AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬಾಮಾ ಕೇರ್​ ಬಗ್ಗೆ ಉಲ್ಲೇಖಿಸಿ ಪ್ರಧಾನಿ ಮೋದಿಯವರನ್ನು ಹೊಗಳಿದ ಕೇಂದ್ರ ಆರೋಗ್ಯ ಸಚಿವ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೊವಿಡ್​ 19 ಲಸಿಕೆ ಸೇವೆ ನಡೆಸುವಂತೆ ಮನ್​ಸುಖ್​ ಮಾಂಡವಿಯಾ ಕರೆ ಕೊಟ್ಟಿದ್ದಾರೆ.

ಒಬಾಮಾ ಕೇರ್​ ಬಗ್ಗೆ ಉಲ್ಲೇಖಿಸಿ ಪ್ರಧಾನಿ ಮೋದಿಯವರನ್ನು ಹೊಗಳಿದ ಕೇಂದ್ರ ಆರೋಗ್ಯ ಸಚಿವ
ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ
TV9 Web
| Updated By: Lakshmi Hegde|

Updated on: Sep 16, 2021 | 7:57 PM

Share

ದೆಹಲಿ:  ಯುಎಸ್​​ನಲ್ಲಿ ಬರಾಕ್​ ಒಬಾಮಾ ಅವರು ಅಧ್ಯಕ್ಷರಾಗಿದ್ದ ಪ್ರಾರಂಭಿಸಿದ್ದ ಒಬಾಮಾಕೇರ್ (ObamaCare)​  10 ಕೋಟಿ ಜನರಿಗೆ ಆರೋಗ್ಯ ಭದ್ರತೆ (Health Security) ಒದಗಿಸಿದ್ದರೆ, ನಮ್ಮ ಪ್ರಧಾನಂತ್ರಿ ನರೇಂದ್ರ ಮೋದಿಯವರು 10 ಕೋಟಿ ಕುಟುಂಬಗಳಿಗೆ 5 ಲಕ್ಷ ರೂಪಾಯಿಯವರೆಗಿನ ಆರೋಗ್ಯ ಭದ್ರತೆ ಒದಗಿಸಿದ್ದಾರೆ ಎಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಹೇಳಿದ್ದಾರೆ. ನಾಳೆ (ಸೆ.17) ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನದ ಹಿನ್ನೆಲೆಯಲ್ಲಿ, ಹಿಮಾಚಲಯ ಪ್ರೇಶದಲ್ಲಿ 15 ಮೊಬೈಲ್​ ಮೆಡಿಕಲ್​ ಯುನಿಟ್​ಗಳನ್ನು ಉದ್ಘಾಟಿಸಿ ಮಾತನಾಡಿದರು. 

ಯುಎಸ್​ನಲ್ಲಿ ಬರಾಕ್​ ಒಬಾಮಾ ಅಧ್ಯಕ್ಷರಾಗಿದ್ದಾಗ ಈ ಒಬಾಮಾ ಕೇರ್​  ಜಾರಿಗೆ ಬಂದಿದೆ. ಕೈಗೆಟಕುವ ಆರೈಕೆ ಕಾಯ್ದೆ (ACA)ಯನ್ನು ಯುಎಸ್​ನ 111ನೇ ಉಭಯ ಸದನಗಳ ಶಾಸಕಾಂಗದಲ್ಲಿ ಶಾಸನವಾಯಿತು. ನಂತರ 2010ರ ಮಾರ್ಚ್​ 23ರಂದು ಬರಾಕ್​ ಒಬಾಮಾ ಸಹಿ ಮಾಡುವ ಮೂಲಕ ಕಾನೂನು ಆಗಿದೆ. ಇದು ಬಡವರಿಗೂ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ವ್ಯವಸ್ಥೆಯಾಗಿದ್ದು, ಅನೇಕರಿಗೆ ಅನುಕೂಲ ಮಾಡಿಕೊಟ್ಟಿದೆ. ಇಂದು ಮಾತನಾಡಿದ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ, ಯುಎಸ್​ನ ಒಬಾಮಾ ಕೇರ್​ ನೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಯುಷ್ಮಾನ್​ ಭಾರತ್​ ಯೋಜನೆಯನ್ನು ಹೋಲಿಸಿದರು.

ಕೆಲವು ವರ್ಷಗಳ ಹಿಂದೆ ಯುಎಸ್​ನಲ್ಲಿ ಒಬಾಮಾಕೇರ್​ ಜಾರಿಯಾಯಿತು. ಅದು ಸುಮಾರು 10 ಕೋಟಿ ಜನರಿಗೆ ಆರೋಗ್ಯ ಭದ್ರತೆ ಒದಗಿಸುವ ಗುರಿ ಹೊಂದಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯವರು 10 ಕೋಟಿ ಕುಟುಂಬಗಳಿಗೆ ಅಂದರೆ 50 ಕೋಟಿ ಜನರಿಗೆ ವಿಮಾ ಸೌಲಭ್ಯ ಒದಗಿಸಿದ್ದಾರೆ ಎಂದು ಹೊಗಳಿದರು.

ಕೊವಿಡ್​ 19 ಲಸಿಕಾ ಸೇವೆಗೆ ಕರೆ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕೊವಿಡ್​ 19 ಲಸಿಕೆ ಸೇವೆ ನಡೆಸುವಂತೆ ಮನ್​ಸುಖ್​ ಮಾಂಡವಿಯಾ ಕರೆ ಕೊಟ್ಟಿದ್ದಾರೆ. ಅಂದರೆ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ವ್ಯಾಕ್ಸಿನ್​ ಫಾರ್​ ಆಲ್​, ಫ್ರೀ ವ್ಯಾಕ್ಸಿನ್​ (ಎಲ್ಲರಿಗೂ ಕೊರೊನಾ ಲಸಿಕೆ, ಉಚಿತ ಲಸಿಕೆ) ಎಂಬ ಉಡುಗೋರೆ ನೀಡಲಾಗಿದೆ. ಈಗಾಗಲೇ ವ್ಯಾಕ್ಸಿನ್​ ಪಡೆದವರು ತಮ್ಮ ಪ್ರೀತಿಪಾತ್ರರಿಗೆ, ಲಸಿಕೆಯನ್ನು ಪಡೆಯದವರಿಗೆ ಕೊವಿಡ್​ 19 ಲಸಿಕೆ ಹಾಕಿಸಲು ಮುಂದಾಗಬೇಕು ಎಂದು ಮನ್​ಸುಖ್​ ಮಾಂಡವಿಯಾ ಈ ಹಿಂದೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪಿಯುಸಿಯಲ್ಲಿ ಕಲೆ, ವಾಣಿಜ್ಯ ವಿಭಾಗದಲ್ಲಿ ಓದಿದ್ದರೂ ಐಐಟಿಗೆ ಸೇರಲು ಇದೆ ಅವಕಾಶ

ಯಾದಗಿರಿಯ ಕಳೆಬೆಳಗುಂದಿಯಲ್ಲಿರುವ ವೀರಭದ್ರ ದೇವಸ್ಥಾನವನ್ನು ಬನದೇಶ್ವರ ಗುಡಿ ಅಂತ ಕರೆಯಲು ಕಾರಣವಿದೆ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!