AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ

Pradhan Mantri Kisan Samman Nidhi: ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ
ಇಂದು ಪಿಎಂ ಕಿಸಾನ್​ 10ನೇ ಕಂತು ಉದ್ಘಾಟಿಸಿದ ಪಿಎಂ ಮೋದಿ
TV9 Web
| Updated By: Lakshmi Hegde|

Updated on:Jan 01, 2022 | 2:37 PM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಕಿಸಾನ್​ ಸಮ್ಮಾನ್​ ನಿಧಿ(Pradhan Mantri Kisan Samman Nidhi)ಯ 10ನೇ ಕಂತಿನ ಹಣ ಬಿಡುಗಡೆ ಮಾಡಿದರು. ಒಟ್ಟು 10 ಕೋಟಿ ಫಲಾನುಭವಿ ರೈತರ ಖಾತೆಗೆ 20 ಸಾವಿರ ಕೋಟಿ ರೂ.ಬಿಡುಗಡೆ ಮಾಡಿ ಮಾತನಾಡಿದ ಅವರು,  2021ರಲ್ಲಿ ಕೊರೊನಾ ವಿರುದ್ಧ ನಾವು ಸೆಣೆಸಾಡಿದ್ದೇವೆ. ನಾವು ಇನ್ನು ಮುಂದೆ ಹೊಸ ಸಂಕಲ್ಪದತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು. ಇದುವರೆಗೆ 145 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಇದು ಸಾಧಿತವಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಆದರೆ ಸಂಘಟಿತ ಶಕ್ತಿಯಿಂದ ಈ ಗೆಲುವು ಸಿಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.  

ಕೊರೊನಾ ಕಾಲದಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ವೃದ್ಧಿಯಾಗಿದೆ. ಅನೇಕ ಹೊಸ ಮೆಡಿಕಲ್ ಕಾಲೇಜುಗಳು ನಿರ್ಮಾಣಗೊಂಡಿವೆ. ಆಯುಷ್ಮಾನ್ ಭಾರತ್​ ಡಿಜಿಟಲ್​ ಹೆಲ್ತ್ ಮಿಷನ್​​ನಿಂದ ಅಪಾರ ಅನುಕೂಲವಾಗಿದೆ. ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ, ಪದ್ಮ ಪ್ರಶಸ್ತ್ರಿ ಪುರಸ್ಕೃತರನ್ನು ನೆನಪಿಸಿಕೊಂಡ ಅವರು, ಆ ಸಾಧಕರ ಮುಖ ನೋಡಿದರೇ ಆನಂದವಾಗುತ್ತದೆ ಎಂದರು.

ವೈಷ್ಣೋ ದೇವಿ ದೇಗುಲ ದುರಂತದ ಪ್ರಸ್ತಾಪ ಇನ್ನು ಈ ಸಮಾರಂಭದಲ್ಲಿ ಭಾಷಣ ಮಾಡುವುದಕ್ಕೂ ಮೊದಲು ಪ್ರಧಾನಿ ಮೋದಿಯವರು, ವೈಷ್ಣೋದೇವಿ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾತಾ ವೈಷ್ಣೋದೇವಿ ದೇಗುಲದ ಆವರಣದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ನನ್ನ ಶ್ರದ್ಧಾಂಜಲಿಗಳು. ಈ ಸಂಬಂಧ ಜಮ್ಮು-ಕಾಶ್ಮೀರ ಸರ್ಕಾರದೊಂದಿಗೆ ನಮ್ಮ ಕೇಂದ್ರ ಸರ್ಕಾರ ಸಂಪರ್ಕದಲ್ಲಿದ್ದು, ವರದಿ ಕೇಳುತ್ತಿದೆ. ನಾನು ಈಗಾಗಲೇ ಅಲ್ಲಿನ ಲೆಫ್ಟಿನೆಂಟ್ ಗವರ್ನರ್​ ಮನೋಜ್​ ಸಿನ್ಹಾ ಬಳಿ ಮಾತನಾಡಿದ್ದೇನೆ. ಗಾಯಗೊಂಡವರ ಚಿಕಿತ್ಸೆಗಾಗಿ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹಾಗೇ, ರೈತರು ವಿದ್ಯುತ್​ ಉತ್ಪಾದಕರಾಗಲು ನೆರವು ನೀಡುವುದಾಗಿ ತಿಳಿಸಿದ ಪ್ರಧಾನಿ ಮೋದಿ, ಬೀದಿ ದೀಪಗಳನ್ನು ಎಲ್​ಇಡಿ ಲೈಟ್​ ಆಗಿ ಬದಲಾವಣೆ ಮಾಡುವುದಾಗಿ ಹೇಳಿದರು. 2021ರಲ್ಲಿ ಭಾರತ ಸಾಧಿಸಿದ ಸುಧಾರಣೆಗಳ ಚರ್ಚೆಯಾಗಬೇಕು. ಪಿಎಂ ಗತಿಶಕ್ತಿ ಮಾಸ್ಟರ್ ಪ್ಲ್ಯಾನ್ ಮೂಲಕ ಮೂಲಸೌಕರ್ಯ ಯೋಜನೆಗೆ ವೇಗ ನೀಡಲಾಗಿದೆ. ಮಧ್ಯವರ್ತಿ, ಕಮಿಷನ್​ ಇಲ್ಲದೆ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವುದರಿಂದ ಸಣ್ಣ ಸಣ್ಣ ರೈತರಿಗೆ ಲಾಭವಾಗಲಿದೆ.  ಇನ್ನು ಈ ಹಣವನ್ನು ರೈತರು ಬಿತ್ತನೆ ಬೀಜ ಖರೀದಿಗೆ ಬಳಕೆ ಮಾಡಬಹುದು. ರೈತ ಉತ್ಪಾದಕ ಸಂಘಗಳು ದೊಡ್ಡ ಮಟ್ಟದಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಅಷ್ಟೇ ಅಲ್ಲ, ಸಂಶೋಧನೆ, ಅನ್ವೇಷಣೆಗಳಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  Haryana Landslide: ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಭೂಕುಸಿತ; 12ಕ್ಕೂ ಹೆಚ್ಚು ವಾಹನಗಳು ನೆಲಸಮ, 15 ಜನ ನಾಪತ್ತೆ

Published On - 2:10 pm, Sat, 1 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ