AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ಪತ್ನಿ ಜತೆ ವಡಾ ಪಾವ್ ಸವಿದ ಜಪಾನ್ ರಾಯಭಾರಿ ಮೋದಿ ಹೀಗಂದ್ರು

ಭಾರತದಲ್ಲಿ ಫಾಸ್ಟ್​ಫುಡ್ ತುಂಬಾ ಫೇಮಸ್, ಇಲ್ಲಿನ ಪ್ರತಿಯೊಂದು ನಗರದಲ್ಲಿಯೂ ಅದರದ್ದೇ ಆದ ವಿಶಿಷ್ಟ ತಿನಿಸುಗಳನ್ನು ಕಾಣಬಹುದು, ವಿದೇಶಿ ನಾಯಕರಿಗೂ ನಮ್ಮ ದೇಶದ ಆಹಾರವೆಂದರೆ ಅಚ್ಚು ಮೆಚ್ಚು.

ಪುಣೆಯಲ್ಲಿ ಪತ್ನಿ ಜತೆ ವಡಾ ಪಾವ್ ಸವಿದ ಜಪಾನ್ ರಾಯಭಾರಿ ಮೋದಿ ಹೀಗಂದ್ರು
ಜಪಾನ್ ರಾಯಭಾರಿ
ನಯನಾ ರಾಜೀವ್
|

Updated on:Jun 11, 2023 | 2:44 PM

Share

ಭಾರತದಲ್ಲಿ ಫಾಸ್ಟ್​ಫುಡ್ ತುಂಬಾ ಫೇಮಸ್, ಇಲ್ಲಿನ ಪ್ರತಿಯೊಂದು ನಗರದಲ್ಲಿಯೂ ಅದರದ್ದೇ ಆದ ವಿಶಿಷ್ಟ ತಿನಿಸುಗಳನ್ನು ಕಾಣಬಹುದು, ವಿದೇಶಿ ನಾಯಕರಿಗೂ ನಮ್ಮ ದೇಶದ ಆಹಾರವೆಂದರೆ ಅಚ್ಚು ಮೆಚ್ಚು. ಹಾಗೆಯೇ ಜಪಾನ್ ರಾಯಭಾರಿ ಹಿರೋಶಿ ಸುಜುಕಿ ಅವರು ಪುಣೆಯಲ್ಲಿ ತಮ್ಮ ಪತ್ನಿಯೊಂದಿಗೆ ವಡಾ ಪಾವ್ ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ಪತ್ನಿ ಜತೆ ವಡಾ ಪಾವ್(Vada Pav) ತಿನ್ನುವ ಸ್ಪರ್ಧೆಯಲ್ಲಿ ಸೋತಿದ್ದೇನೆ ಎನ್ನುವ ವಿಡಿಯೋವನ್ನು ಪೋಸ್ಟ್​ ಮಾಡಿದ್ದಾರೆ.

ಸ್ವತಃ ಜಪಾನ್ ರಾಯಭಾರಿ ಸುಜುಕಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಪತ್ನಿ ನನ್ನನ್ನು ಸೋಲಿಸಿದ್ದಾಳೆ ಎಂದು ಬರೆದುಕೊಂಡಿದ್ದಾರೆ. ಸುಜುಕಿಯ ಈ ಟ್ವೀಟ್‌ಗೆ ಪ್ರಧಾನಿ ಮೋದಿ ಕೂಡ ಪ್ರತಿಕ್ರಿಯಿಸಿದ್ದಾರೆ.

ಸೋತಿದ್ದಕ್ಕೆ ಬೇಸರ ಪಡಬೇಡಿ, ನೀವು ಭಾರತೀಯ ತಿನಿಸುಗಳನ್ನು ಆನಂದಿಸುವುದನ್ನು ನೋಡಲು ಸಂತೋಷವಾಗುತ್ತದೆ, ಇಂತಹ ವಿಡಿಯೋಗಳು ಮತ್ತಷ್ಟು ಬರಲಿ ಎಂದಿದ್ದಾರೆ.

ಇದೊಂದು ಸ್ಪರ್ಧೆಯಲ್ಲಿ ನೀವು ಸೋತರೂ ಪರವಾಗಿಲ್ಲ, ಮಿಸ್ಟರ್ ರಾಯಭಾರಿ. ನೀವು ಭಾರತದ ತಿನಿಸುಗಳ ವೈವಿಧ್ಯತೆಯನ್ನು ಆನಂದಿಸುತ್ತಿರುವುದನ್ನು ಮತ್ತು ಅಂತಹ ವಿನೂತನ ರೀತಿಯಲ್ಲಿ ಅದನ್ನು ಪ್ರಸ್ತುತಪಡಿಸುವುದನ್ನು ನೋಡಲು ಸಂತೋಷವಾಗುತ್ತಿದೆ, ಇಂತಹ ವೀಡಿಯೊಗಳು ಬರುತ್ತಿರಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾರ್ಯಕ್ರಮಕ್ಕಾಗಿ ಪುಣೆಗೆ ಭೇಟಿ ನೀಡಿದಾಗ, ಜಪಾನ್ ರಾಯಭಾರಿ ಹಿರೋಷಿ ಸುಜುಕಿ ಅವರು ಮಹಾರಾಷ್ಟ್ರ ಶೈಲಿಯ ಬೀದಿ ಆಹಾರವನ್ನು ಪ್ರಯತ್ನಿಸಿದರು. ಸ್ವಲ್ಪ ದಿನಗಳ ಹಿಂದೆ ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಕೂಡ ಭಾರತೀಯ ತಿನಿಸುಗಳನ್ನು ಆನಂದಿಸಿದ್ದರು, ಹೈದರಾಬಾದಿ ಗೋಸ್ಟ್​ ಬಿರಿಯಾನಿ ಸವಿದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:43 pm, Sun, 11 June 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ