PM Modi on Emergency: ತುರ್ತು ಪರಿಸ್ಥತಿ ಹೇರಿ ಸಂವಿಧಾನವನ್ನು ತುಳಿದು ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಕಾಂಗ್ರೆಸ್​: ಮೋದಿ

1975ರಲ್ಲಿ ಕಾಂಗ್ರೆಸ್​ ದೇಶದಲ್ಲಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ಈ ತುರ್ತು ಪರಿಸ್ಥಿತಿ ಹೇರಿಗೆ ಇಂದಿಗೆ 49 ವರ್ಷ.

PM Modi on Emergency: ತುರ್ತು ಪರಿಸ್ಥತಿ ಹೇರಿ ಸಂವಿಧಾನವನ್ನು ತುಳಿದು ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಕಾಂಗ್ರೆಸ್​: ಮೋದಿ
ನರೇಂದ್ರ ಮೋದಿ
Image Credit source: Moneycontrol

Updated on: Jun 25, 2024 | 10:44 AM

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್​ ಸಂವಿಧಾನ(Constitution)ವನ್ನು ತುಳಿದು, ಮೂಲಭೂತ ಸ್ವಾತಂತ್ರ್ಯವನ್ನು ಬುಡಮೇಲು ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಕಂಡ ತುರ್ತು ಪರಿಸ್ಥಿತಿಗೆ 49ನೇ ವರ್ಷ, ಪ್ರಧಾನಿ ಮೋದಿ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಬರೆದಿರುವ ಅವರು, ತುರ್ತು ಪರಿಸ್ಥಿತಿಯ ಕರಾಳ ದಿನಗಳಲ್ಲಿ ಕಾಂಗ್ರೆಸ್​ ಪಕ್ಷವು ಮೂಲಭೂತ ಸ್ವಾತಂತ್ರ್ಯವನ್ನು ಹೇಗೆ ಕೊನೆಗೊಳಿಸಿತು, ಪ್ರತಿಯೊಬ್ಬ ಭಾರತೀಯನು ಆಳವಾಗಿ ಗೌರವಿಸುವ ಭಾರತದ ಸಂವಿಧಾನವನ್ನು ಹೇಗೆ ತುಳಿಯಿತು ಎಂಬುದನ್ನು ನಮಗೆ ನೆನಪಿಸುತ್ತದೆ.

ಅಧಿಕಾರದಲ್ಲಿ ಉಳಿಯಲು ಆಗಿನ ಕಾಂಗ್ರೆಸ್​ ಸರ್ಕಾರವು ಪ್ರತಿಯೊಂದು ಪ್ರಜಾಪ್ರಭುತ್ವದ ತತ್ವಗಳನ್ನು ಕಡೆಗಣಿಸಿ ದೇಶವನ್ನು ಜೈಲಿನಂತೆ ಮಾಡಿತ್ತು ಎಂದು ಮೋದಿ ಬರೆದಿದ್ದಾರೆ.

ಕಾಂಗ್ರೆಸ್​ ಪಕ್ಷವನ್ನು ಒಪ್ಪದ ಜನರಿಗೆ ಚಿತ್ರಹಿಂಸೆ ನೀಡಲಾಯಿತು, ದುರ್ಬಲ ವರ್ಗಗಳನ್ನು ಗುರಿಯಾಗಿಸಲು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಜಾರಿಗೆ ತರಲಾಯಿತು.

ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕು ಇಲ್ಲ ಎಂದರು. ಪತ್ರಿಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ಮಸೂದೆ ತರಲಾಗಿತ್ತು, ಹಲವು ಸಂದರ್ಭಗಳಲ್ಲಿ 356ನೇ ವಿಧಿಯನ್ನು ವಿಧಿಸಿದವರು ಕೂಡ ಇವರೇ.

ಮತ್ತಷ್ಟು ಓದಿ: ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ: ಮೋದಿ

ಯಾವ ಪಕ್ಷದ ಕಾಲದಲ್ಲಿ ತುರ್ತು ಪರಿಸ್ಥಿತಿ ಹೇರಿತ್ತೋ ಆ ಪಕ್ಷ ಇನ್ನೂ ಜೀವಂತವಾಗಿದೆ. ತಮ್ಮ ಸಾಂಕೇತಿಕತೆಯ ಮೂಲಕ ಸಂವಿಧಾನದ ಬಗೆಗಿನ ತಿರಸ್ಕಾರವನ್ನು ಮರೆಮಾಡುತ್ತಾರೆ. ಆದರೆ ಭಾರತದ ಜನರು ಅವರ ಕಾರ್ಯಗಳ ಮೂಲಕ ನೋಡಿದ್ದಾರೆ. ಜನರು ಮತ್ತೆ ಅವರನ್ನು ತಿರಸ್ಕರಿಸಿದ್ದಾರೆ ಎಂದಿದ್ದಾರೆ.

ನರೇಂದ್ರ ಮೋದಿ ಟ್ವೀಟ್​

ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕೊಂದು ಅದರ ಮೇಲೆ ಪದೇ ಪದೇ ದಾಳಿ ಮಾಡುವ ಸುದೀರ್ಘ ಇತಿಹಾಸವನ್ನು ಕಾಂಗ್ರೆಸ್​ ಹೊಂದಿದೆ. 1975ರಲ್ಲಿ ಈ ದಿನ ಕಾಂಗ್ರೆಸ್​ ಹೇರಿದ್ದ ತುರ್ತು ಪರಿಸ್ಥಿತಿಯೇ ಇದಕ್ಕೆ ಉದಾಹರಣೆ. ನಿರಂಕುಶ ಪ್ರಭುತ್ವದ ಕಾಂಗ್ರೆಸ್​ ಸರ್ಕಾರ ಒಂದೇ ಕುಟುಂಬದ ಅಧಿಕಾರದ ಸುಖಕ್ಕಾಗಿ ದೇಶದ ಎಲ್ಲಾ ನಾಗರಿಕ ಹಕ್ಕುಗಳನ್ನು 21 ತಿಂಗಳುಗಳ ಕಾಲ ಅಮಾನತುಗೊಳಿಸಿತ್ತು ಎಂದು ಹೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:44 am, Tue, 25 June 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us