AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿಯಿಂದ 109 ಹವಾಮಾನ ನಿರೋಧಕ ಬೀಜ ಪ್ರಭೇದಗಳ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಪುಸಾ ಕ್ಯಾಂಪಸ್‌ನಲ್ಲಿ 3 ಪ್ರಾಯೋಗಿಕ ಕೃಷಿ ಪ್ಲಾಟ್‌ಗಳಲ್ಲಿ ಬೀಜಗಳನ್ನು ಅನಾವರಣಗೊಳಿಸಿದರು. ಅಲ್ಲಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಭಿವೃದ್ಧಿಪಡಿಸಿದ ಈ ಅಧಿಕ-ಇಳುವರಿಯ ಹಾಗೂ ಹವಾಮಾನ-ನಿರೋಧಕ ಬೀಜಗಳು 34 ಕ್ಷೇತ್ರ ಬೆಳೆಗಳು ಮತ್ತು 27 ತೋಟಗಾರಿಕಾ ಪ್ರಭೇದಗಳನ್ನು ಒಳಗೊಂಡಂತೆ 61 ಬೆಳೆಗಳನ್ನು ಒಳಗೊಂಡಿವೆ.

ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಪ್ರಧಾನಿ ಮೋದಿಯಿಂದ 109 ಹವಾಮಾನ ನಿರೋಧಕ ಬೀಜ ಪ್ರಭೇದಗಳ ಬಿಡುಗಡೆ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Aug 11, 2024 | 2:06 PM

Share

ನವದೆಹಲಿ: ಕೃಷಿ ಉತ್ಪಾದಕತೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 109 ಅಧಿಕ ಇಳುವರಿ ನೀಡುವ, ಹವಾಮಾನ-ನಿರೋಧಕ ಮತ್ತು ಜೈವಿಕ ಬಲವರ್ಧಿತ ಬೀಜ ತಳಿಗಳ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ಬಿಡುಗಡೆ ಮಾಡಿದರು. ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ (ICAR) ಅಭಿವೃದ್ಧಿಪಡಿಸಿದ ಈ ಪ್ರಭೇದಗಳು 34 ಕ್ಷೇತ್ರ ಬೆಳೆಗಳು ಮತ್ತು 27 ತೋಟಗಾರಿಕಾ ಬೆಳೆಗಳು ಸೇರಿದಂತೆ 61 ಬೆಳೆಗಳನ್ನು ಒಳಗೊಂಡಿವೆ.

ಇಂದು ಪ್ರಧಾನಿ ಮೋದಿ ಅವರು ದೆಹಲಿಯ ಪುಸಾ ಕ್ಯಾಂಪಸ್‌ನಲ್ಲಿ ಮೂರು ಪ್ರಾಯೋಗಿಕ ಕೃಷಿ ಪ್ಲಾಟ್‌ಗಳಲ್ಲಿ ಈ ಬೀಜಗಳನ್ನು ಅನಾವರಣಗೊಳಿಸಿದರು. ಅಲ್ಲಿ ಅವರು ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಕ್ಷೇತ್ರ ಬೆಳೆ ಪ್ರಭೇದಗಳಲ್ಲಿ ಧಾನ್ಯಗಳು, ರಾಗಿ, ಮೇವಿನ ಬೆಳೆಗಳು, ಎಣ್ಣೆಕಾಳುಗಳು, ದ್ವಿದಳ ಧಾನ್ಯಗಳು, ಕಬ್ಬು, ಹತ್ತಿ ಮತ್ತು ನಾರಿನ ಬೆಳೆಗಳು ಸೇರಿವೆ.

ಇದನ್ನೂ ಓದಿ: ಟೀ ಮೀಟಿಂಗ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಭಾಗಿ

ತೋಟಗಾರಿಕೆಗಾಗಿ ಪ್ರಧಾನಮಂತ್ರಿಯವರು ಹೊಸ ಬಗೆಯ ಹಣ್ಣುಗಳು, ತರಕಾರಿಗಳು, ತೋಟದ ಬೆಳೆಗಳು, ಗೆಡ್ಡೆಗಳು, ಮಸಾಲೆಗಳು, ಹೂವುಗಳು ಮತ್ತು ಔಷಧೀಯ ಸಸ್ಯಗಳನ್ನು ಬಿಡುಗಡೆ ಮಾಡಿದರು.

ಭಾರತದಲ್ಲಿನ ಅಪೌಷ್ಟಿಕತೆಯನ್ನು ಎದುರಿಸಲು ಮಧ್ಯಾಹ್ನದ ಊಟ ಯೋಜನೆ ಮತ್ತು ಅಂಗನವಾಡಿ ಸೇವೆಗಳಂತಹ ಸರ್ಕಾರಿ ಉಪಕ್ರಮಗಳಿಗೆ ಅವುಗಳನ್ನು ಲಿಂಕ್ ಮಾಡುವ ಮೂಲಕ ಜೈವಿಕ ಬಲವರ್ಧಿತ ಬೆಳೆ ಪ್ರಭೇದಗಳ ಪ್ರಚಾರಕ್ಕೂ ಮೋದಿ ಒತ್ತು ನೀಡಿದರು.

ಇದನ್ನೂ ಓದಿ: ವಯನಾಡು ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿ, ಸಂತ್ರಸ್ತರ ಕಷ್ಟಗಳ ಆಲಿಸಿದ ಮೋದಿ

23 ಬೀಜದ ಧಾನ್ಯಗಳು, 9 ಅಕ್ಕಿ, 2 ಗೋಧಿ, 1 ಬಾರ್ಲಿ, 6 ಜೋಳ, 1 ಜೋಳ, 1 ರಾಗಿ, 2 ಅರ್ಹರ್, 2 ಅವರೆ, 3 ಉದ್ದಿನಬೇಳೆ, 1 ಅವರೆಕಾಳು, 2 ಹೆಸರುಬೇಳೆ, 7 ಎಣ್ಣೆಕಾಳುಗಳು ಮುಂತಾದವನ್ನು ಒಳಗೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ