AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ

ಮೂರು ರಾಷ್ಟ್ರಗಳ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತಕ್ಕೆ ಹಿಂದಿರುಗಿದ್ದು, ದೆಹಲಿ ಏರ್​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ.

Narendra Modi: 3 ರಾಷ್ಟ್ರಗಳ ಪ್ರವಾಸ ಮುಗಿಸಿ ದೆಹಲಿಗೆ ಹಿಂದಿರುಗಿದ ಪ್ರಧಾನಿ ಮೋದಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ಪ್ರಧಾನಿ ನರೇಂದ್ರ ಮೋದಿ
ನಯನಾ ರಾಜೀವ್
|

Updated on: May 25, 2023 | 8:02 AM

Share

ಮೂರು ರಾಷ್ಟ್ರಗಳ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತಕ್ಕೆ ಹಿಂದಿರುಗಿದ್ದು, ದೆಹಲಿ ಏರ್​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸ್ವಾಗತಿಸಿದರು. ಪ್ರಧಾನಿ ನರೇಂದ್ರ ಮೋದಿ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾ ಪ್ರವಾಸ ಮುಗಿಸಿ ಹಿಂದಿರುಗಿದ್ದಾರೆ. ಮೂರು ದೇಶಗಳ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಮರಳಿದ್ದಾರೆ. ಅವರ ವಿಮಾನವು ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 5:10 ರ ಸುಮಾರಿಗೆ ಇಳಿಯಿತು. ಈ ವೇಳೆ ಹಲವು ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ತ್ರಿವರ್ಣ ಧ್ವಜ ಹಾಗೂ ವಿಶ್ವದ ನೆಚ್ಚಿನ ನಾಯಕ ಎಂಬ ಬೋರ್ಡ್​ ಹಿಡಿದು ನಿಂತಿದ್ದರು.

‘ಕಳೆದ ಆರು ದಿನಗಳಲ್ಲಿ ಪ್ರಧಾನಿ ಮೋದಿ ಜಪಾನ್, ಪಪುವಾ ನ್ಯೂ ಗಿನಿಯಾ ಮತ್ತು ಆಸ್ಟ್ರೇಲಿಯಾದಲ್ಲಿ ಹಲವು ಸಭೆಗಳನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಮಾತು: ಈ ಪ್ರವಾಸದಲ್ಲಿ ನನಗೆ ಲಭ್ಯವಾದ ಸಮಯವನ್ನು ನಾನು ದೇಶದ ಬಗ್ಗೆ ಮಾತನಾಡಲು ಹಾಗೂ ದೇಶದ ಒಳಿತಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಂಪೂರ್ಣವಾಗಿ ಬಳಸಿದ್ದೇನೆ, ಈಗ ಸವಾಲುಗಳು ದೊಡ್ಡದಾಗಿವೆ, ಈ ಸವಾಲುಗಳಿಗೆ ಸವಾಲು ಹಾಕುವುದು ನನ್ನ ಸ್ವಭಾವ ಎಂದರು.

ಮತ್ತಷ್ಟು ಓದಿ: ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನೊಬೆಲ್ ಪ್ರಶಸ್ತಿ ವಿಜೇತ ಬ್ರಿಯಾನ್ ಪಿ ಸ್ಮಿತ್ ಯಾರು?

ಕೊರೊನಾದಿಂದ ಪರಿಸ್ಥಿತಿ ಕೆಟ್ಟು ನಿಂತಾಗ ವಿಶ್ವದ ಶ್ರೀಮಂತ ರಾಷ್ಟ್ರಗಳು ಸಹ ಕೊರೊನಾಗೆ ತುತ್ತಾಗಿದ್ದವು, ನಮ್ಮ ಅನೇಕ ಕುಟುಂಬಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿವೆ, ಆದರೆ ನಾನು ವಿದೇಶದಲ್ಲಿ ಜನರನ್ನು ಭೇಟಿಯಾದಾಗ ಅವರ ಕಣ್ಣಲ್ಲಿ ನೀರು ತುಂಬಿತ್ತು, ನೀವು ನಮಗೆ ಲಸಿಕೆ ಕೊಟ್ಟಿದ್ದರಿಂದ ನಾವು ಬದುಕಿದ್ದೇವೆ ಎಂದು ಅವರ ಕಣ್ಣುಗಳು ಹೇಳುತ್ತಿದ್ದವು, ಭಾರತದ ಲಸಿಕೆ ಪ್ರಪಂಚದ ಕೋಟ್ಯಂತರ ಜನರ ಜೀವನದ ಕಾಳಜಿವಹಿಸಿದೆ ಎಂದು ಹೇಳಿದರು.

ಇದು ಬುದ್ಧ, ಗಾಂಧಿಯ ನಾಡು ನಾವು ನಮ್ಮ ಶತ್ರುಗಳಿಗೆ ಕೂಡ ಸಹಾಯ ಮಾಡುತ್ತೇವೆ, ನಮ್ಮ ಜನರು ಸಹಾನುಭೂತಿಯಿಂದ ಕೂಡಿರುವವರು, ನಾವು ಹಾಗೆಯೇ ಮುನ್ನಡೆಯುತ್ತೇವೆ. ಆಸ್ಟ್ರೇಲಿಯಾ ಇಂದು ಭಾರತವನ್ನು ತನ್ನದೇ ಎಂದು ಪರಿಗಣಿಸುತ್ತಿದೆ, ಗೌರವದಿಂದ ಕಾಣುತ್ತಿದೆ, ನಾನು ವಿಶ್ವದ ಮೂಲೆ ಮೂಲೆಗಳಿಗೆ ಹೋಗುತ್ತೇನೆ, ಭಾರತದ ಯುವ ಪೀಳಿಕೆಯ ಪ್ರತಿಭೆಯನ್ನು ಸಾರುತ್ತೇನೆ, ರಾಷ್ಟ್ರದ ಸಂಸ್ಕೃತಿಯನ್ನು ವೈಭವೀಕರಿಸುವಾಗ ಎಂದೂ ಹಿಂದೆ ಸರಿಯುವುದಿಲ್ಲ.

ಪಪುವಾ ನ್ಯೂ ಗಿನಿಯಾದಲ್ಲಿ ತಮಿಳಿನ ಕೃತಿ ತಿರುಕ್ಕುರಳ್​ ಅನ್ನು ಟೋಕ್ ಪಿಸಿನ್ ಭಾಷೆಗೆ ಅನುವಾದಿಸಿರುವ ಪುಸ್ತಕವನ್ನು ಬಿಡುಗಡೆ ಮಾಡುವ ಅವಕಾಶ ದೊರೆಯಿತು ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ