AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ

Pradhan Mantri Kisan Samman Nidhi: ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ
ಇಂದು ಪಿಎಂ ಕಿಸಾನ್​ 10ನೇ ಕಂತು ಉದ್ಘಾಟಿಸಿದ ಪಿಎಂ ಮೋದಿ
TV9 Web
| Edited By: |

Updated on:Jan 01, 2022 | 2:37 PM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಕಿಸಾನ್​ ಸಮ್ಮಾನ್​ ನಿಧಿ(Pradhan Mantri Kisan Samman Nidhi)ಯ 10ನೇ ಕಂತಿನ ಹಣ ಬಿಡುಗಡೆ ಮಾಡಿದರು. ಒಟ್ಟು 10 ಕೋಟಿ ಫಲಾನುಭವಿ ರೈತರ ಖಾತೆಗೆ 20 ಸಾವಿರ ಕೋಟಿ ರೂ.ಬಿಡುಗಡೆ ಮಾಡಿ ಮಾತನಾಡಿದ ಅವರು,  2021ರಲ್ಲಿ ಕೊರೊನಾ ವಿರುದ್ಧ ನಾವು ಸೆಣೆಸಾಡಿದ್ದೇವೆ. ನಾವು ಇನ್ನು ಮುಂದೆ ಹೊಸ ಸಂಕಲ್ಪದತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು. ಇದುವರೆಗೆ 145 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಇದು ಸಾಧಿತವಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಆದರೆ ಸಂಘಟಿತ ಶಕ್ತಿಯಿಂದ ಈ ಗೆಲುವು ಸಿಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.  

ಕೊರೊನಾ ಕಾಲದಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ವೃದ್ಧಿಯಾಗಿದೆ. ಅನೇಕ ಹೊಸ ಮೆಡಿಕಲ್ ಕಾಲೇಜುಗಳು ನಿರ್ಮಾಣಗೊಂಡಿವೆ. ಆಯುಷ್ಮಾನ್ ಭಾರತ್​ ಡಿಜಿಟಲ್​ ಹೆಲ್ತ್ ಮಿಷನ್​​ನಿಂದ ಅಪಾರ ಅನುಕೂಲವಾಗಿದೆ. ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ, ಪದ್ಮ ಪ್ರಶಸ್ತ್ರಿ ಪುರಸ್ಕೃತರನ್ನು ನೆನಪಿಸಿಕೊಂಡ ಅವರು, ಆ ಸಾಧಕರ ಮುಖ ನೋಡಿದರೇ ಆನಂದವಾಗುತ್ತದೆ ಎಂದರು.

ವೈಷ್ಣೋ ದೇವಿ ದೇಗುಲ ದುರಂತದ ಪ್ರಸ್ತಾಪ ಇನ್ನು ಈ ಸಮಾರಂಭದಲ್ಲಿ ಭಾಷಣ ಮಾಡುವುದಕ್ಕೂ ಮೊದಲು ಪ್ರಧಾನಿ ಮೋದಿಯವರು, ವೈಷ್ಣೋದೇವಿ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾತಾ ವೈಷ್ಣೋದೇವಿ ದೇಗುಲದ ಆವರಣದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ನನ್ನ ಶ್ರದ್ಧಾಂಜಲಿಗಳು. ಈ ಸಂಬಂಧ ಜಮ್ಮು-ಕಾಶ್ಮೀರ ಸರ್ಕಾರದೊಂದಿಗೆ ನಮ್ಮ ಕೇಂದ್ರ ಸರ್ಕಾರ ಸಂಪರ್ಕದಲ್ಲಿದ್ದು, ವರದಿ ಕೇಳುತ್ತಿದೆ. ನಾನು ಈಗಾಗಲೇ ಅಲ್ಲಿನ ಲೆಫ್ಟಿನೆಂಟ್ ಗವರ್ನರ್​ ಮನೋಜ್​ ಸಿನ್ಹಾ ಬಳಿ ಮಾತನಾಡಿದ್ದೇನೆ. ಗಾಯಗೊಂಡವರ ಚಿಕಿತ್ಸೆಗಾಗಿ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹಾಗೇ, ರೈತರು ವಿದ್ಯುತ್​ ಉತ್ಪಾದಕರಾಗಲು ನೆರವು ನೀಡುವುದಾಗಿ ತಿಳಿಸಿದ ಪ್ರಧಾನಿ ಮೋದಿ, ಬೀದಿ ದೀಪಗಳನ್ನು ಎಲ್​ಇಡಿ ಲೈಟ್​ ಆಗಿ ಬದಲಾವಣೆ ಮಾಡುವುದಾಗಿ ಹೇಳಿದರು. 2021ರಲ್ಲಿ ಭಾರತ ಸಾಧಿಸಿದ ಸುಧಾರಣೆಗಳ ಚರ್ಚೆಯಾಗಬೇಕು. ಪಿಎಂ ಗತಿಶಕ್ತಿ ಮಾಸ್ಟರ್ ಪ್ಲ್ಯಾನ್ ಮೂಲಕ ಮೂಲಸೌಕರ್ಯ ಯೋಜನೆಗೆ ವೇಗ ನೀಡಲಾಗಿದೆ. ಮಧ್ಯವರ್ತಿ, ಕಮಿಷನ್​ ಇಲ್ಲದೆ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವುದರಿಂದ ಸಣ್ಣ ಸಣ್ಣ ರೈತರಿಗೆ ಲಾಭವಾಗಲಿದೆ.  ಇನ್ನು ಈ ಹಣವನ್ನು ರೈತರು ಬಿತ್ತನೆ ಬೀಜ ಖರೀದಿಗೆ ಬಳಕೆ ಮಾಡಬಹುದು. ರೈತ ಉತ್ಪಾದಕ ಸಂಘಗಳು ದೊಡ್ಡ ಮಟ್ಟದಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಅಷ್ಟೇ ಅಲ್ಲ, ಸಂಶೋಧನೆ, ಅನ್ವೇಷಣೆಗಳಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  Haryana Landslide: ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಭೂಕುಸಿತ; 12ಕ್ಕೂ ಹೆಚ್ಚು ವಾಹನಗಳು ನೆಲಸಮ, 15 ಜನ ನಾಪತ್ತೆ

Published On - 2:10 pm, Sat, 1 January 22

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!