AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi on Farm Laws: ರೈತರ ನಿರಂತರ ಹೋರಾಟ ಹಿನ್ನೆಲೆ; ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನಿ ಮೋದಿ

PM Modi Speech Highlights: ಇಂದು (ನವೆಂಬರ್ 19) ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಈ ವೇಳೆ ಅವರು 3 ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ.

PM Modi on Farm Laws: ರೈತರ ನಿರಂತರ ಹೋರಾಟ ಹಿನ್ನೆಲೆ; ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆಗಳು ವಾಪಸ್: ಪ್ರಧಾನಿ ಮೋದಿ
ಪ್ರಧಾನಿ ಮೋದಿ
TV9 Web
| Updated By: Digi Tech Desk|

Updated on:Nov 19, 2021 | 10:34 AM

Share

PM Modi on Farm Laws: ಸರ್ಕಾರ ಘೋಷಿಸಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡಲಾಗುತ್ತಿದ್ದು, 3 ಕಾಯ್ದೆ ಜಾರಿಗೆ ತಂದಿದ್ದೆವು. ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೆವು. ಈ 3 ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದವು. ರೈತರ ಹಿತ ದೃಷ್ಟಿಯಲ್ಲಿಟ್ಟುಕೊಂಡೇ ಕಾಯ್ದೆ ಜಾರಿ ಮಾಡಲಾಗಿತ್ತು. ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ. ಆದರೆ ಕೆಲವು ರೈತರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ. ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ. ಹೋರಾಟ ಮಾಡುತ್ತಿರುವ ರೈತರು ಮನೆಗೆ ತೆರಳಲು ಪ್ರಧಾನಿ ಮನವಿ ಮಾಡಿದ್ದಾರೆ.

3 ಕೃಷಿ ತಿದ್ದುಪಡಿ ಕಾಯ್ದೆಯನ್ನು ಮರಳಿ ಪಡೆದ ನಂತರ ಪ್ರಧಾನಿ, ಮತ್ತಷ್ಟು ಹೆಚ್ಚಿನ ಶ್ರಮ ವಹಿಸಿ ದುಡಿಯುವುದಾಗಿ ಭರವಸೆ ನೀಡಿದ್ದಾರೆ. ‘‘ನಾನೇನು ಮಾಡಿದ್ದೇನೋ, ಅದೆಲ್ಲವೂ ರೈತರಿಗಾಗಿ. ನಾನು ಮಾಡುತ್ತಿರುವ ಕೆಲಸಗಳು ದೇಶಕ್ಕಾಗಿ. ಇಂದು ಎಲ್ಲರಿಗೂ ನಾನು, ಇನ್ನೂ ದೇಶಕ್ಕಾಗಿ ಮತ್ತಷ್ಟು ಹೆಚ್ಚು ಶ್ರಮವಹಿಸಿ ದುಡಿಯುತ್ತೇನೆ ಎಂದು ಭರವಸೆ ನೀಡುತ್ತೇನೆ. ಇದರಿಂದಾಗಿ ನಿಮ್ಮ ಮತ್ತು ದೇಶದ ಕನಸು ನನಸಾಗಲು ಸಾಧ್ಯವಾಗುತ್ತದೆ’’ ಎಂದು ಹೇಳಿದ್ದಾರೆ.

ಭಾಷಣದಲ್ಲಿ ಮೊದಲು ರೈತರ ಸಮಸ್ಯೆಯ ಕುರಿತು ಮಾತನಾಡಿದ ಪ್ರಧಾನಿ, ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ. ಅದನ್ನು ಬಗೆಹರಿಸಲು ಪ್ರಯತ್ನ ಮಾಡಲಾಗುತ್ತಿದ್ದು, ಬೀಜ, ವಿಮೆ, ಮಾರುಕಟ್ಟೆ, ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಫಸಲ್ ಬಿಮಾ, ಪೆನ್ಷನ್‌ ಯೋಜನೆ ಜಾರಿಗೆ ತಂದಿದ್ದೇವೆ. ಕೃಷಿ ಮಾರುಕಟ್ಟೆ ಆಧುನೀಕರಣಕ್ಕೆ ಕೋಟ್ಯಂತರ ರೂ. ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್‌ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್‌ ನೀಡಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.

ಭಾಷಣದಲ್ಲಿ ಪ್ರಧಾನಿ ಸೇವಾ ಮನೋಭಾ, ರೈತರ ಸಮಸ್ಯೆಗಳು ಮೊದಲಾದವುಗಳ ಕುರಿತು ಮಾತನಾಡಿದ್ದಾರೆ. ಗುರು ನಾನಕ್ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ ಭಾಷಣವನ್ನು ಆರಂಭಿಸಿದ ಪ್ರಧಾನಿ, ಸೇವಾ ಮಾರ್ಗ ಅನುಸರಿಸುವುದರಿಂದ ಜೀವನ ಸಾರ್ಥವಾಗಲಿದೆ ಎಂದಿದ್ದಾರೆ.

ಪ್ರಧಾನ ಮಂತ್ರಿಗಳ ಭಾಷಣ ಇಲ್ಲಿ ಲಭ್ಯವಿದೆ:

ಇದನ್ನೂ ಓದಿ:

ಸಶಸ್ತ್ರಪಡೆಗಳಿಗೆ ಭಾರತದಲ್ಲೇ ತಯಾರಾದ ಹೆಲಿಕಾಪ್ಟರ್​, ಡ್ರೋಣ್​ಗಳ ಹಸ್ತಾಂತರ: ಝಾನ್ಸಿಯಲ್ಲಿ ರಾಷ್ಟ್ರ ರಕ್ಷಾ ಸಮರ್ಪಣ ಪರ್ವ

Tirupathi: ಭಾರಿ ಮಳೆಯಿಂದ ಟಿಟಿಡಿಯ 2 ಘಾಟ್​ಗಳು ಕ್ಲೋಸ್; ಮನೆಗಳಿಂದ ಹೊರಗೆ ಬಾರದಂತೆ ತಿರುಪತಿ ಜನರಿಗೆ ಸೂಚನೆ

Published On - 9:24 am, Fri, 19 November 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ