Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ

Pradhan Mantri Kisan Samman Nidhi: ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ
ಇಂದು ಪಿಎಂ ಕಿಸಾನ್​ 10ನೇ ಕಂತು ಉದ್ಘಾಟಿಸಿದ ಪಿಎಂ ಮೋದಿ
Follow us
TV9 Web
| Updated By: Lakshmi Hegde

Updated on:Jan 01, 2022 | 2:37 PM

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಕಿಸಾನ್​ ಸಮ್ಮಾನ್​ ನಿಧಿ(Pradhan Mantri Kisan Samman Nidhi)ಯ 10ನೇ ಕಂತಿನ ಹಣ ಬಿಡುಗಡೆ ಮಾಡಿದರು. ಒಟ್ಟು 10 ಕೋಟಿ ಫಲಾನುಭವಿ ರೈತರ ಖಾತೆಗೆ 20 ಸಾವಿರ ಕೋಟಿ ರೂ.ಬಿಡುಗಡೆ ಮಾಡಿ ಮಾತನಾಡಿದ ಅವರು,  2021ರಲ್ಲಿ ಕೊರೊನಾ ವಿರುದ್ಧ ನಾವು ಸೆಣೆಸಾಡಿದ್ದೇವೆ. ನಾವು ಇನ್ನು ಮುಂದೆ ಹೊಸ ಸಂಕಲ್ಪದತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು. ಇದುವರೆಗೆ 145 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಇದು ಸಾಧಿತವಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಆದರೆ ಸಂಘಟಿತ ಶಕ್ತಿಯಿಂದ ಈ ಗೆಲುವು ಸಿಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.  

ಕೊರೊನಾ ಕಾಲದಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ವೃದ್ಧಿಯಾಗಿದೆ. ಅನೇಕ ಹೊಸ ಮೆಡಿಕಲ್ ಕಾಲೇಜುಗಳು ನಿರ್ಮಾಣಗೊಂಡಿವೆ. ಆಯುಷ್ಮಾನ್ ಭಾರತ್​ ಡಿಜಿಟಲ್​ ಹೆಲ್ತ್ ಮಿಷನ್​​ನಿಂದ ಅಪಾರ ಅನುಕೂಲವಾಗಿದೆ. ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ, ಪದ್ಮ ಪ್ರಶಸ್ತ್ರಿ ಪುರಸ್ಕೃತರನ್ನು ನೆನಪಿಸಿಕೊಂಡ ಅವರು, ಆ ಸಾಧಕರ ಮುಖ ನೋಡಿದರೇ ಆನಂದವಾಗುತ್ತದೆ ಎಂದರು.

ವೈಷ್ಣೋ ದೇವಿ ದೇಗುಲ ದುರಂತದ ಪ್ರಸ್ತಾಪ ಇನ್ನು ಈ ಸಮಾರಂಭದಲ್ಲಿ ಭಾಷಣ ಮಾಡುವುದಕ್ಕೂ ಮೊದಲು ಪ್ರಧಾನಿ ಮೋದಿಯವರು, ವೈಷ್ಣೋದೇವಿ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾತಾ ವೈಷ್ಣೋದೇವಿ ದೇಗುಲದ ಆವರಣದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ನನ್ನ ಶ್ರದ್ಧಾಂಜಲಿಗಳು. ಈ ಸಂಬಂಧ ಜಮ್ಮು-ಕಾಶ್ಮೀರ ಸರ್ಕಾರದೊಂದಿಗೆ ನಮ್ಮ ಕೇಂದ್ರ ಸರ್ಕಾರ ಸಂಪರ್ಕದಲ್ಲಿದ್ದು, ವರದಿ ಕೇಳುತ್ತಿದೆ. ನಾನು ಈಗಾಗಲೇ ಅಲ್ಲಿನ ಲೆಫ್ಟಿನೆಂಟ್ ಗವರ್ನರ್​ ಮನೋಜ್​ ಸಿನ್ಹಾ ಬಳಿ ಮಾತನಾಡಿದ್ದೇನೆ. ಗಾಯಗೊಂಡವರ ಚಿಕಿತ್ಸೆಗಾಗಿ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹಾಗೇ, ರೈತರು ವಿದ್ಯುತ್​ ಉತ್ಪಾದಕರಾಗಲು ನೆರವು ನೀಡುವುದಾಗಿ ತಿಳಿಸಿದ ಪ್ರಧಾನಿ ಮೋದಿ, ಬೀದಿ ದೀಪಗಳನ್ನು ಎಲ್​ಇಡಿ ಲೈಟ್​ ಆಗಿ ಬದಲಾವಣೆ ಮಾಡುವುದಾಗಿ ಹೇಳಿದರು. 2021ರಲ್ಲಿ ಭಾರತ ಸಾಧಿಸಿದ ಸುಧಾರಣೆಗಳ ಚರ್ಚೆಯಾಗಬೇಕು. ಪಿಎಂ ಗತಿಶಕ್ತಿ ಮಾಸ್ಟರ್ ಪ್ಲ್ಯಾನ್ ಮೂಲಕ ಮೂಲಸೌಕರ್ಯ ಯೋಜನೆಗೆ ವೇಗ ನೀಡಲಾಗಿದೆ. ಮಧ್ಯವರ್ತಿ, ಕಮಿಷನ್​ ಇಲ್ಲದೆ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವುದರಿಂದ ಸಣ್ಣ ಸಣ್ಣ ರೈತರಿಗೆ ಲಾಭವಾಗಲಿದೆ.  ಇನ್ನು ಈ ಹಣವನ್ನು ರೈತರು ಬಿತ್ತನೆ ಬೀಜ ಖರೀದಿಗೆ ಬಳಕೆ ಮಾಡಬಹುದು. ರೈತ ಉತ್ಪಾದಕ ಸಂಘಗಳು ದೊಡ್ಡ ಮಟ್ಟದಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಅಷ್ಟೇ ಅಲ್ಲ, ಸಂಶೋಧನೆ, ಅನ್ವೇಷಣೆಗಳಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  Haryana Landslide: ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಭೂಕುಸಿತ; 12ಕ್ಕೂ ಹೆಚ್ಚು ವಾಹನಗಳು ನೆಲಸಮ, 15 ಜನ ನಾಪತ್ತೆ

Published On - 2:10 pm, Sat, 1 January 22

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ