆಯಲು ಅವರು ತೆಗೆದುಕೊಂಡ ದಿಟ್ಟತನದ ನಿರ್ಧಾರಗಳು, ಆಜಾದ್​ ಹಿಂದ್​ಗಾಗಿ ಅವರಿಟ್ಟ ದೃಢಹೆಜ್ಜೆಗಳು, ಅವರನ್ನಿಂದು ರಾಷ್ಟ್ರದ ಐಕಾನ್ ಆಗಿ ರೂಪಿಸಿದೆ.  ನೇತಾಜಿ ಅವರ ತ್ಯಾಗ ಮತ್ತು ಆದರ್ಶಗಳು ಪ್ರತಿ ಭಾರತೀಯನಿಗೂ ಸ್ಫೂರ್ತಿಯಾಗಿವೆ ಎಂದು ಹೇಳಿದ್ದಾರೆ.

ಹಾಗೇ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್​ ಜನ್ಮದಿನದಂದು ನಾನು ಅವರಿಗೆ ತಲೆಬಾಗುತ್ತೇನೆ. ತಮ್ಮ ಅಸಾಧಾರಣ ದೇಶಪ್ರೇಮ, ಅದಮ್ಯ ಧೈರ್ಯ ಮತ್ತು ಅದ್ಭುತ ಮಾತುಗಳಿಂದ ಯುವಕರನ್ನು ಸಂಘಟಿಸಿ, ಪರಕೀಯರ ಆಳ್ವಿಕೆಯ ಬುನಾದಿಯನ್ನೇ ಅಲ್ಲಾಡಿಸಿದವರು.  ಮಾತೃಭೂಮಿಗಾಗಿ ಅವರು ಮಾಡಿದ ಹೋರಾಟ ಯಾವಾಗಲೂ ದೇಶಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದಿದ್ದಾರೆ.  ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಟ್ವೀಟ್ ಮಾಡಿ, ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​​ ಅವರ ಜನ್ಮದಿನ. ದೇಶಾದ್ಯಂತ ಪರಾಕ್ರಮ್​ ದಿನವನ್ನಾಗಿ ಆಚರಿಸಲಾಗುತ್ತಿದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿಯವರ ಕೊಡುಗೆಗಳು ಸದಾ ಸ್ಮರಣೀಯ ಎಂದಿದ್ದಾರೆ.

ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಸುಭಾಷ್​ ಚಂದ್ರ ಬೋಸ್​ರ ಸ್ಮರಣೆ ಮಾಡಿದ್ದಾರೆ. ಹಾಗೇ, ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನ (National Holiday) ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರು 1897ರ ಜನವರಿ 23ರಂದು ಒಡಿಶಾದ ಕಟಕ್​​ನಲ್ಲಿ ಜನಿಸಿದರು. ಇವರ ತಂದೆ ಹೆಸರು ಜಾನಕಿನಾಥ್​ ಬೋಸ್​ ಮತ್ತು ತಾಯಿಯ ಹೆಸರು ಪ್ರಭಾವತಿ ಬೋಸ್​. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾಮಿ ವಿವೇಕಾನಂದರು ತಮ್ಮ ಅಧ್ಯಾತ್ಮ ಗುರುವೆಂದು ಭಾವಿಸಿದ್ದರು. ಪ್ರಬುದ್ಧ ರಾಜಕಾರಣಿಯಾಗಿದ್ದ ಅವರು, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಬ್ರಿಟಿಷರಿಗೆ ತಿರುಗೇಟು ಕೊಡಲು ಆಜಾದ್​ ಹಿಂದ್ ಫೌಜ್​ ಎಂಬ ಮಿಲಿಟರಿ ರೆಜಿಮೆಂಟ್ ರಚಿಸಿದ್ದರು. ರಾಣಿ ಝಾನ್ಸಿ ಹೆಸರಿನಲ್ಲಿ ಮಹಿಳಾ ರೆಜಿಮೆಂಟ್​ ಕೂಡ ರೂಪಿಸಿದ್ದರು. ತಮ್ಮ ವಿಭಿನ್ನ ಮಾದರಿಯ ಸ್ವಾತಂತ್ರ್ಯ ಹೋರಾಟದಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರು ಲಕ್ಷಾಂತರ ಯುವಕರಿಗೆ ಮಾದರಿಯಾಗಿದ್ದಾರೆ. ಅವರ ಜನ್ಮದಿನವನ್ನು 2021ರಿಂದ ಪರಾಕ್ರಮ್​ ದಿವಸ್ ಎಂದು ಆಚರಿಸಲಾಗುತ್ತಿದೆ.

ಇದನ್ನೂ ಓದಿ:  Republic Day 2022: ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ