AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಅತ್ಯುತ್ತಮ ಯೋಜನೆಗಳಿಗೆ ರಾಜಕೀಯ ಬಣ್ಣ: ಅಗ್ನಿಪಥ್ ವಿರೋಧಕ್ಕೆ ಪ್ರಧಾನಿ ಮೋದಿ ಬೇಸರ

ಉತ್ತಮ ಕೆಲಸಗಳು ಮತ್ತು ಉತ್ತಮ ಉದ್ದೇಶದಿಂದ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದಿಸಿದರು.

ಸರ್ಕಾರದ ಅತ್ಯುತ್ತಮ ಯೋಜನೆಗಳಿಗೆ ರಾಜಕೀಯ ಬಣ್ಣ: ಅಗ್ನಿಪಥ್ ವಿರೋಧಕ್ಕೆ ಪ್ರಧಾನಿ ಮೋದಿ ಬೇಸರ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jun 19, 2022 | 2:55 PM

Share

ದೆಹಲಿ: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಹಲವು ಅತ್ಯುತ್ತಮ ನಾಗರಿಕ ಕಲ್ಯಾಣ ಯೋಜನೆಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಷಾದಿಸಿದರು. ಪ್ರಗತಿ ಮೈದಾನ್ ಸಮಗ್ರ ಸಂಚಾರ ಯೋಜನೆಯ (Pragati Maidan Integrated Transit Corridor Project) ಮುಖ್ಯ ಸುರಂಗ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷ ರಕ್ಷಣಾ ಇಲಾಖೆಯ ಕಟ್ಟಡ ಸಮುಚ್ಚಯ (Defense Complex) ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತ್ತು. ಈ ದೇಶದ ದುರಾದೃಷ್ಟ ನೋಡಿ, ಹಲವು ಉತ್ತಮ ಕೆಲಸಗಳು ಮತ್ತು ಉತ್ತಮ ಉದ್ದೇಶದಿಂದ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ವಿಷಾದಿಸಿದರು.

ಯೋಜನೆಯು ಬಹು ಸಂಕೀರ್ಣವಾದ ಹಲವು ಘಟ್ಟಗಳನ್ನು ಒಳಗೊಂಡಿದ್ದ ಕಾರಣ ಹತ್ತಾರು ಸವಾಲುಗಳು ಎದುರಾಗಿದ್ದವು. ರಾಷ್ಟ್ರ ರಾಜಧಾನಿಯ ಅತ್ಯಂತ ಜನನಿಬಿಡ ಮತ್ತು ಸಂಚಾರ ದಟ್ಟಣೆಯಿರುವ ಪ್ರದೇಶದಲ್ಲಿ ಈ ಯೋಜನೆಯ ಕಾಮಗಾರಿ ನಡೆಯಿತು. ಕಾಮಗಾರಿ ತಡವಾಗಲು ಇದೂ ಒಂದು ಮುಖ್ಯಕಾರಣ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಆದರೆ ಇದು ನಮ್ಮ ಹೊಸ ಭಾರತ, ಈಗ ಭಾರತವು ಹೊಸ ಪ್ರತಿಜ್ಞೆಗಳನ್ನು ಮಾಡಬಲ್ಲದು. ಅಂಥ ಪ್ರತಿಜ್ಞೆಗಳನ್ನು ಈಡೇರಿಸಲು ಎಲ್ಲ ಪ್ರಯತ್ನಗಳನ್ನು ಹಾಕಬಲ್ಲದು ಎಂದು ಅವರು ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯು ಕನಿಷ್ಠ ಆರು ಬಾರಿ ಗಡುವುಗಳನ್ನು ಮೀರಿದೆ. ಯೋಜನೆಯ ಮುಖ್ಯ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದ ಕಾಮಗಾರಿಯು ಮುಕ್ತಾಯಗೊಳ್ಳುವುದು ತಡವಾದ ಕಾರಣ ಜನರು ಸುದೀರ್ಘ ಅವಧಿಗೆ ನಿರೀಕ್ಷಿಸುತ್ತಿರಬೇಕಾಯಿತು.

ವಿಶ್ಲೇಷಣೆ: ಅಗ್ನಿಪಥ್ ಪ್ರತಿಭಟನೆಗೆ ಮೋದಿ ವಿಷಾದ

ಸರ್ಕಾರದ ನಿರ್ಣಯಗಳಿಗೆ ರಾಜಕೀಯ ಬಣ್ಣ ಬಳಿಯುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಅಗ್ನಿಪಥ ಯೋಜನೆಯ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ವಿವಿಧೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ಮಾರ್ಗಕ್ಕೆ ತಿರುಗಿವೆ. ರೈಲುಗಳಿಗೆ ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು, ರೈಲು ಮತ್ತು ರಸ್ತೆ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಈ ಯೋಜನೆಯ ನಿಜವಾದ ಆಶಯಗಳನ್ನು ಅರ್ಥ ಮಾಡಿಕೊಳ್ಳದೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ಮೋದಿ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರ ತೆಗೆದುಕೊಂಡ ಹಲವು ಪ್ರಮುಖ ನಿರ್ಣಯಗಳನ್ನು ಹೀಗೆಯೇ ವಿರೋಧಿಸಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ ಯೋಜನೆಗೂ ಇದೇ ರೀತಿ ತಮಗೆ ಬೇಕಾದ ಬಣ್ಣ ಬಳಿಯಲಾಗಿದೆ ಎಂಬ ಮಾತುಗಳು ಬಿಜೆಪಿ ಆಂತರಿಕ ವಲಯದಲ್ಲಿ ಕೇಳಿಬರುತ್ತಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ 2019ಕ್ಕೂ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ನಡೆದಿತ್ತು. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ನಿರಂತರ ಸತ್ಯಾಗ್ರಹಗಳ ಮೂಲಕ ರೈತರು ವಿರೋಧಿಸಿದ್ದರು. ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಪ್ರತಿಭಟನೆ ಹೆಚ್ಚಾದ ಕಾರಣ ಬೇರೆ ಮಾರ್ಗ ಕಾಣದೆ ಕೇಂದ್ರ ಸರ್ಕಾರವು ಈ ಕಾಯ್ದೆಗಳನ್ನು ಹಿಂಪಡೆಯಬೇಕಾಯಿತು ಮೋದಿ ಅವರು ಭಾಷಣದಲ್ಲಿದ್ದ ವಿಷಾದಕ್ಕೆ ಈ ಅಂಶಗಳು ಕಾರಣ ಎಂದು ಹೇಳಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sun, 19 June 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್