AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಸ್ತಾಪಿಸಲಾದ ಯೋಜನೆಗಳ ಪ್ರಗತಿ ಪರಿಶೀಲಿಸಿದ ಮೋದಿ

ಜನೌಷಧಿ ಮಳಿಗೆಗಳ ವ್ಯಾಪ್ತಿಯನ್ನು 10,000 ರಿಂದ 25,000 ಕ್ಕೆ ತ್ವರಿತವಾಗಿ ವಿಸ್ತರಿಸುವ ಯೋಜನೆಗಳು ಕೂಡಾ ಇದರಲ್ಲಿದೆ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಕೃಷಿ ಮತ್ತು ಸಂಬಂಧಿತ ಉದ್ದೇಶಗಳಿಗಾಗಿ 15,000 ಮಹಿಳಾ ಸ್ವಸಹಾಯ ಗುಂಪುಗಳನ್ನು (ಎಸ್‌ಎಚ್‌ಜಿ) ಡ್ರೋನ್‌ಗಳೊಂದಿಗೆ ಸಜ್ಜುಗೊಳಿಸುವ ಬಗ್ಗೆ ಮಾತನಾಡಿದ್ದರು.

ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಸ್ತಾಪಿಸಲಾದ ಯೋಜನೆಗಳ ಪ್ರಗತಿ ಪರಿಶೀಲಿಸಿದ ಮೋದಿ
ಪ್ರಧಾನಿ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Oct 10, 2023 | 9:04 PM

Share

ದೆಹಲಿ ಅಕ್ಟೋಬರ್ 10: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಮಂಗಳವಾರ ತಮ್ಮ ಸ್ವಾತಂತ್ರ್ಯ ದಿನಾಚರಣೆಯ (Independence Day speech) ಭಾಷಣದಲ್ಲಿ ಮಾಡಿದ ಘೋಷಣೆಗಳನ್ನು ಆಧರಿಸಿದ ಯೋಜನೆಗಳ ಪ್ರಗತಿಯ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಹಿಳೆಯರ ಕಲ್ಯಾಣಕ್ಕಾಗಿ ಯೋಜನೆಗಳ ಬಗ್ಗೆ ಇದರಲ್ಲಿ ಚರ್ಚೆ ನಡೆದಿದೆ. 2 ಕೋಟಿ ‘ಲಖ್‌ಪತ್ ದೀದಿ’ಗಳನ್ನು ಮಾಡುವುದರಿಂದ ಹಿಡಿದು 15,000 ಮಹಿಳಾ ಸ್ವಸಹಾಯ ಸಂಘಗಳನ್ನು ಡ್ರೋನ್‌ಗಳಿಂದ ಸಬಲೀಕರಣಗೊಳಿಸುವವರೆಗಿನ ಯೋಜನೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಈ ಗುರಿಯನ್ನು ಸಾಧಿಸಲು ಯೋಜಿಸಲಾದ ವಿವಿಧ ಜೀವನೋಪಾಯಗಳಬಗ್ಗೆಯೂ ಪ್ರಧಾನಮಂತ್ರಿಯವರು ಪರಿಶೀಲನೆ ನಡೆಸಿದರು.

ಜನೌಷಧಿ ಮಳಿಗೆಗಳ ವ್ಯಾಪ್ತಿಯನ್ನು 10,000 ರಿಂದ 25,000 ಕ್ಕೆ ತ್ವರಿತವಾಗಿ ವಿಸ್ತರಿಸುವ ಯೋಜನೆಗಳು ಕೂಡಾ ಇದರಲ್ಲಿದೆ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ಮೋದಿ ಅವರು ಕೃಷಿ ಮತ್ತು ಸಂಬಂಧಿತ ಉದ್ದೇಶಗಳಿಗಾಗಿ 15,000 ಮಹಿಳಾ ಸ್ವಸಹಾಯ ಗುಂಪುಗಳನ್ನು (ಎಸ್‌ಎಚ್‌ಜಿ) ಡ್ರೋನ್‌ಗಳೊಂದಿಗೆ ಸಜ್ಜುಗೊಳಿಸುವ ಬಗ್ಗೆ ಮಾತನಾಡಿದ್ದರು.

ಕೈಗೆಟುಕುವ ಔಷಧಿಗಳ ವ್ಯಾಪ್ತಿಯನ್ನು ಹೆಚ್ಚಿಸಲು ಭಾರತದಲ್ಲಿ ಜನ್ ಔಷಧಿ ಮಳಿಗೆಗಳ ಸಂಖ್ಯೆಯನ್ನು ಪ್ರಸ್ತುತ 10,000 ರಿಂದ 25,000 ಕ್ಕೆ ಏರಿಕೆ ಬಗ್ಗೆಯೂ ಪ್ರಧಾನಿ ಮಾತನಾಡಿದ್ದರು. ಈ ವಿಸ್ತರಣೆಯ ಅನುಷ್ಠಾನ ತಂತ್ರವನ್ನು ಅವರು ಪರಿಶೀಲಿಸಿದ್ದಾರೆ.

ಆಗಸ್ಟ್ 15ರಂದು ಮೋದಿ ಭಾಷಣದಲ್ಲಿ ಹೇಳಿದ್ದೇನು?

ತಮ್ಮ ಸರ್ಕಾರದ ದೃಷ್ಟಿಕೋನ ಮತ್ತು ಆರ್ಥಿಕತೆಯ ಮೇಲೆ ಪ್ರಭಾವದ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಪ್ರಸ್ತುತ ಸುಧಾರಣೆಗಳು ಮತ್ತು ನೀತಿಗಳ ಫಲಿತಾಂಶಗಳು ಮುಂದಿನ 1,000 ವರ್ಷಗಳಲ್ಲಿ ಗೋಚರಿಸುತ್ತವೆ. ಈ ಅವಧಿಯಲ್ಲಿ ನಮ್ಮ ನಿರ್ಧಾರಗಳು ಮತ್ತು ತ್ಯಾಗಗಳು ಮುಂದಿನ 1,000 ವರ್ಷಗಳ ಮೇಲೆ ಪರಿಣಾಮ ಬೀರುತ್ತವೆ. ಭಾರತವು ಹೊಸ ಆತ್ಮವಿಶ್ವಾಸ ಮತ್ತು ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ. ಜನಸಂಖ್ಯಾಶಾಸ್ತ್ರ, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯು ದೇಶದ ಎಲ್ಲಾ ಕನಸುಗಳನ್ನು ನನಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದಿದ್ದಾರೆ.

2047 ರಲ್ಲಿ ಭಾರತವು ತನ್ನ ಸ್ವಾತಂತ್ರ್ಯದ 100 ವರ್ಷಗಳನ್ನು ಗುರುತಿಸಿದಾಗ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದೆ ಎಂದು ನನಗೆ ವಿಶ್ವಾಸವಿದೆ. ನನ್ನ ದೇಶದ ಸಾಮರ್ಥ್ಯ ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ನಾನು ಇದನ್ನು ಹೇಳುತ್ತೇನೆ. ಭಾರತೀಯ ಸ್ಟಾರ್ಟ್‌ಅಪ್‌ಗಳು ಮತ್ತು ಯುವಕರ ಶಕ್ತಿಯ ಬಗ್ಗೆ ಮಾತನಾಡಿದ್ದ ಮೋದಿ”ಟೈರ್ 2 ಮತ್ತು ಟೈರ್ 3 ನಗರಗಳು ಸ್ಟಾರ್ಟ್‌ಅಪ್‌ಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಭಾವ ಬೀರುತ್ತಿವೆ. ಜಗತ್ತು ತಂತ್ರಜ್ಞಾನ-ಚಾಲಿತವಾಗಿದೆ. ತಂತ್ರಜ್ಞಾನದಲ್ಲಿನ ತನ್ನ ಪ್ರತಿಭೆಯೊಂದಿಗೆ, ಭಾರತವು ಜಾಗತಿಕ ವೇದಿಕೆಯಲ್ಲಿ ಹೊಸ ಪಾತ್ರ ಮತ್ತು ಪ್ರಭಾವವನ್ನು ಹೊಂದಿರುತ್ತದೆ. ಭಾರತದ ಅತಿದೊಡ್ಡ ಸಾಮರ್ಥ್ಯವು ನಂಬಿಕೆಯಾಗಿದೆ. ಸರ್ಕಾರದ ಮೇಲಿನ ಜನರ ನಂಬಿಕೆ, ದೇಶದ ಉಜ್ವಲ ಭವಿಷ್ಯದಲ್ಲಿ ಮತ್ತು ಭಾರತದ ಮೇಲೆ ವಿಶ್ವದ ನಂಬಿಕೆ ಆಗಿದೆ.

ಸರ್ಕಾರದ ಉಪಕ್ರಮಗಳು ಮತ್ತು ನೀತಿಗಳ ಬಗ್ಗೆ ಮಾತನಾಡಿದ ಪ್ರಧಾನಿ, ಭ್ರಷ್ಟಾಚಾರವನ್ನು ದೂರ ಇಡುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ಪ್ರತಿ ಕ್ಷಣ, ಪ್ರತಿ ರೂಪಾಯಿಯು ನಾಗರಿಕರ ಕಲ್ಯಾಣಕ್ಕೆ ಹೋಗುತ್ತಿದೆ. ಸರ್ಕಾರ ಮತ್ತು ನಾಗರಿಕರು ಒಗ್ಗಟ್ಟಿನಿಂದ ಇದ್ದಾರೆ. ನಾವು ಬಲವಾದ ಆರ್ಥಿಕತೆಯನ್ನು ನಿರ್ಮಿಸಿದ್ದೇವೆ ಮತ್ತು ಸೋರಿಕೆಯನ್ನು ನಿಲ್ಲಿಸಿದ್ದೇವೆ. ನನ್ನ ಸರ್ಕಾರವು ಕಲ್ಯಾಣ ಯೋಜನೆಗಳ 10 ಕೋಟಿ ನಕಲಿ ಫಲಾನುಭವಿಗಳನ್ನು ಹೊರಹಾಕಿತು. ಅಕ್ರಮ ಆಸ್ತಿ ವಶಪಡಿಸಿಕೊಳ್ಳುವಿಕೆಯು 20 ಪಟ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದು ಘೋಷಿಸಲಾದ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಿದ್ಧತೆಗಳನ್ನು ಪರಿಶೀಲಿಸಿದ ಮೋದಿ

ಭಾರತವನ್ನು ಬೆಳವಣಿಗೆ, ನಾವೀನ್ಯತೆ ಮತ್ತು ಅಂತರ್ಗತ ಪ್ರಗತಿಯ ಹಾದಿಯಲ್ಲಿ ಮುನ್ನಡೆಸಲು ತಮ್ಮ ಸರ್ಕಾರ ಸಮರ್ಪಿತವಾಗಿದೆ.2014 ರಲ್ಲಿ, ನಾವು ಅಧಿಕಾರವನ್ನು ಸ್ವೀಕರಿಸಿದಾಗ, ಜಾಗತಿಕ ಆರ್ಥಿಕ ಶ್ರೇಣಿಯಲ್ಲಿ ಭಾರತವು 10 ನೇ ಸ್ಥಾನದಲ್ಲಿತ್ತು. ಇಂದು, 140 ಕೋಟಿ ಭಾರತೀಯರ ಸಾಮೂಹಿಕ ಪ್ರಯತ್ನಗಳ ಮೂಲಕ ನಾವು ಐದನೇ ಸ್ಥಾನಕ್ಕೆ ಏರಿದ್ದೇವೆ. ಈ ಸಾಧನೆಯು ಆಕಸ್ಮಿಕವಾಗಿ ಸಂಭವಿಸಲಿಲ್ಲ. ಜಾಗತಿಕ ಮಟ್ಟದಲ್ಲಿ ಭಾರತದ ಸಾಧನೆಯ ಕುರಿತು ಮಾತನಾಡಿದ ಮೋದಿ, ವಿಶ್ವವು ಭಾರತದ ಸಾಮರ್ಥ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಜನರು ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು