AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’9/11-ಮಾನವೀಯ ಮೌಲ್ಯಗಳನ್ನು ಸಾರಿದ ದಿನ ಮತ್ತು ಮಾನವೀಯತೆ ಮೇಲೆ ದಾಳಿಯಾದ ದಿನ‘-ಪ್ರಧಾನಿ ಮೋದಿ

1893ರಲ್ಲಿ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಭಾಷಣ ಮಾಡಿದ್ದನ್ನು ನೆನಪಿಸಿಕೊಂಡು ಇಂದು ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದರು. ಹಾಗೇ, ಅಮೆರಿಕದ ಮೇಲೆ ಅಲ್​-ಖೈದಾ ಉಗ್ರರ ದಾಳಿಯನ್ನೂ ನೆನಪಿಸಿದ್ದಾರೆ.

’9/11-ಮಾನವೀಯ ಮೌಲ್ಯಗಳನ್ನು ಸಾರಿದ ದಿನ ಮತ್ತು ಮಾನವೀಯತೆ ಮೇಲೆ ದಾಳಿಯಾದ ದಿನ‘-ಪ್ರಧಾನಿ ಮೋದಿ
ಪಿಎಂ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on:Sep 11, 2021 | 1:32 PM

Share

ದೆಹಲಿ: ಭಾರತ ಅಳವಡಿಸಿಕೊಂಡು, ಜಗತ್ತಿಗೇ ಸಾರುತ್ತಿರುವ ಮಾನವೀಯ ಮೌಲ್ಯಗಳ ಮೂಲಕ, 9/11ರ ದಾಳಿಯಂಥ ದುರಂತಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಹೇಳಿದ್ದಾರೆ. ಇಂದು ಗುಜರಾತ್​ನ ಅಹ್ಮದಾಬಾದ್​ನಲ್ಲಿ ಸರ್ದಾರಧಾಮ ಭವನ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.  ಸೆಪ್ಟೆಂಬರ್​ 11 ನಮಗೆ ಇನ್ನೊಂದು ಕಾರಣಕ್ಕೆ ಅತ್ಯಂತ ಮುಖ್ಯದಿನವಾಗಿದೆ. 1893ರ ಈ ದಿನದಂದು ಸ್ವಾಮಿ ವಿವೇಕಾನಂದರು ಅಮೆರಿಕದ ಚಿಕಾಗೋದಲ್ಲಿ ಭಾಷಣ ಮಾಡಿದ್ದರು. ಅಂದು ಮಾನವೀಯ ಮೌಲ್ಯಗಳನ್ನು ಸಾರಿದ್ದರು. ಅದೇ ದಿನ ಈ ಸರ್ದಾರ ಧಾಮ ಭವನ ಕೂಡ ಉದ್ಘಾಟನೆಯಾಗುತ್ತಿದೆ ಎಂದೂ ನರೇಂದ್ರ ಮೋದಿ ಹೇಳಿದ್ದಾರೆ.  

ಹಾಗೇ, 2001ರ ಸೆಪ್ಟೆಂಬರ್​ 11ರಂದು ಅಮೆರಿಕದ ಮೇಲೆ ನಡೆದ ಅಲ್​-ಖೈದಾ ಉಗ್ರ ದಾಳಿಯನ್ನು ನೆನೆಪಿಸಿಕೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ, 9/11 ಈ ದಿನ ಜಾಗತಿಕ ಇತಿಹಾಸದಲ್ಲಿ ಕಾರಣಕ್ಕೆ ಮುಖ್ಯ ಎಂದುಕೊಳ್ಳುತ್ತೇನೆ. ಇದೇ ದಿನದಂದು ಭಾರತ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿತ್ತು. ಹಾಗೇ, ಅದೇ 9/11ರಂದು ಮನುಕುಲದ ಮೇಲೆ ಭಯಂಕರ ದಾಳಿಯಾಯಿತು ಎಂದು ಹೇಳಿದರು.

ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿ 1893ರಲ್ಲಿ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಭಾಷಣ ಮಾಡಿದ್ದನ್ನು ನೆನಪಿಸಿಕೊಂಡು ಇಂದು ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದರು. ಅಂದು ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣವನ್ನು ಶೇರ್ ಮಾಡಿದ ನರೇಂದ್ರ ಮೋದಿ, 1893ರಲ್ಲಿ ಸ್ವಾಮಿ ವಿವೇಕಾನಂದರು ಅಮೆರಿಕದ ಚಿಕಾಗೋದಲ್ಲಿ ಮಾಡಿದ ಭಾಷಣದಲ್ಲಿ ಭಾರತದ ಸಂಸ್ಕೃತಿಯ ಸೊಬಗನ್ನು ಅತ್ಯಂತ ಸುಂದರವಾಗಿ ತೆರೆದಿಟ್ಟರು. ಅವರ ಮಾತಿನ ಚೈತನ್ಯಕ್ಕೆ ಸಮೃದ್ಧ, ಅಂತರ್ಗತ ಮತ್ತು ನ್ಯಾಯಯುತವಾದ ಜಗತ್ತನ್ನು ಸೃಷ್ಟಿಸುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Samantha: ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡ ಸಮಂತಾ; ಫೋಟೋ ನೋಡಿ ಅಭಿಮಾನಿಗಳು ಫುಲ್ ಖುಷ್

US Open 2021: ದಾಖಲೆಯ 31ನೇ ಬಾರಿ ಗ್ರ್ಯಾನ್ ಸ್ಲಾಮ್ ಫೈನಲ್​ಗೆ ಜೋಕೊವಿಚ್: ಇತಿಹಾಸ ನಿರ್ಮಿಸುವ ಅವಕಾಶ

Published On - 1:31 pm, Sat, 11 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ