AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ

PM Narendra Modi on Covid 19: ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಹರ್ಷವರ್ಧನ್, ವಾಣಿಜ್ಯ ಮತ್ತು ರೈಲ್ವೇ ಖಾತೆ ಸಚಿವ ಪಿಯೂಷ್ ಗೋಯೆಲ್ ಮುಂತಾದ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

1 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರಿರುವ ರಾಜ್ಯಗಳ ಸಂಪೂರ್ಣ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
guruganesh bhat
|

Updated on:May 06, 2021 | 5:30 PM

ದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ‌ಯನ್ನು ನಿಯಂತ್ರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿರುವ 12 ರಾಜ್ಯಗಳ ಕುರಿತು ಪರಾಮರ್ಶೆ ನಡೆಸಿ ಮಾಹಿತಿ ಪಡೆದರು. ದೇಶದಲ್ಲಿ ಕೊರೊನಾ​ ಲಸಿಕೆ ನೀಡುವ ವೇಗ ತಗ್ಗಬಾರದು. ಹೆಚ್ಚು ಸೋಂಕಿರುವ ರಾಜ್ಯಗಳಿಗೆ ಲಸಿಕೆ ಕೊರತೆ ಆಗಬಾರದು. ಲಾಕ್​ಡೌನ್ ನಡುವೆಯೂ ಜನರಿಗೆ ಕೊವಿಡ್​ ಲಸಿಕೆ ಸಿಗಬೇಕು. ಲಸಿಕೆ ಹಾಕಲು ನೇಮಿಸಿದ ಸಿಬ್ಬಂದಿಗೆ ಬೇರೆ ಕರ್ತವ್ಯ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೊರೊನಾ ಸೊಂಕು ಗಣನೀಯವಾಗಿ ಹೆಚ್ಚುತ್ತಿರುವ ಮಹಾರಾಷ್ಟ್ರ, ಕರ್ನಾಟಕ, ಕೇರಳ, ರಾಜಸ್ಥಾನ, ಗುಜರಾತ್ ಛತ್ತೀಸ್​ಗಢ, ಉತ್ತರಪ್ರದೇಶ, ಬಿಹಾರ, ತಮಿಳುನಾಡು, ಆಂಧ್ರಪ್ರದೇಶ, ದೆಹಲಿ ಮತ್ತು ಹರಿಯಾಣ ರಾಜ್ಯಗಳಲ್ಲಿನ ಕೊವಿಡ್ ಸೋಂಕಿತರ ಕುರಿತ ಮಾಹಿತಿ ಪಡೆದರು.

ಈಗಾಗಲೇ 17.7 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳಿಗೆ ಸರಬರಾಜು ಮಾಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ ಶೇಕಡಾ 31ರಷ್ಟು ಜನರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಲಾಗಿದೆ ಎಂದು ಪ್ರಧಾನಿಯವರಿಗೆ ತಿಳಿಸಿದ್ದಾಗಿ ಪ್ರಧಾನಮಂತ್ರಿ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕೊವಿಡ್ ಹೆಚ್ಚಳದಿಂದ ಲಾಕ್​ಡೌನ್ ಆದರೂ ಸಹ ಲಸಿಕೆ ವಿತರಣೆಯನ್ನು ನಿಲ್ಲಿಸಬಾರದು. ಕೊರೊನಾ ವಾರಿಯರ್ಸ್​ಗಳಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದರು. ಅಷ್ಟೇ ಅಲ್ಲದೇ, ಅತಿ ಹೆಚ್ಚು ಕೊವಿಡ್ ಪ್ರಕರಣಗಳು ದಾಖಲಾಗುತ್ತಿರುವ ಜಿಲ್ಲೆಗಳ ವಿವರವನ್ನು ಅವರು ಪಡೆದುಕೊಂಡರು. ಈ ಜಿಲ್ಲೆಗಳಲ್ಲಿ ಕೊವಿಡ್ ಸೋಂಕು ಹೆಚ್ಚುವುದನ್ನು ತಡೆಯಲು ಕೈಗೊಳ್ಳಬೇಕಾದ ಸೂಕ್ತ ನಿರ್ದೇಶನವನ್ನು ಅಧಿಕಾರಿಗಳಿಗೆ ಸೂಚಿಸಿದರು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ಆರೋಗ್ಯ ಸಚಿವ ಹರ್ಷವರ್ಧನ್, ವಾಣಿಜ್ಯ ಮತ್ತು ರೈಲ್ವೇ ಖಾತೆ ಸಚಿವ ಪಿಯೂಷ್ ಗೋಯೆಲ್ ಮುಂತಾದ ಸಚಿವರು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಮಕ್ಕಳಿಗೆ ಅಪಾಯ ಎಂಬ ಆತಂಕವಿರುವ ಕೊವಿಡ್ 3ನೇ ಅಲೆಯನ್ನು ಹೇಗೆ ನಿಭಾಯಿಸ್ತೀರಿ? ಭಾರತ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಕೊರೊನಾ ಸೋಂಕಿನ ನಡುವೆ ನಕಲಿ ವೈದ್ಯರ ಹಾವಳಿ; ಸಾರ್ವಜನಿಕರೇ ಎಚ್ಚರ

(PM Narendra Modi reviews covid 19 situation stresses vaccine distribution speed not came down)

Published On - 5:29 pm, Thu, 6 May 21

ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?