AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್

Happy Holi: ಖುಷಿ, ಸಂತಸ, ನಗು ಮತ್ತು ಉತ್ಸಾಹದ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲಿ ಹುರುಪು ಮತ್ತು ನವ ಚೈತನ್ಯವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ  ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್
ಹೋಳಿ ಹಬ್ಬದ ಪ್ರಯುಕ್ತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಿಕ್ ರಚಿಸಿದ ಮರಳು ಶಿಲ್ಪ ( ಕೃಪೆ: ಸುದರ್ಶನ್ ಪಟ್ನಾಯಿಕ್ ಟ್ವೀಟ್)
ರಶ್ಮಿ ಕಲ್ಲಕಟ್ಟ
|

Updated on: Mar 29, 2021 | 2:40 PM

Share

ದೆಹಲಿ: ದೇಶದ ಜನರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ ಈ ಹಬ್ಬ ಜನರ ಬದುಕಿನಲ್ಲಿ ಹೊಸ ಹುರುಪು ಮತ್ತು ಚೈತನ್ಯವನ್ನು ತುಂಬಲಿ ಎಂದು ಆಶಿಸಿದ್ದಾರೆ. ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು, ಖುಷಿ, ಸಂತಸ, ನಗು ಮತ್ತು ಉತ್ಸಾಹದ ಈ ಹಬ್ಬ ಪ್ರತಿಯೊಬ್ಬರ ಬದುಕಿನಲ್ಲಿ ಹುರುಪು ಮತ್ತು ನವ ಚೈತನ್ಯವನ್ನು ತುಂಬಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದ ಎಲ್ಲ ನಾಗರಿಕರಿಗೆ ಹೋಳಿ ಹಬ್ಬದ ಶುಭಾಶಯಗಳ. ಬಣ್ಣಗಳ ಈ ಹಬ್ಬವು ಸಾಮಾಜಿಕ ಸಾಮರಸ್ಯದ ಹಬ್ಬ. ಈ ಹಬ್ಬ ಜನರ ಬದುಕಿನಲ್ಲಿ ಖುಷಿ ಮತ್ತು ನಿರೀಕ್ಷೆಯನ್ನು ತರಲಿ. ನಮ್ಮ ದೇಶದ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಪ್ರಧಾನ ಪಾತ್ರವಹಿಸುವ ದೇಶಭಕ್ತಿಯ ಭಾವನೆಯನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ.ಎಸ್. ಜೈಶಂಕರ್ ಮೊದಲಾದ ಗಣ್ಯರು ಟ್ವಿಟರ್ ನಲ್ಲಿ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ದೇಶದ ಸಮಸ್ತ ಜನರಿಗೆ ಹೋಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬಣ್ಣಗಳ ಈ ಹಬ್ಬ ಏಕತೆ, ಸಂತೋಷ, ಶಾಂತಿ ಮತ್ತು ಎಲ್ಲರಿಗೂ ಒಳಿತು ಉಂಟುಮಾಡಲಿ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಹೋಳಿ ಹಬ್ಬದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಬಣ್ಣಗಳು ಈ ಹಬ್ಬವು ಎಲ್ಲರಿಗೂ ಸಂತೋಷ, ಆರೋಗ್ಯ ಮತ್ತು ಸಮೃದ್ದಿಯನ್ನು ತರಲಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಹೋಳಿ ಹಬ್ಬವು ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ದಿಯನ್ನು ನೀಡಲಿ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಎಲ್ಲರಿಗೂ ಹೋಳಿ ಹಬ್ಬದ ಶುಭಾಶಯ ಕೋರಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋಳಿ ಹಬ್ಬದ ಆಚರಣೆ ವೇಳೆ ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Holi Celebration 2021: ಅಮಿತಾಬ್ ಬಚ್ಚನ್ ಸೇರಿದಂತೆ ಬಾಲಿವುಡ್​ ಮಂದಿಯ ಹೋಳಿ ನೆನಪು; ಕೊರೊನಾ ಇಲ್ಲದಿದ್ದರೆ ಹೀಗಿರುತ್ತಿತ್ತು ಸಂಭ್ರಮ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!