AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಬಿಡುಗಡೆ; 9.4 ಕೋಟಿ ರೈತರಿಗೆ 20,000 ಕೋಟಿ ರೂ. ಜಮಾ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತನ್ನು ಇಂದು ಮಹಾರಾಷ್ಟ್ರದಲ್ಲಿ ಬಿಡುಗಡೆ ಮಾಡಿದರು. ಈ ಮೂಲಕ 9.4 ಕೋಟಿ ರೈತರಿಗೆ 20,000 ಕೋಟಿ ರೂ.ಗಳನ್ನು ಒದಗಿಸಿದರು. ಕೃಷಿ ಬೆಂಬಲ ಮತ್ತು ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಬಲಪಡಿಸಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿಯ 18ನೇ ಕಂತು ಬಿಡುಗಡೆ; 9.4 ಕೋಟಿ ರೈತರಿಗೆ 20,000 ಕೋಟಿ ರೂ. ಜಮಾ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Oct 05, 2024 | 3:51 PM

Share

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 18ನೇ ಕಂತನ್ನು ಮಹಾರಾಷ್ಟ್ರದ ವಾಶಿಮ್‌ನಲ್ಲಿ ಅಕ್ಟೋಬರ್ 5ರಂದು ಬಿಡುಗಡೆ ಮಾಡಿದರು. ಈ ಮಹತ್ವದ ಘಟನೆಯು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಆರ್ಥಿಕ ಪ್ರಯೋಜನಗಳನ್ನು ಒದಗಿಸಿದೆ.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದ ಸಿ.ಪಿ. ರಾಧಾಕೃಷ್ಣನ್, ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ರಾಜೀವ್ ರಂಜನ್ ಸಿಂಗ್, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಮುಂಬೈನಲ್ಲಿ ನಾಳೆ 32,800 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

732 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), 1 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ವೆಬ್‌ಕಾಸ್ಟ್ ಮೂಲಕ ದೇಶಾದ್ಯಂತ 5 ಲಕ್ಷ ಸಾಮಾನ್ಯ ಸೇವಾ ಕೇಂದ್ರಗಳು ಸೇರಿದಂತೆ ಸುಮಾರು 2.5 ಕೋಟಿ ರೈತರು ಈ ಕಾರ್ಯಕ್ರಮದಲ್ಲಿ ಸೇರಿದ್ದಾರೆ. ಬಿಡುಗಡೆಯ ದಿನವನ್ನು PM-KISAN Utsav Divas ಎಂದು ಆಚರಿಸುವ ವಿಶೇಷ ಕಾರ್ಯಕ್ರಮಗಳನ್ನು ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಯೋಜಿಸಲಾಗಿದೆ.

2019ರ ಫೆಬ್ರವರಿ 24ರಂದು ಪ್ರಾರಂಭವಾದ PM-KISAN ಯೋಜನೆಯು 3 ಸಮಾನ ಕಂತುಗಳಲ್ಲಿ ಭೂಮಿ ಹೊಂದಿರುವ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳನ್ನು ಒದಗಿಸುತ್ತದೆ. ಪ್ರಧಾನಮಂತ್ರಿಯವರು ಪಿಎಂ-ಕಿಸಾನ್‌ನ 18ನೇ ಕಂತನ್ನು ಅಕ್ಟೋಬರ್ 5ರಂದು ಬಿಡುಗಡೆ ಮಾಡಿದ್ದಾರೆ. 18ನೇ ಕಂತಿನ ಬಿಡುಗಡೆಯೊಂದಿಗೆ ಈ ಯೋಜನೆಯ ಅಡಿಯಲ್ಲಿ ಒಟ್ಟು ವಿನಿಯೋಗವು 3.45 ಲಕ್ಷ ಕೋಟಿ ರೂ.ಗಳನ್ನು ಮೀರುತ್ತದೆ. ಇದು ರಾಷ್ಟ್ರವ್ಯಾಪಿ 11 ಕೋಟಿಗೂ ಹೆಚ್ಚು ರೈತರಿಗೆ ಬೆಂಬಲ ನೀಡುತ್ತದೆ. ಗ್ರಾಮೀಣ ಅಭಿವೃದ್ಧಿ ಮತ್ತು ಕೃಷಿ ಸಮೃದ್ಧಿಗೆ ಸರ್ಕಾರದ ಬದ್ಧತೆಯನ್ನು ಮತ್ತಷ್ಟು ಪುನರುಚ್ಚರಿಸುತ್ತದೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಚಿವಾಲಯದ ಮೂರನೇ ಮಹಡಿಯಿಂದ ಹಾರಿದ ಡೆಪ್ಯೂಟಿ ಸ್ಪೀಕರ್

ಮಹಾರಾಷ್ಟ್ರದಲ್ಲಿ ಈ ಯೋಜನೆಯ 17 ಕಂತುಗಳಲ್ಲಿ ಸುಮಾರು 1.20 ಕೋಟಿ ರೈತರಿಗೆ ಸುಮಾರು 32,000 ಕೋಟಿ ರೂ.ಗಳನ್ನು ವರ್ಗಾಯಿಸಲಾಗಿದೆ. ಇದು ಭಾರತದ ಎಲ್ಲಾ ರಾಜ್ಯಗಳಲ್ಲಿ ಎರಡನೇ ಅತಿ ಹೆಚ್ಚು. 18ನೇ ಕಂತಿನಲ್ಲಿ ಸುಮಾರು 91.51 ಲಕ್ಷ ರೈತರು 1,900 ಕೋಟಿ ರೂ.ಗೂ ಅಧಿಕ ಲಾಭ ಪಡೆಯಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ