AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ

Pradhan Mantri Kisan Samman Nidhi: ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು.

ಕೊರೊನಾ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಾಗಿದೆ: ಪ್ರಧಾನಿ ಮೋದಿ
ಇಂದು ಪಿಎಂ ಕಿಸಾನ್​ 10ನೇ ಕಂತು ಉದ್ಘಾಟಿಸಿದ ಪಿಎಂ ಮೋದಿ
TV9 Web
| Updated By: Lakshmi Hegde|

Updated on:Jan 01, 2022 | 2:37 PM

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಕಿಸಾನ್​ ಸಮ್ಮಾನ್​ ನಿಧಿ(Pradhan Mantri Kisan Samman Nidhi)ಯ 10ನೇ ಕಂತಿನ ಹಣ ಬಿಡುಗಡೆ ಮಾಡಿದರು. ಒಟ್ಟು 10 ಕೋಟಿ ಫಲಾನುಭವಿ ರೈತರ ಖಾತೆಗೆ 20 ಸಾವಿರ ಕೋಟಿ ರೂ.ಬಿಡುಗಡೆ ಮಾಡಿ ಮಾತನಾಡಿದ ಅವರು,  2021ರಲ್ಲಿ ಕೊರೊನಾ ವಿರುದ್ಧ ನಾವು ಸೆಣೆಸಾಡಿದ್ದೇವೆ. ನಾವು ಇನ್ನು ಮುಂದೆ ಹೊಸ ಸಂಕಲ್ಪದತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು. ಇದುವರೆಗೆ 145 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಇದು ಸಾಧಿತವಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಆದರೆ ಸಂಘಟಿತ ಶಕ್ತಿಯಿಂದ ಈ ಗೆಲುವು ಸಿಕ್ಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.  

ಕೊರೊನಾ ಕಾಲದಲ್ಲಿ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ವೃದ್ಧಿಯಾಗಿದೆ. ಅನೇಕ ಹೊಸ ಮೆಡಿಕಲ್ ಕಾಲೇಜುಗಳು ನಿರ್ಮಾಣಗೊಂಡಿವೆ. ಆಯುಷ್ಮಾನ್ ಭಾರತ್​ ಡಿಜಿಟಲ್​ ಹೆಲ್ತ್ ಮಿಷನ್​​ನಿಂದ ಅಪಾರ ಅನುಕೂಲವಾಗಿದೆ. ಭಾರತಕ್ಕೆ ವಿಶ್ವ ದಾಖಲೆಮಟ್ಟದಲ್ಲಿ ವಿದೇಶಿ ಹೂಡಿಕೆ ಹರಿದುಬಂದಿದೆ. ಡಿಜಿಟಲ್​ ಪಾವತಿ ಮೂಲಕ ಹಣ ವರ್ಗಾವಣೆ ಹೆಚ್ಚಾಗಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ, ಪದ್ಮ ಪ್ರಶಸ್ತ್ರಿ ಪುರಸ್ಕೃತರನ್ನು ನೆನಪಿಸಿಕೊಂಡ ಅವರು, ಆ ಸಾಧಕರ ಮುಖ ನೋಡಿದರೇ ಆನಂದವಾಗುತ್ತದೆ ಎಂದರು.

ವೈಷ್ಣೋ ದೇವಿ ದೇಗುಲ ದುರಂತದ ಪ್ರಸ್ತಾಪ ಇನ್ನು ಈ ಸಮಾರಂಭದಲ್ಲಿ ಭಾಷಣ ಮಾಡುವುದಕ್ಕೂ ಮೊದಲು ಪ್ರಧಾನಿ ಮೋದಿಯವರು, ವೈಷ್ಣೋದೇವಿ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಮಾತಾ ವೈಷ್ಣೋದೇವಿ ದೇಗುಲದ ಆವರಣದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರಿಗೆ ನನ್ನ ಶ್ರದ್ಧಾಂಜಲಿಗಳು. ಈ ಸಂಬಂಧ ಜಮ್ಮು-ಕಾಶ್ಮೀರ ಸರ್ಕಾರದೊಂದಿಗೆ ನಮ್ಮ ಕೇಂದ್ರ ಸರ್ಕಾರ ಸಂಪರ್ಕದಲ್ಲಿದ್ದು, ವರದಿ ಕೇಳುತ್ತಿದೆ. ನಾನು ಈಗಾಗಲೇ ಅಲ್ಲಿನ ಲೆಫ್ಟಿನೆಂಟ್ ಗವರ್ನರ್​ ಮನೋಜ್​ ಸಿನ್ಹಾ ಬಳಿ ಮಾತನಾಡಿದ್ದೇನೆ. ಗಾಯಗೊಂಡವರ ಚಿಕಿತ್ಸೆಗಾಗಿ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹಾಗೇ, ರೈತರು ವಿದ್ಯುತ್​ ಉತ್ಪಾದಕರಾಗಲು ನೆರವು ನೀಡುವುದಾಗಿ ತಿಳಿಸಿದ ಪ್ರಧಾನಿ ಮೋದಿ, ಬೀದಿ ದೀಪಗಳನ್ನು ಎಲ್​ಇಡಿ ಲೈಟ್​ ಆಗಿ ಬದಲಾವಣೆ ಮಾಡುವುದಾಗಿ ಹೇಳಿದರು. 2021ರಲ್ಲಿ ಭಾರತ ಸಾಧಿಸಿದ ಸುಧಾರಣೆಗಳ ಚರ್ಚೆಯಾಗಬೇಕು. ಪಿಎಂ ಗತಿಶಕ್ತಿ ಮಾಸ್ಟರ್ ಪ್ಲ್ಯಾನ್ ಮೂಲಕ ಮೂಲಸೌಕರ್ಯ ಯೋಜನೆಗೆ ವೇಗ ನೀಡಲಾಗಿದೆ. ಮಧ್ಯವರ್ತಿ, ಕಮಿಷನ್​ ಇಲ್ಲದೆ ನೇರವಾಗಿ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವುದರಿಂದ ಸಣ್ಣ ಸಣ್ಣ ರೈತರಿಗೆ ಲಾಭವಾಗಲಿದೆ.  ಇನ್ನು ಈ ಹಣವನ್ನು ರೈತರು ಬಿತ್ತನೆ ಬೀಜ ಖರೀದಿಗೆ ಬಳಕೆ ಮಾಡಬಹುದು. ರೈತ ಉತ್ಪಾದಕ ಸಂಘಗಳು ದೊಡ್ಡ ಮಟ್ಟದಲ್ಲಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಅಷ್ಟೇ ಅಲ್ಲ, ಸಂಶೋಧನೆ, ಅನ್ವೇಷಣೆಗಳಿಗೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:  Haryana Landslide: ಹರಿಯಾಣದ ಗಣಿಗಾರಿಕೆ ಪ್ರದೇಶದಲ್ಲಿ ಭಾರೀ ಭೂಕುಸಿತ; 12ಕ್ಕೂ ಹೆಚ್ಚು ವಾಹನಗಳು ನೆಲಸಮ, 15 ಜನ ನಾಪತ್ತೆ

Published On - 2:10 pm, Sat, 1 January 22

ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು: ಸಿಟಿ ರವಿ ಆರೋಪ
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
ಕೊಪ್ಪಳದಲ್ಲಿ ಯೂರಿಯಾಗಾಗಿ ಒಂದು ಕಿಮೀ ವರೆಗೂ ಸರತಿ ಸಾಲಿನಲ್ಲಿ ನಿಂತ ರೈತರು‌
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
VIDEO: ಬರೋಬ್ಬರಿ 109 ಮೀಟರ್ ಸಿಕ್ಸ್​ ಸಿಡಿಸಿದ ಟಿಮ್ ಡೇವಿಡ್
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
Assembly Session Live: ವಿಧಾನಸಭೆ ಅಧಿವೇಶನ ನೇರಪ್ರಸಾರ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
ಭೀಮ ಹೆಸರಿಗೆ ತಕ್ಕಂತೆ ಗಜಪಡೆಯಲ್ಲಿ ಎಲ್ಲರಿಗಿಂತ ಹೆಚ್ಚು ತೂಕದ ಆನೆ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
‘ನನ್ನ ಅಮೂಲ್ಯ 8 ವರ್ಷ ವ್ಯರ್ಥವಾಗಿದೆ’; ಧ್ರುವ ಬಗ್ಗೆ ರಾಘವೇಂದ್ರ ಹೊಸ ಆರೋಪ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಅಪಘಾತದಲ್ಲಿ ಮೃತಪಟ್ಟ ಪತ್ನಿಯನ್ನು ಬೈಕ್​ನಲ್ಲಿ ಕಟ್ಟಿ ಹೊತ್ತೊಯ್ದ ಪತಿ
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್
ಕೊನೆಯ ಓವರ್​ನಲ್ಲಿ 7 ರನ್​ಗಳ​ ಗುರಿ ನಿಯಂತ್ರಿಸಿ ಪಂದ್ಯ ಗೆಲ್ಲಿಸಿದ ಆಶಿಶ್