AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ಟೆ ಫ್ರೆಡ್ರಿಕ್ಸನ್​​ರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ; ರಾಜ್​ಘಾಟ್​​ನಲ್ಲಿ ಗಾಂಧಿಗೆ ಗೌರವ ಸಲ್ಲಿಸಿದ ಡೆನ್ಮಾರ್ಕ್​ ಪ್ರಧಾನಿ

ಮೆಟ್ಟೆ ಫ್ರೆಡ್ರಿಕ್ಸನ್ ಅವರು ಈ ಮೂರು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಚಿಂತಕರ ಚಾವಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳು, ಸಿವಿಲ್​ ಸೊಸೈಟಿ ಸದಸ್ಯರೊಟ್ಟಿಗೆ ಸಂವಾದ ನಡೆಸಲಿದ್ದಾರೆ. 

ಮೆಟ್ಟೆ ಫ್ರೆಡ್ರಿಕ್ಸನ್​​ರನ್ನು ಬರಮಾಡಿಕೊಂಡ ಪ್ರಧಾನಿ ಮೋದಿ; ರಾಜ್​ಘಾಟ್​​ನಲ್ಲಿ ಗಾಂಧಿಗೆ ಗೌರವ ಸಲ್ಲಿಸಿದ ಡೆನ್ಮಾರ್ಕ್​ ಪ್ರಧಾನಿ
ಮೆಟ್ಟೆ ಫ್ರೆಡ್ರಿಕ್ಸನ್​​ರನ್ನು ಬರ ಮಾಡಿಕೊಂಡ ಪಿಎಂ ಮೋದಿ
TV9 Web
| Updated By: Lakshmi Hegde|

Updated on:Oct 09, 2021 | 12:04 PM

Share

ಇಂದು ಮುಂಜಾನೆ ಭಾರತಕ್ಕೆ ಬಂದಿಳಿದ ಡ್ಯಾನಿಶ್​ ಪ್ರಧಾನಮಂತ್ರಿ ಮೆಟ್ಟೆ ಫ್ರೆಡ್ರಿಕ್ಸನ್ (Mette Frederiksen) ಅವರನ್ನು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿದ್ಯುಕ್ತವಾಗಿ ಸ್ವಾಗತ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ (Narendra Modi)ಯವರು ಮೆಟ್ಟೆ ಅವರನ್ನು ಬರಮಾಡಿಕೊಂಡರು. ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಇಲ್ಲಿಯವರೆಗೆ ಯಾವುದೇ ರಾಷ್ಟ್ರನಾಯಕರೂ ಭಾರತಕ್ಕೆ ಬಂದಿರಲಿಲ್ಲ. ಇದೀಗ ಮೆಟ್ಟೆ ಫ್ರೆಡ್ರಿಕ್ಸನ್,  ಕೊರೊನಾ ನಂತರ ಭಾರತಕ್ಕೆ ಭೇಟಿಕೊಟ್ಟ ಮೊದಲ ವಿದೇಶಿ ನಾಯಕಿಯಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಬರಮಾಡಿಕೊಂಡಿದ್ದರು. ಹೂಗುಚ್ಛ ಕೊಟ್ಟು ಸ್ವಾಗತಿಸಿದ್ದರು.  

ಫ್ರೆಡ್ರಿಕ್ಸನ್ ಅವರು ಈ ಮೂರು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅದರ ಹೊರತಾಗಿ ಚಿಂತಕರ ಚಾವಡಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿಗಳು, ಸಿವಿಲ್​ ಸೊಸೈಟಿ ಸದಸ್ಯರೊಟ್ಟಿಗೆ ಸಂವಾದ ನಡೆಸಲಿದ್ದಾರೆ.

ಈ ವರ್ಷ ಪ್ರಾರಂಭದಲ್ಲಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್​.ಜೈಶಂಕರ್​ ಡೆನ್ಮಾರ್ಕ್​​ಗೆ ಭೇಟಿ ನೀಡಿದ್ದರು. ಡೆನ್ಮಾರ್ಕ್​ ಮತ್ತು ಭಾರತದ ನಡುವೆ ವ್ಯವಹಾರ ಸಂಬಂಧ ಬಲವಾಗಿದೆ. ಹೂಡಿಕೆಯೂ ಇದೆ. 200ಕ್ಕೂ ಹೆಚ್ಚು ಡ್ಯಾನಿಶ್​ ಕಂಪನಿಗಳು ಭಾರತದಲ್ಲಿ ಇದ್ದರೆ, ಡೆನ್ಮಾರ್ಕ್​​ನಲ್ಲಿ 60 ಭಾರತದ ಕಂಪನಿಗಳಿವೆ.  ನವೀಕರಿಸಬಹುದಾದ ಇಂಧನ, ಶುದ್ಧ ತಂತ್ರಜ್ಞಾನ, ನೀರು ಮತ್ತು ತ್ಯಾಜ್ಯ ನಿರ್ವಹಣೆ, ಕೃಷಿ ಮತ್ತು ಪಶು ಸಂಗೋಪನೆ, ವಿಜ್ಞಾನ ಮತ್ತು ತಂತ್ರಜ್ಞಾನ, ಡಿಜಿಟಲೀಕರಣ, ಸ್ಮಾರ್ಟ್ ಸಿಟಿ ಮತ್ತು ಹಡಗು ವಲಯದಲ್ಲಿ  ಉಭಯ ದೇಶಗಳ ನಡುವೆ  ಸಹಕಾರ ಬಲವಾಗಿದೆ. ಇದೀಗ ಡೆನ್ಮಾರ್ಕ್​ ಪ್ರಧಾನಿ ಭೇಟಿಯಿಂದ ಎರಡೂ ದೇಶಗಳ ನಡುವಿನ ಬಾಂಧವ್ಯ ವೃದ್ಧಿಗೆ ಇನ್ನಷ್ಟು ಉತ್ತೇಜನ ಸಿಗಲಿದೆ.

ಇದನ್ನೂ ಓದಿ:  ನಿರ್ಮಾಪಕ ಇಮ್ತಿಯಾಜ್​ ಖತ್ರಿ ಮನೆ ಮೇಲೆ ಎನ್​ಸಿಬಿ ದಾಳಿ; ಬಾಲಿವುಡ್​ ಸೆಲೆಬ್ರಿಟಿಗಳಿಗೆ ನಡುಕ ಶುರು

ಅಬ್ಬಬ್ಬಾ! ದೊಡ್ಡ ಗಾತ್ರದ ಹಾವಿನ ಬಾಲ ಹಿಡಿದು ಎಳೆದಾಡುವ ಎರಡು ವರ್ಷದ ಮಗುವಿನ ವಿಡಿಯೋ ನೋಡಿ

Published On - 11:50 am, Sat, 9 October 21

VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
VIDEO: ಟೀಮ್ ಇಂಡಿಯಾ ದೊಡ್ಡ ಎಡವಟ್ಟು: ಮೈದಾನದಲ್ಲೇ ಜಡೇಜಾ ಆಕ್ರೋಶ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ