AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೇರಳದಲ್ಲಿ ಲಸಿಕೆ ವ್ಯರ್ಥವಾಗುತ್ತಿಲ್ಲ’ ಪಿಣರಾಯಿ ವಿಜಯನ್ ಟ್ವೀಟ್ ರೀಟ್ವೀಟ್ ಮಾಡಿ ಶ್ಲಾಘಿಸಿದ ನರೇಂದ್ರ ಮೋದಿ

Vaccine Wastage: ಕೊವಿಡ್-19 ವಿರುದ್ಧದ ಹೋರಾಟ ಬಲಪಡಿಸಲು ಲಸಿಕೆ ಪೋಲಾಗದಂತೆ ನೋಡಿಕೊಳ್ಳುವುದು ತುಂಬಾ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

‘ಕೇರಳದಲ್ಲಿ ಲಸಿಕೆ ವ್ಯರ್ಥವಾಗುತ್ತಿಲ್ಲ’ ಪಿಣರಾಯಿ ವಿಜಯನ್ ಟ್ವೀಟ್ ರೀಟ್ವೀಟ್ ಮಾಡಿ ಶ್ಲಾಘಿಸಿದ ನರೇಂದ್ರ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: May 05, 2021 | 2:26 PM

Share

ದೆಹಲಿ: ಮೂರನೇ ಹಂತದ ಕೊವಿಡ್ ಲಸಿಕೆ ಅಭಿಯಾನ ಮತ್ತು ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುತ್ತಿರುವ ಹೊತ್ತಲ್ಲಿ ಲಸಿಕೆಯನ್ನು ವ್ಯರ್ಥ ಮಾಡದೆ ಸದುಪಯೋಗ ಪಡಿಸುತ್ತಿರುವ ಆರೋಗ್ಯ ಕಾರ್ಯಕರ್ತರು, ದಾದಿಯರ ಪರಿಶ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್-19 ವಿರುದ್ಧದ ಹೋರಾಟ ಬಲಪಡಿಸಲು ಲಸಿಕೆ ಪೋಲಾಗದಂತೆ ನೋಡಿಕೊಳ್ಳುವುದು ತುಂಬಾ ಮುಖ್ಯ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಟ್ವೀಟ್ ನ್ನು ರೀಟ್ವೀಟ್ ಮಾಡಿದ ಮೋದಿ, ಲಸಿಕೆ ವ್ಯರ್ಥವನ್ನು ಕಡಿಮೆ ಮಾಡಲು ನಮ್ಮ ಆರೋಗ್ಯ ಕಾರ್ಯಕರ್ತರು ಮತ್ತು ದಾದಿಯರು ಮಾದರಿಯಾಗುತ್ತಿರುವುದು ಖುಷಿ ಕೊಡುತ್ತಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದಿಂದ ಕೇರಳ 73,38,806 ಡೋಸ್ ಲಸಿಕೆ ಪಡೆದಿತ್ತು. ನಾವು 74,26,164 ಡೋಸ್ ಲಸಿಕೆಗಳನ್ನು ವಿತರಣೆ ಮಾಡಿದ್ದಾರೆ. ಪ್ರತಿಯೊಂದು ವಯಲ್​ನಲ್ಲಿ ಲಸಿಕೆ ವ್ಯರ್ಥವಾಗದಂತೆ ನಾವು ನೋಡಿಕೊಂಡಿದ್ದೇವೆ. ನಮ್ಮ ಆರೋಗ್ಯ ಕಾರ್ಯಕರ್ತರು, ವಿಶೇಷವಾಗಿ ದಾದಿಯರಿಗೆ ಶ್ಲಾಘನೆಗಳು ಎಂದು ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

ಲಸಿಕೆ ಸಂಗ್ರಹವು ವೇಗವಾಗಿ ಕ್ಷೀಣಿಸುತ್ತಿರುವುದರಿಂದ ಲಸಿಕೆ ವ್ಯರ್ಥವಾಗುವುದನ್ನು ಕೇಂದ್ರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಬುಧವಾರ ಬೆಳಿಗ್ಗೆ 8 ಗಂಟೆಯವರೆಗೆ ಮೇಘಾಲಯ, ನಾಗಾಲ್ಯಾಂಡ್, ಬಿಹಾರ, ಪಂಜಾಬ್, ದಾದ್ರಾ ಮತ್ತು ನಗರ ಹವೇಲಿ, ಹರಿಯಾಣ, ಮಣಿಪುರ, ಅಸ್ಸಾಂ, ತಮಿಳುನಾಡು, ಲಕ್ಷದ್ವೀಪ ಶೇ 4.01 ರಿಂದ ಶೇ 9.76 ರವರೆಗೆ ವ್ಯರ್ಥವಾಗಿದೆ ಎಂದು ವರದಿ ಮಾಡಿದೆ. ಕೇರಳದಲ್ಲಿ ಕಡಿಮೆ ಲಸಿಕೆ ವ್ಯರ್ಥ ಶೇಕಡಾವಾರು ಇದೆ.

ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಲಸಿಕೆಗಳನ್ನು ವ್ಯರ್ಥವಾಗದಂತೆ ಮತ್ತು ಲಸಿಕೆಗಳು ಬಂದಾಗ ಬಳಸುವಂತೆ ಸಲಹೆ ನೀಡಿದ್ದರು. ಲಸಿಕೆ ಪಡೆಯಲು ಹಿಂಜರಿಯುವಿಕೆಯು ಲಸಿಕೆ ವ್ಯರ್ಥವಾಗುವುದಕ್ಕೆ ಒಂದು ಕಾರಣವಾಗಿದೆ. ಒಂದು ಬಾಟಲಿಯನ್ನು ತೆರೆದರೆ ಮತ್ತು ಸಾಕಷ್ಟು ಫಲಾನುಭವಿಗಳು ಬರದೇ ಇದ್ದರೆ ಅದು ವ್ಯರ್ಥವಾಗಬಹುದು.

ಬುಧವಾರ ಕೇಂದ್ರ ಸರ್ಕಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಇನ್ನೂ ಲಭ್ಯವಿರುವ ಲಸಿಕೆ ಡೋಸ್​ಗಳ ರಾಜ್ಯವಾರು ರೂಪರೇಖೆಯನ್ನು ನೀಡಿತು. ಪ್ರಸ್ತುತ ರಾಜ್ಯಗಳೊಂದಿಗೆ 94.47 ಲಕ್ಷಕ್ಕೂ ಹೆಚ್ಚು ಕೊವಿಡ್ -19 ಡೋಸ್ ಲಸಿಕೆ ಇವೆ. ಮುಂದಿನ ಮೂರು ದಿನಗಳಲ್ಲಿ 36 ಲಕ್ಷ ಡೋಸ್ ಅವುಗಳನ್ನು ತಲುಪಲಿವೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ

Shaktikanta Das Speech: ಕೊರೊನಾ ಲಸಿಕೆ ತಯಾರಕರು, ವೈದ್ಯಕೀಯ ಸೌಲಭ್ಯಕ್ಕಾಗಿ ಸಾಲ ನೀಡಲು 50 ಸಾವಿರ ಕೋಟಿ ರೂ.

(PM Narendra Modi retweets Pinarayi Vijayan’s message on reducing vaccine wastage in Kerala)

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!