AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ವಾಂಸರ ವ್ಯಾಖ್ಯಾನವಿರುವ ಭಗವದ್ಗೀತೆಯ 11 ಸಂಪುಟ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Bhagavad Gita: ಭಗವದ್ಗೀತೆಯು ಇಡೀ ಜಗತ್ತಿನದು. ಗೀತೆಯನ್ನು ವಿಶ್ವದ ಭಾಷೆಗಳಿಗೆ ಭಾಷಾಂತರಿಸಲಾಗಿದೆ. ವಿವಿಧ ದೇಶಗಳು ಭಗವದ್ಗೀತೆಯ ಮೇಲೆ ಅಧ್ಯಯನ ಕೈಗೊಂಡಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು.

ವಿದ್ವಾಂಸರ ವ್ಯಾಖ್ಯಾನವಿರುವ ಭಗವದ್ಗೀತೆಯ 11 ಸಂಪುಟ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಭಗವದ್ಗೀತೆ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ
TV9 Web
| Updated By: ganapathi bhat|

Updated on:Apr 06, 2022 | 7:16 PM

Share

ದೆಹಲಿ: ದೇಶದ 21 ಘನ ವಿದ್ವಾಂಸರು ಬರೆದಿರುವ ಭಗವದ್ಗೀತೆಯ ವ್ಯಾಖ್ಯಾನದ ಹಸ್ತಪ್ರತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ಮಾರ್ಚ್ 9) ನಗರದ ಲೋಕ್ ಕಲ್ಯಾಣ್ ಮಾರ್ಗದಲ್ಲಿ ಬಿಡುಗಡೆಗೊಳಿಸಿದರು. 11 ಸಂಪುಟವನ್ನು ಒಳಗೊಂಡಿರುವ ಭಗವದ್ಗೀತೆಯ ಈ ಹಸ್ತಪ್ರತಿಯು ಶ್ಲೋಕಾರ್ಥ ಸಹಿತವಾಗಿದೆ. ಈ ಕೃತಿಯ ಬಿಡುಗಡೆ ವೇಳೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಕಾಂಗ್ರೆಸ್ ನಾಯಕ ಹಾಗೂ ಡಾ. ಕರಣ್ ಸಿಂಗ್ ಧರ್ಮಾರ್ಥ ಟ್ರಸ್ಟ್​ನ ಮುಖ್ಯಸ್ಥರೂ ಆಗಿರುವ ಡಾ. ಕರಣ್ ಸಿಂಗ್ ಹಾಜರಿದ್ದರು.

ಭಗವದ್ಗೀತೆಯು ಇಡೀ ಜಗತ್ತಿನದು. ಗೀತೆಯನ್ನು ವಿಶ್ವದ ಹಲವು ಭಾಷೆಗಳಿಗೆ ಭಾಷಾಂತರಿಸಲಾಗಿದೆ. ವಿವಿಧ ದೇಶಗಳು ಭಗವದ್ಗೀತೆಯ ಮೇಲೆ ಅಧ್ಯಯನ ಕೈಗೊಂಡಿವೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಭಾರತೀಯ ಸಂತ ಹಾಗೂ ತತ್ವಜ್ಞಾನಿಗಳಾಗಿದ್ದ ಆದಿ ಶಂಕರಾಚಾರ್ಯ, ರಾಮಾನುಜಾಚಾರ್ಯ, ಸ್ವಾಮಿ ವಿವೇಕಾನಂದರಂಥವರು ಹೇಗೆ ಭಗವದ್ಗೀತೆಯನ್ನು ಗ್ರಹಿಸಿದರು. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ ಚಂದ್ರ ಬೋಸ್ ಮತ್ತು ಬಾಲಗಂಗಾಧರ ತಿಲಕರು ಗೀತೆಯನ್ನು ಹೇಗೆ ಕಂಡರು ಎಂಬ ಬಗ್ಗೆಯೂ ಮೋದಿ ಮಾತನಾಡಿದರು.

ಭಾರತವನ್ನು ಏಕತೆ ಎಂಬ ಒಂದು ದಾರದ ಮೂಲಕ ಬಂಧಿಸಿದ್ದ ಆದಿ ಶಂಕರಾಚಾರ್ಯರು ಗೀತೆಯನ್ನು ಆಧ್ಯಾತ್ಮಿಕ ಪ್ರಜ್ಞೆಯಾಗಿ ಕಂಡರು. ರಾಮಾನುಜಾಚಾರ್ಯರು ಗೀತೆಯನ್ನು ಧಾರ್ಮಿಕ ಜ್ಞಾನಭಂಡಾರವಾಗಿ ಮುಂದಿಟ್ಟರು. ಸ್ವಾಮಿ ವಿವೇಕಾನಂದರು ಭಗವದ್ಗೀತೆಯನ್ನು ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲವಾಗಿ ನೋಡಿದರು ಎಂದು ಮೋದಿ ತಿಳಿಸಿದರು.

ಭಾರತೀಯ ಯುವಸಮುದಾಯವು ಭಗವದ್ಗೀತೆಯಂಥ ಕೃತಿಗಳನ್ನು ಓದಬೇಕು. ಜನರು ಅದನ್ನು ಹೊಸ ತಲೆಮಾರಿಗೆ ಪರಿಚಯಿಸಬೇಕು. ಸ್ವಾತಂತ್ರ್ಯ ಹೋರಾಟಕ್ಕೆ ಗೀತೆ ಹೇಗೆ ಶಕ್ತಿ ತುಂಬಿತು. ಆಧ್ಯಾತ್ಮಿಕ ಬಂಧನದಲ್ಲಿ ಗೀತೆ ದೇಶವನ್ನು ಹೇಗೆ ಒಟ್ಟಾಗಿರಿಸಿತು ಎಂದು ನಾವು ತಿಳಿಯಬೇಕು. ಅಧ್ಯಯನ ನಡೆಸಬೇಕು, ಬರೆಯಬೇಕು ಎಂದು ಮೋದಿ ಹೇಳಿದರು.

ಅತಿ ವಿರಳವಾದ, ಕೃತಿಕಾರರ ಸ್ವಂತ ಕೈಬರಹದ ಸಂಸ್ಕೃತ ಶ್ಲೋಕಾರ್ಥಗಳು ಈ ಪುಸ್ತಕದಲ್ಲಿ ಇರಲಿದೆ. ಹಸ್ತಪ್ರತಿಯನ್ನು ಧರ್ಮಾರ್ಥ ಟ್ರಸ್ಟ್ ಪ್ರಕಟಿಸಿದೆ.

ಇದನ್ನೂ ಓದಿ: Maitri Setu: ಭಾರತ-ಬಾಂಗ್ಲಾ ನಡುವಣ ‘ಮೈತ್ರಿ ಸೇತು’ ಸಂಪರ್ಕ ಸೇತುವೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಇದನ್ನೂ ಓದಿ: Womens Day 2021: ಇಂದು ಮಹಿಳಾ ಉದ್ಯಮಿಗಳಿಂದ ಭರ್ಜರಿ ಶಾಪಿಂಗ್​ ಮಾಡಿದ ಪ್ರಧಾನಿ ನರೇಂದ್ರ ಮೋದಿ..

Published On - 8:11 pm, Tue, 9 March 21

ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ