AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬಾಮಾ ಕೇರ್​ ಬಗ್ಗೆ ಉಲ್ಲೇಖಿಸಿ ಪ್ರಧಾನಿ ಮೋದಿಯವರನ್ನು ಹೊಗಳಿದ ಕೇಂದ್ರ ಆರೋಗ್ಯ ಸಚಿವ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೊವಿಡ್​ 19 ಲಸಿಕೆ ಸೇವೆ ನಡೆಸುವಂತೆ ಮನ್​ಸುಖ್​ ಮಾಂಡವಿಯಾ ಕರೆ ಕೊಟ್ಟಿದ್ದಾರೆ.

ಒಬಾಮಾ ಕೇರ್​ ಬಗ್ಗೆ ಉಲ್ಲೇಖಿಸಿ ಪ್ರಧಾನಿ ಮೋದಿಯವರನ್ನು ಹೊಗಳಿದ ಕೇಂದ್ರ ಆರೋಗ್ಯ ಸಚಿವ
ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ
TV9 Web
| Edited By: |

Updated on: Sep 16, 2021 | 7:57 PM

Share

ದೆಹಲಿ:  ಯುಎಸ್​​ನಲ್ಲಿ ಬರಾಕ್​ ಒಬಾಮಾ ಅವರು ಅಧ್ಯಕ್ಷರಾಗಿದ್ದ ಪ್ರಾರಂಭಿಸಿದ್ದ ಒಬಾಮಾಕೇರ್ (ObamaCare)​  10 ಕೋಟಿ ಜನರಿಗೆ ಆರೋಗ್ಯ ಭದ್ರತೆ (Health Security) ಒದಗಿಸಿದ್ದರೆ, ನಮ್ಮ ಪ್ರಧಾನಂತ್ರಿ ನರೇಂದ್ರ ಮೋದಿಯವರು 10 ಕೋಟಿ ಕುಟುಂಬಗಳಿಗೆ 5 ಲಕ್ಷ ರೂಪಾಯಿಯವರೆಗಿನ ಆರೋಗ್ಯ ಭದ್ರತೆ ಒದಗಿಸಿದ್ದಾರೆ ಎಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಹೇಳಿದ್ದಾರೆ. ನಾಳೆ (ಸೆ.17) ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಹಿನ್ನೆಲೆಯಲ್ಲಿ, ಹಿಮಾಚಲಯ ಪ್ರೇಶದಲ್ಲಿ 15 ಮೊಬೈಲ್​ ಮೆಡಿಕಲ್​ ಯುನಿಟ್​ಗಳನ್ನು ಉದ್ಘಾಟಿಸಿ ಮಾತನಾಡಿದರು. 

ಯುಎಸ್​ನಲ್ಲಿ ಬರಾಕ್​ ಒಬಾಮಾ ಅಧ್ಯಕ್ಷರಾಗಿದ್ದಾಗ ಈ ಒಬಾಮಾ ಕೇರ್​  ಜಾರಿಗೆ ಬಂದಿದೆ. ಕೈಗೆಟಕುವ ಆರೈಕೆ ಕಾಯ್ದೆ (ACA)ಯನ್ನು ಯುಎಸ್​ನ 111ನೇ ಉಭಯ ಸದನಗಳ ಶಾಸಕಾಂಗದಲ್ಲಿ ಶಾಸನವಾಯಿತು. ನಂತರ 2010ರ ಮಾರ್ಚ್​ 23ರಂದು ಬರಾಕ್​ ಒಬಾಮಾ ಸಹಿ ಮಾಡುವ ಮೂಲಕ ಕಾನೂನು ಆಗಿದೆ. ಇದು ಬಡವರಿಗೂ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ವ್ಯವಸ್ಥೆಯಾಗಿದ್ದು, ಅನೇಕರಿಗೆ ಅನುಕೂಲ ಮಾಡಿಕೊಟ್ಟಿದೆ. ಇಂದು ಮಾತನಾಡಿದ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಯುಎಸ್​ನ ಒಬಾಮಾ ಕೇರ್​ ನೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಯುಷ್ಮಾನ್​ ಭಾರತ್​ ಯೋಜನೆಯನ್ನು ಹೋಲಿಸಿದರು.

ಕೆಲವು ವರ್ಷಗಳ ಹಿಂದೆ ಯುಎಸ್​ನಲ್ಲಿ ಒಬಾಮಾಕೇರ್​ ಜಾರಿಯಾಯಿತು. ಅದು ಸುಮಾರು 10 ಕೋಟಿ ಜನರಿಗೆ ಆರೋಗ್ಯ ಭದ್ರತೆ ಒದಗಿಸುವ ಗುರಿ ಹೊಂದಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು 10 ಕೋಟಿ ಕುಟುಂಬಗಳಿಗೆ ಅಂದರೆ 50 ಕೋಟಿ ಜನರಿಗೆ ವಿಮಾ ಸೌಲಭ್ಯ ಒದಗಿಸಿದ್ದಾರೆ ಎಂದು ಹೊಗಳಿದರು.

ಕೊವಿಡ್​ 19 ಲಸಿಕಾ ಸೇವೆಗೆ ಕರೆ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೊವಿಡ್​ 19 ಲಸಿಕೆ ಸೇವೆ ನಡೆಸುವಂತೆ ಮನ್​ಸುಖ್​ ಮಾಂಡವಿಯಾ ಕರೆ ಕೊಟ್ಟಿದ್ದಾರೆ. ಅಂದರೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ವ್ಯಾಕ್ಸಿನ್​ ಫಾರ್​ ಆಲ್​, ಫ್ರೀ ವ್ಯಾಕ್ಸಿನ್​ (ಎಲ್ಲರಿಗೂ ಕೊರೊನಾ ಲಸಿಕೆ, ಉಚಿತ ಲಸಿಕೆ) ಎಂಬ ಉಡುಗೋರೆ ನೀಡಲಾಗಿದೆ. ಈಗಾಗಲೇ ವ್ಯಾಕ್ಸಿನ್​ ಪಡೆದವರು ತಮ್ಮ ಪ್ರೀತಿಪಾತ್ರರಿಗೆ, ಲಸಿಕೆಯನ್ನು ಪಡೆಯದವರಿಗೆ ಕೊವಿಡ್​ 19 ಲಸಿಕೆ ಹಾಕಿಸಲು ಮುಂದಾಗಬೇಕು ಎಂದು ಮನ್​ಸುಖ್​ ಮಾಂಡವಿಯಾ ಈ ಹಿಂದೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಿಯುಸಿಯಲ್ಲಿ ಕಲೆ, ವಾಣಿಜ್ಯ ವಿಭಾಗದಲ್ಲಿ ಓದಿದ್ದರೂ ಐಐಟಿಗೆ ಸೇರಲು ಇದೆ ಅವಕಾಶ

ಯಾದಗಿರಿಯ ಕಳೆಬೆಳಗುಂದಿಯಲ್ಲಿರುವ ವೀರಭದ್ರ ದೇವಸ್ಥಾನವನ್ನು ಬನದೇಶ್ವರ ಗುಡಿ ಅಂತ ಕರೆಯಲು ಕಾರಣವಿದೆ

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ