AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ಟೆ ಫ್ರೆಡ್ರಿಕ್ಸನ್​​ರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ; ರಾಜ್​ಘಾಟ್​​ನಲ್ಲಿ ಗಾಂಧಿಗೆ ಗೌರವ ಸಲ್ಲಿಸಿದ ಡೆನ್ಮಾರ್ಕ್​ ಪ್ರಧಾನಿ

ಮೆಟ್ಟೆ ಫ್ರೆಡ್ರಿಕ್ಸನ್ ಅವರು ಈ ಮೂರು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಚಿಂತಕರ ಚಾವಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳು, ಸಿವಿಲ್​ ಸೊಸೈಟಿ ಸದಸ್ಯರೊಟ್ಟಿಗೆ ಸಂವಾದ ನಡೆಸಲಿದ್ದಾರೆ. 

ಮೆಟ್ಟೆ ಫ್ರೆಡ್ರಿಕ್ಸನ್​​ರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ; ರಾಜ್​ಘಾಟ್​​ನಲ್ಲಿ ಗಾಂಧಿಗೆ ಗೌರವ ಸಲ್ಲಿಸಿದ ಡೆನ್ಮಾರ್ಕ್​ ಪ್ರಧಾನಿ
ಮೆಟ್ಟೆ ಫ್ರೆಡ್ರಿಕ್ಸನ್​​ರನ್ನು ಬರ ಮಾಡಿಕೊಂಡ ಪಿಎಂ ಮೋದಿ
TV9 Web
| Edited By: |

Updated on:Oct 09, 2021 | 12:04 PM

Share

ಇಂದು ಮುಂಜಾನೆ ಭಾರತಕ್ಕೆ ಬಂದಿಳಿದ ಡ್ಯಾನಿಶ್​ ಪ್ರಧಾನಮಂತ್ರಿ ಮೆಟ್ಟೆ ಫ್ರೆಡ್ರಿಕ್ಸನ್ (Mette Frederiksen) ಅವರನ್ನು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿದ್ಯುಕ್ತವಾಗಿ ಸ್ವಾಗತ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi)ಯವರು ಮೆಟ್ಟೆ ಅವರನ್ನು ಬರಮಾಡಿಕೊಂಡರು. ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಇಲ್ಲಿಯವರೆಗೆ ಯಾವುದೇ ರಾಷ್ಟ್ರನಾಯಕರೂ ಭಾರತಕ್ಕೆ ಬಂದಿರಲಿಲ್ಲ. ಇದೀಗ ಮೆಟ್ಟೆ ಫ್ರೆಡ್ರಿಕ್ಸನ್,  ಕೊರೊನಾ ನಂತರ ಭಾರತಕ್ಕೆ ಭೇಟಿಕೊಟ್ಟ ಮೊದಲ ವಿದೇಶಿ ನಾಯಕಿಯಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಬರಮಾಡಿಕೊಂಡಿದ್ದರು. ಹೂಗುಚ್ಛ ಕೊಟ್ಟು ಸ್ವಾಗತಿಸಿದ್ದರು.  

ಫ್ರೆಡ್ರಿಕ್ಸನ್ ಅವರು ಈ ಮೂರು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅದರ ಹೊರತಾಗಿ ಚಿಂತಕರ ಚಾವಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳು, ಸಿವಿಲ್​ ಸೊಸೈಟಿ ಸದಸ್ಯರೊಟ್ಟಿಗೆ ಸಂವಾದ ನಡೆಸಲಿದ್ದಾರೆ.

ಈ ವರ್ಷ ಪ್ರಾರಂಭದಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಡೆನ್ಮಾರ್ಕ್​​ಗೆ ಭೇಟಿ ನೀಡಿದ್ದರು. ಡೆನ್ಮಾರ್ಕ್​ ಮತ್ತು ಭಾರತದ ನಡುವೆ ವ್ಯವಹಾರ ಸಂಬಂಧ ಬಲವಾಗಿದೆ. ಹೂಡಿಕೆಯೂ ಇದೆ. 200ಕ್ಕೂ ಹೆಚ್ಚು ಡ್ಯಾನಿಶ್​ ಕಂಪನಿಗಳು ಭಾರತದಲ್ಲಿ ಇದ್ದರೆ, ಡೆನ್ಮಾರ್ಕ್​​ನಲ್ಲಿ 60 ಭಾರತದ ಕಂಪನಿಗಳಿವೆ.  ನವೀಕರಿಸಬಹುದಾದ ಇಂಧನ, ಶುದ್ಧ ತಂತ್ರಜ್ಞಾನ, ನೀರು ಮತ್ತು ತ್ಯಾಜ್ಯ ನಿರ್ವಹಣೆ, ಕೃಷಿ ಮತ್ತು ಪಶು ಸಂಗೋಪನೆ, ವಿಜ್ಞಾನ ಮತ್ತು ತಂತ್ರಜ್ಞಾನ, ಡಿಜಿಟಲೀಕರಣ, ಸ್ಮಾರ್ಟ್ ಸಿಟಿ ಮತ್ತು ಹಡಗು ವಲಯದಲ್ಲಿ  ಉಭಯ ದೇಶಗಳ ನಡುವೆ  ಸಹಕಾರ ಬಲವಾಗಿದೆ. ಇದೀಗ ಡೆನ್ಮಾರ್ಕ್​ ಪ್ರಧಾನಿ ಭೇಟಿಯಿಂದ ಎರಡೂ ದೇಶಗಳ ನಡುವಿನ ಬಾಂಧವ್ಯ ವೃದ್ಧಿಗೆ ಇನ್ನಷ್ಟು ಉತ್ತೇಜನ ಸಿಗಲಿದೆ.

ಇದನ್ನೂ ಓದಿ:  ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಅಬ್ಬಬ್ಬಾ! ದೊಡ್ಡ ಗಾತ್ರದ ಹಾವಿನ ಬಾಲ ಹಿಡಿದು ಎಳೆದಾಡುವ ಎರಡು ವರ್ಷದ ಮಗುವಿನ ವಿಡಿಯೋ ನೋಡಿ

Published On - 11:50 am, Sat, 9 October 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ