AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಅತ್ಯುತ್ತಮ ಯೋಜನೆಗಳಿಗೆ ರಾಜಕೀಯ ಬಣ್ಣ: ಅಗ್ನಿಪಥ್ ವಿರೋಧಕ್ಕೆ ಪ್ರಧಾನಿ ಮೋದಿ ಬೇಸರ

ಉತ್ತಮ ಕೆಲಸಗಳು ಮತ್ತು ಉತ್ತಮ ಉದ್ದೇಶದಿಂದ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಷಾದಿಸಿದರು.

ಸರ್ಕಾರದ ಅತ್ಯುತ್ತಮ ಯೋಜನೆಗಳಿಗೆ ರಾಜಕೀಯ ಬಣ್ಣ: ಅಗ್ನಿಪಥ್ ವಿರೋಧಕ್ಕೆ ಪ್ರಧಾನಿ ಮೋದಿ ಬೇಸರ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 19, 2022 | 2:55 PM

Share

ದೆಹಲಿ: ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಹಲವು ಅತ್ಯುತ್ತಮ ನಾಗರಿಕ ಕಲ್ಯಾಣ ಯೋಜನೆಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಷಾದಿಸಿದರು. ಪ್ರಗತಿ ಮೈದಾನ್ ಸಮಗ್ರ ಸಂಚಾರ ಯೋಜನೆಯ (Pragati Maidan Integrated Transit Corridor Project) ಮುಖ್ಯ ಸುರಂಗ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ವರ್ಷ ರಕ್ಷಣಾ ಇಲಾಖೆಯ ಕಟ್ಟಡ ಸಮುಚ್ಚಯ (Defense Complex) ಉದ್ಘಾಟಿಸುವ ಅವಕಾಶ ನನಗೆ ಸಿಕ್ಕಿತ್ತು. ಈ ದೇಶದ ದುರಾದೃಷ್ಟ ನೋಡಿ, ಹಲವು ಉತ್ತಮ ಕೆಲಸಗಳು ಮತ್ತು ಉತ್ತಮ ಉದ್ದೇಶದಿಂದ ತೆಗೆದುಕೊಂಡ ಸಾಕಷ್ಟು ನಿರ್ಧಾರಗಳಿಗೆ ರಾಜಕೀಯ ಬಣ್ಣ ಬಳಿಯಲಾಗಿದೆ ಎಂದು ವಿಷಾದಿಸಿದರು.

ಯೋಜನೆಯು ಬಹು ಸಂಕೀರ್ಣವಾದ ಹಲವು ಘಟ್ಟಗಳನ್ನು ಒಳಗೊಂಡಿದ್ದ ಕಾರಣ ಹತ್ತಾರು ಸವಾಲುಗಳು ಎದುರಾಗಿದ್ದವು. ರಾಷ್ಟ್ರ ರಾಜಧಾನಿಯ ಅತ್ಯಂತ ಜನನಿಬಿಡ ಮತ್ತು ಸಂಚಾರ ದಟ್ಟಣೆಯಿರುವ ಪ್ರದೇಶದಲ್ಲಿ ಈ ಯೋಜನೆಯ ಕಾಮಗಾರಿ ನಡೆಯಿತು. ಕಾಮಗಾರಿ ತಡವಾಗಲು ಇದೂ ಒಂದು ಮುಖ್ಯಕಾರಣ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಆದರೆ ಇದು ನಮ್ಮ ಹೊಸ ಭಾರತ, ಈಗ ಭಾರತವು ಹೊಸ ಪ್ರತಿಜ್ಞೆಗಳನ್ನು ಮಾಡಬಲ್ಲದು. ಅಂಥ ಪ್ರತಿಜ್ಞೆಗಳನ್ನು ಈಡೇರಿಸಲು ಎಲ್ಲ ಪ್ರಯತ್ನಗಳನ್ನು ಹಾಕಬಲ್ಲದು ಎಂದು ಅವರು ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯು ಕನಿಷ್ಠ ಆರು ಬಾರಿ ಗಡುವುಗಳನ್ನು ಮೀರಿದೆ. ಯೋಜನೆಯ ಮುಖ್ಯ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದ ಕಾಮಗಾರಿಯು ಮುಕ್ತಾಯಗೊಳ್ಳುವುದು ತಡವಾದ ಕಾರಣ ಜನರು ಸುದೀರ್ಘ ಅವಧಿಗೆ ನಿರೀಕ್ಷಿಸುತ್ತಿರಬೇಕಾಯಿತು.

ವಿಶ್ಲೇಷಣೆ: ಅಗ್ನಿಪಥ್ ಪ್ರತಿಭಟನೆಗೆ ಮೋದಿ ವಿಷಾದ

ಸರ್ಕಾರದ ನಿರ್ಣಯಗಳಿಗೆ ರಾಜಕೀಯ ಬಣ್ಣ ಬಳಿಯುವ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತುಗಳನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಅಗ್ನಿಪಥ ಯೋಜನೆಯ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ವಿವಿಧೆಡೆ ಬೃಹತ್ ಪ್ರತಿಭಟನೆಗಳು ನಡೆದಿವೆ. ಹಲವೆಡೆ ಪ್ರತಿಭಟನೆಗಳು ಹಿಂಸಾತ್ಮಕ ಮಾರ್ಗಕ್ಕೆ ತಿರುಗಿವೆ. ರೈಲುಗಳಿಗೆ ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು, ರೈಲು ಮತ್ತು ರಸ್ತೆ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಈ ಯೋಜನೆಯ ನಿಜವಾದ ಆಶಯಗಳನ್ನು ಅರ್ಥ ಮಾಡಿಕೊಳ್ಳದೆ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿರುವ ಬಗ್ಗೆ ಮೋದಿ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ವರ್ಷಗಳಲ್ಲಿ ಸರ್ಕಾರ ತೆಗೆದುಕೊಂಡ ಹಲವು ಪ್ರಮುಖ ನಿರ್ಣಯಗಳನ್ನು ಹೀಗೆಯೇ ವಿರೋಧಿಸಲಾಗಿದೆ. ಆದರೆ ಇದೀಗ ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಅಗ್ನಿಪಥ ಯೋಜನೆಗೂ ಇದೇ ರೀತಿ ತಮಗೆ ಬೇಕಾದ ಬಣ್ಣ ಬಳಿಯಲಾಗಿದೆ ಎಂಬ ಮಾತುಗಳು ಬಿಜೆಪಿ ಆಂತರಿಕ ವಲಯದಲ್ಲಿ ಕೇಳಿಬರುತ್ತಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆ 2019ಕ್ಕೂ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದೊಡ್ಡ ಮಟ್ಟದ ಹಿಂಸಾಚಾರ ನಡೆದಿತ್ತು. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ನಿರಂತರ ಸತ್ಯಾಗ್ರಹಗಳ ಮೂಲಕ ರೈತರು ವಿರೋಧಿಸಿದ್ದರು. ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಪ್ರತಿಭಟನೆ ಹೆಚ್ಚಾದ ಕಾರಣ ಬೇರೆ ಮಾರ್ಗ ಕಾಣದೆ ಕೇಂದ್ರ ಸರ್ಕಾರವು ಈ ಕಾಯ್ದೆಗಳನ್ನು ಹಿಂಪಡೆಯಬೇಕಾಯಿತು ಮೋದಿ ಅವರು ಭಾಷಣದಲ್ಲಿದ್ದ ವಿಷಾದಕ್ಕೆ ಈ ಅಂಶಗಳು ಕಾರಣ ಎಂದು ಹೇಳಲಾಗಿದೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Sun, 19 June 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?