AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parakram Diwas 2022: ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನ, ಪರಾಕ್ರಮ ದಿವಸ್​; ಪ್ರಧಾನಿ ಮೋದಿ, ರಾಷ್ಟ್ರಪತಿಯಿಂದ ಗೌರವ ಸಲ್ಲಿಕೆ

ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರು 1897ರ ಜನವರಿ 23ರಂದು ಒಡಿಶಾದ ಕಟಕ್​​ನಲ್ಲಿ ಜನಿಸಿದರು. ಇವರ ತಂದೆ ಹೆಸರು ಜಾನಕಿನಾಥ್​ ಬೋಸ್​ ಮತ್ತು ತಾಯಿಯ ಹೆಸರು ಪ್ರಭಾವತಿ ಬೋಸ್​. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾಮಿ ವಿವೇಕಾನಂದರು ತಮ್ಮ ಅಧ್ಯಾತ್ಮ ಗುರುವೆಂದು ಭಾವಿಸಿದ್ದರು.

Parakram Diwas 2022: ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನ, ಪರಾಕ್ರಮ ದಿವಸ್​; ಪ್ರಧಾನಿ ಮೋದಿ, ರಾಷ್ಟ್ರಪತಿಯಿಂದ ಗೌರವ ಸಲ್ಲಿಕೆ
ನೇತಾಜಿ ಸುಭಾಷ್​ ಚಂದ್ರ ಬೋಸ್​
TV9 Web
| Updated By: Lakshmi Hegde|

Updated on: Jan 23, 2022 | 11:06 AM

Share

ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರ 125ನೇ ಜನ್ಮ ವಾರ್ಷಿಕೋತ್ಸವ. ಈ ಹೊತ್ತಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇಂದ್ರ ಸಚಿವರಾದ ಅಮಿತ್​ ಶಾ, ರಾಜನಾಥ್​ ಸಿಂಗ್​ ಸೇರಿ ಹಲವು ಗಣ್ಯರು ಅವರನ್ನು ಸ್ಮರಿಸಿದ್ದಾರೆ.  ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್​​ರ ಜಯಂತಿಯಂದು ನಾನು ಅವರ ಪಾದಗಳಿಗೆ ತಲೆಬಾಗುತ್ತೇನೆ. ನೇತಾಜಿಯವರು ಈ ದೇಶಕ್ಕೆ ನೀಡಿದ ಸ್ಮರಣೀಯ ಕೊಡುಗೆಗಳ ಬಗ್ಗೆ ಪ್ರತಿ ಭಾರತೀಯನೂ ಹೆಮ್ಮೆ ಪಡಬೇಕು ಎಂದು ಹೇಳಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್​ ಚಂದ್ರ ಬೋಸ್ ಜನ್ಮದಿನದಂದು ಇಡೀ ದೇಶ ಅವರನ್ನು ಕೃತಜ್ಞತೆಯಿಂದ ಸ್ಮರಿಸುತ್ತಿದೆ.  ಭಾರತ ಸ್ವಾತಂತ್ರ್ಯ ಪಡೆಯಲು ಅವರು ತೆಗೆದುಕೊಂಡ ದಿಟ್ಟತನದ ನಿರ್ಧಾರಗಳು, ಆಜಾದ್​ ಹಿಂದ್​ಗಾಗಿ ಅವರಿಟ್ಟ ದೃಢಹೆಜ್ಜೆಗಳು, ಅವರನ್ನಿಂದು ರಾಷ್ಟ್ರದ ಐಕಾನ್ ಆಗಿ ರೂಪಿಸಿದೆ.  ನೇತಾಜಿ ಅವರ ತ್ಯಾಗ ಮತ್ತು ಆದರ್ಶಗಳು ಪ್ರತಿ ಭಾರತೀಯನಿಗೂ ಸ್ಫೂರ್ತಿಯಾಗಿವೆ ಎಂದು ಹೇಳಿದ್ದಾರೆ.

ಹಾಗೇ ಗೃಹ ಸಚಿವ ಅಮಿತ್ ಶಾ ಅವರು ಟ್ವೀಟ್ ಮಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್​ ಜನ್ಮದಿನದಂದು ನಾನು ಅವರಿಗೆ ತಲೆಬಾಗುತ್ತೇನೆ. ತಮ್ಮ ಅಸಾಧಾರಣ ದೇಶಪ್ರೇಮ, ಅದಮ್ಯ ಧೈರ್ಯ ಮತ್ತು ಅದ್ಭುತ ಮಾತುಗಳಿಂದ ಯುವಕರನ್ನು ಸಂಘಟಿಸಿ, ಪರಕೀಯರ ಆಳ್ವಿಕೆಯ ಬುನಾದಿಯನ್ನೇ ಅಲ್ಲಾಡಿಸಿದವರು.  ಮಾತೃಭೂಮಿಗಾಗಿ ಅವರು ಮಾಡಿದ ಹೋರಾಟ ಯಾವಾಗಲೂ ದೇಶಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದಿದ್ದಾರೆ.  ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಟ್ವೀಟ್ ಮಾಡಿ, ಇಂದು ನೇತಾಜಿ ಸುಭಾಷ್​ ಚಂದ್ರ ಬೋಸ್​​ ಅವರ ಜನ್ಮದಿನ. ದೇಶಾದ್ಯಂತ ಪರಾಕ್ರಮ್​ ದಿನವನ್ನಾಗಿ ಆಚರಿಸಲಾಗುತ್ತಿದೆ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿಯವರ ಕೊಡುಗೆಗಳು ಸದಾ ಸ್ಮರಣೀಯ ಎಂದಿದ್ದಾರೆ.

ರಾಷ್ಟ್ರೀಯ ರಜಾ ದಿನವೆಂದು ಘೋಷಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಸುಭಾಷ್​ ಚಂದ್ರ ಬೋಸ್​ರ ಸ್ಮರಣೆ ಮಾಡಿದ್ದಾರೆ. ಹಾಗೇ, ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಜನ್ಮದಿನವನ್ನು ರಾಷ್ಟ್ರೀಯ ರಜಾದಿನ (National Holiday) ಎಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸಿದ್ದಾರೆ.

ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರು 1897ರ ಜನವರಿ 23ರಂದು ಒಡಿಶಾದ ಕಟಕ್​​ನಲ್ಲಿ ಜನಿಸಿದರು. ಇವರ ತಂದೆ ಹೆಸರು ಜಾನಕಿನಾಥ್​ ಬೋಸ್​ ಮತ್ತು ತಾಯಿಯ ಹೆಸರು ಪ್ರಭಾವತಿ ಬೋಸ್​. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಸ್ವಾಮಿ ವಿವೇಕಾನಂದರು ತಮ್ಮ ಅಧ್ಯಾತ್ಮ ಗುರುವೆಂದು ಭಾವಿಸಿದ್ದರು. ಪ್ರಬುದ್ಧ ರಾಜಕಾರಣಿಯಾಗಿದ್ದ ಅವರು, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಬ್ರಿಟಿಷರಿಗೆ ತಿರುಗೇಟು ಕೊಡಲು ಆಜಾದ್​ ಹಿಂದ್ ಫೌಜ್​ ಎಂಬ ಮಿಲಿಟರಿ ರೆಜಿಮೆಂಟ್ ರಚಿಸಿದ್ದರು. ರಾಣಿ ಝಾನ್ಸಿ ಹೆಸರಿನಲ್ಲಿ ಮಹಿಳಾ ರೆಜಿಮೆಂಟ್​ ಕೂಡ ರೂಪಿಸಿದ್ದರು. ತಮ್ಮ ವಿಭಿನ್ನ ಮಾದರಿಯ ಸ್ವಾತಂತ್ರ್ಯ ಹೋರಾಟದಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ ಅವರು ಲಕ್ಷಾಂತರ ಯುವಕರಿಗೆ ಮಾದರಿಯಾಗಿದ್ದಾರೆ. ಅವರ ಜನ್ಮದಿನವನ್ನು 2021ರಿಂದ ಪರಾಕ್ರಮ್​ ದಿವಸ್ ಎಂದು ಆಚರಿಸಲಾಗುತ್ತಿದೆ.

ಇದನ್ನೂ ಓದಿ:  Republic Day 2022: ಇಂದು ಪ್ರಧಾನಿ ಮೋದಿಯಿಂದ ನೇತಾಜಿ ಸುಭಾಷ್​ ಚಂದ್ರ ಬೋಸ್​ರ ಹೊಲೋಗ್ರಾಮ್​ ಪ್ರತಿಮೆ ಅನಾವರಣ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್