AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಣೆಯಲ್ಲಿ ಪತ್ನಿ ಜತೆ ವಡಾ ಪಾವ್ ಸವಿದ ಜಪಾನ್ ರಾಯಭಾರಿ ಮೋದಿ ಹೀಗಂದ್ರು

ಭಾರತದಲ್ಲಿ ಫಾಸ್ಟ್​ಫುಡ್ ತುಂಬಾ ಫೇಮಸ್, ಇಲ್ಲಿನ ಪ್ರತಿಯೊಂದು ನಗರದಲ್ಲಿಯೂ ಅದರದ್ದೇ ಆದ ವಿಶಿಷ್ಟ ತಿನಿಸುಗಳನ್ನು ಕಾಣಬಹುದು, ವಿದೇಶಿ ನಾಯಕರಿಗೂ ನಮ್ಮ ದೇಶದ ಆಹಾರವೆಂದರೆ ಅಚ್ಚು ಮೆಚ್ಚು.

ಪುಣೆಯಲ್ಲಿ ಪತ್ನಿ ಜತೆ ವಡಾ ಪಾವ್ ಸವಿದ ಜಪಾನ್ ರಾಯಭಾರಿ ಮೋದಿ ಹೀಗಂದ್ರು
ಜಪಾನ್ ರಾಯಭಾರಿ
ನಯನಾ ರಾಜೀವ್
|

Updated on:Jun 11, 2023 | 2:44 PM

Share

ಭಾರತದಲ್ಲಿ ಫಾಸ್ಟ್​ಫುಡ್ ತುಂಬಾ ಫೇಮಸ್, ಇಲ್ಲಿನ ಪ್ರತಿಯೊಂದು ನಗರದಲ್ಲಿಯೂ ಅದರದ್ದೇ ಆದ ವಿಶಿಷ್ಟ ತಿನಿಸುಗಳನ್ನು ಕಾಣಬಹುದು, ವಿದೇಶಿ ನಾಯಕರಿಗೂ ನಮ್ಮ ದೇಶದ ಆಹಾರವೆಂದರೆ ಅಚ್ಚು ಮೆಚ್ಚು. ಹಾಗೆಯೇ ಜಪಾನ್ ರಾಯಭಾರಿ ಹಿರೋಶಿ ಸುಜುಕಿ ಅವರು ಪುಣೆಯಲ್ಲಿ ತಮ್ಮ ಪತ್ನಿಯೊಂದಿಗೆ ವಡಾ ಪಾವ್ ತಿನ್ನುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ಪತ್ನಿ ಜತೆ ವಡಾ ಪಾವ್(Vada Pav) ತಿನ್ನುವ ಸ್ಪರ್ಧೆಯಲ್ಲಿ ಸೋತಿದ್ದೇನೆ ಎನ್ನುವ ವಿಡಿಯೋವನ್ನು ಪೋಸ್ಟ್​ ಮಾಡಿದ್ದಾರೆ.

ಸ್ವತಃ ಜಪಾನ್ ರಾಯಭಾರಿ ಸುಜುಕಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಪತ್ನಿ ನನ್ನನ್ನು ಸೋಲಿಸಿದ್ದಾಳೆ ಎಂದು ಬರೆದುಕೊಂಡಿದ್ದಾರೆ. ಸುಜುಕಿಯ ಈ ಟ್ವೀಟ್‌ಗೆ ಪ್ರಧಾನಿ ಮೋದಿ ಕೂಡ ಪ್ರತಿಕ್ರಿಯಿಸಿದ್ದಾರೆ.

ಸೋತಿದ್ದಕ್ಕೆ ಬೇಸರ ಪಡಬೇಡಿ, ನೀವು ಭಾರತೀಯ ತಿನಿಸುಗಳನ್ನು ಆನಂದಿಸುವುದನ್ನು ನೋಡಲು ಸಂತೋಷವಾಗುತ್ತದೆ, ಇಂತಹ ವಿಡಿಯೋಗಳು ಮತ್ತಷ್ಟು ಬರಲಿ ಎಂದಿದ್ದಾರೆ.

ಇದೊಂದು ಸ್ಪರ್ಧೆಯಲ್ಲಿ ನೀವು ಸೋತರೂ ಪರವಾಗಿಲ್ಲ, ಮಿಸ್ಟರ್ ರಾಯಭಾರಿ. ನೀವು ಭಾರತದ ತಿನಿಸುಗಳ ವೈವಿಧ್ಯತೆಯನ್ನು ಆನಂದಿಸುತ್ತಿರುವುದನ್ನು ಮತ್ತು ಅಂತಹ ವಿನೂತನ ರೀತಿಯಲ್ಲಿ ಅದನ್ನು ಪ್ರಸ್ತುತಪಡಿಸುವುದನ್ನು ನೋಡಲು ಸಂತೋಷವಾಗುತ್ತಿದೆ, ಇಂತಹ ವೀಡಿಯೊಗಳು ಬರುತ್ತಿರಲಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಾರ್ಯಕ್ರಮಕ್ಕಾಗಿ ಪುಣೆಗೆ ಭೇಟಿ ನೀಡಿದಾಗ, ಜಪಾನ್ ರಾಯಭಾರಿ ಹಿರೋಷಿ ಸುಜುಕಿ ಅವರು ಮಹಾರಾಷ್ಟ್ರ ಶೈಲಿಯ ಬೀದಿ ಆಹಾರವನ್ನು ಪ್ರಯತ್ನಿಸಿದರು. ಸ್ವಲ್ಪ ದಿನಗಳ ಹಿಂದೆ ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಕೂಡ ಭಾರತೀಯ ತಿನಿಸುಗಳನ್ನು ಆನಂದಿಸಿದ್ದರು, ಹೈದರಾಬಾದಿ ಗೋಸ್ಟ್​ ಬಿರಿಯಾನಿ ಸವಿದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:43 pm, Sun, 11 June 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ