Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi on Emergency: ತುರ್ತು ಪರಿಸ್ಥತಿ ಹೇರಿ ಸಂವಿಧಾನವನ್ನು ತುಳಿದು ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಕಾಂಗ್ರೆಸ್​: ಮೋದಿ

1975ರಲ್ಲಿ ಕಾಂಗ್ರೆಸ್​ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ಈ ತುರ್ತು ಪರಿಸ್ಥಿತಿ ಹೇರಿಗೆ ಇಂದಿಗೆ 49 ವರ್ಷ.

PM Modi on Emergency: ತುರ್ತು ಪರಿಸ್ಥತಿ ಹೇರಿ ಸಂವಿಧಾನವನ್ನು ತುಳಿದು ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಕಾಂಗ್ರೆಸ್​: ಮೋದಿ
ನರೇಂದ್ರ ಮೋದಿImage Credit source: Moneycontrol
Follow us
ನಯನಾ ರಾಜೀವ್
|

Updated on:Jun 25, 2024 | 10:44 AM

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್​ ಸಂವಿಧಾನ(Constitution)ವನ್ನು ತುಳಿದು, ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಕಂಡ ತುರ್ತು ಪರಿಸ್ಥಿತಿಗೆ 49ನೇ ವರ್ಷ, ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಬರೆದಿರುವ ಅವರು, ತುರ್ತು ಪರಿಸ್ಥಿತಿಯ ಕರಾಳ ದಿನಗಳಲ್ಲಿ ಕಾಂಗ್ರೆಸ್​ ಪಕ್ಷವು ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಕೊನೆಗೊಳಿಸಿತು, ಪ್ರತಿಯೊಬ್ಬ ಭಾರತೀಯನು ಆಳವಾಗಿ ಗೌರವಿಸುವ ಭಾರತದ ಸಂವಿಧಾನವನ್ನು ಹೇಗೆ ತುಳಿಯಿತು ಎಂಬುದನ್ನು ನಮಗೆ ನೆನಪಿಸುತ್ತದೆ.

ಅಧಿಕಾರದಲ್ಲಿ ಉಳಿಯಲು ಆಗಿನ ಕಾಂಗ್ರೆಸ್​ ಸರ್ಕಾರವು ಪ್ರತಿಯೊಂದು ಪ್ರಜಾಪ್ರಭುತ್ವದ ತತ್ವಗಳನ್ನು ಕಡೆಗಣಿಸಿ ದೇಶವನ್ನು ಜೈಲಿನಂತೆ ಮಾಡಿತ್ತು ಎಂದು ಮೋದಿ ಬರೆದಿದ್ದಾರೆ.

ಕಾಂಗ್ರೆಸ್​ ಪಕ್ಷವನ್ನು ಒಪ್ಪದ ಜನರಿಗೆ ಚಿತ್ರಹಿಂಸೆ ನೀಡಲಾಯಿತು, ದುರ್ಬಲ ವರ್ಗಗಳನ್ನು ಗುರಿಯಾಗಿಸಲು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಜಾರಿಗೆ ತರಲಾಯಿತು.

ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಇಲ್ಲ ಎಂದರು. ಪತ್ರಿಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ಮಸೂದೆ ತರಲಾಗಿತ್ತು, ಹಲವು ಸಂದರ್ಭಗಳಲ್ಲಿ 356ನೇ ವಿಧಿಯನ್ನು ವಿಧಿಸಿದವರು ಕೂಡ ಇವರೇ.

ಮತ್ತಷ್ಟು ಓದಿ: ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ

ಯಾವ ಪಕ್ಷದ ಕಾಲದಲ್ಲಿ ತುರ್ತು ಪರಿಸ್ಥಿತಿ ಹೇರಿತ್ತೋ ಆ ಪಕ್ಷ ಇನ್ನೂ ಜೀವಂತವಾಗಿದೆ. ತಮ್ಮ ಸಾಂಕೇತಿಕತೆಯ ಮೂಲಕ ಸಂವಿಧಾನದ ಬಗೆಗಿನ ತಿರಸ್ಕಾರವನ್ನು ಮರೆಮಾಡುತ್ತಾರೆ. ಆದರೆ ಭಾರತದ ಜನರು ಅವರ ಕಾರ್ಯಗಳ ಮೂಲಕ ನೋಡಿದ್ದಾರೆ. ಜನರು ಮತ್ತೆ ಅವರನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.

ನರೇಂದ್ರ ಮೋದಿ ಟ್ವೀಟ್​

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊಂದು ಅದರ ಮೇಲೆ ಪದೇ ಪದೇ ದಾಳಿ ಮಾಡುವ ಸುದೀರ್ಘ ಇತಿಹಾಸವನ್ನು ಕಾಂಗ್ರೆಸ್​ ಹೊಂದಿದೆ. 1975ರಲ್ಲಿ ಈ ದಿನ ಕಾಂಗ್ರೆಸ್​ ಹೇರಿದ್ದ ತುರ್ತು ಪರಿಸ್ಥಿತಿಯೇ ಇದಕ್ಕೆ ಉದಾಹರಣೆ. ನಿರಂಕುಶ ಪ್ರಭುತ್ವದ ಕಾಂಗ್ರೆಸ್​ ಸರ್ಕಾರ ಒಂದೇ ಕುಟುಂಬದ ಅಧಿಕಾರದ ಸುಖಕ್ಕಾಗಿ ದೇಶದ ಎಲ್ಲಾ ನಾಗರಿಕ ಹಕ್ಕುಗಳನ್ನು 21 ತಿಂಗಳುಗಳ ಕಾಲ ಅಮಾನತುಗೊಳಿಸಿತ್ತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:44 am, Tue, 25 June 24

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್