Lumpy Skin Disease: ಜಾನುವಾರುಗಳ ಬಾಧಿಸುತ್ತಿರುವ ಚರ್ಮ ಗಂಟು ಕಾಯಿಲೆಗೆ ಇನ್ನು ಸ್ವದೇಶಿ ಲಸಿಕೆ! ಪ್ರಧಾನಿ ಮೋದಿ ಮಹತ್ವದ ಘೋಷಣೆ

PM Narendra Modi: ಜಾನುವಾರುಗಳನ್ನು ಬಾಧಿಸುತ್ತಿರುವ ಚರ್ಮ ಗಂಟು ಕಾಯಿಲೆಯ (Lumpy Skin Disease -ಎಲ್‌ಎಸ್‌ಡಿ) ನಿಯಂತ್ರಣಕ್ಕೆ ರಾಜ್ಯಗಳೊಂದಿಗೆ ಕೇಂದ್ರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈ ಸೋಂಕಿಗೆ ಭಾರತೀಯ ವಿಜ್ಞಾನಿಗಳು ಸ್ಥಳೀಯವಾಗಿ ಲಸಿಕೆಯನ್ನು ಸಿದ್ಧಪಡಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೆಮ್ಮೆಯಿಂದ ಹೇಳಿದ್ದಾರೆ.

Lumpy Skin Disease: ಜಾನುವಾರುಗಳ ಬಾಧಿಸುತ್ತಿರುವ ಚರ್ಮ ಗಂಟು ಕಾಯಿಲೆಗೆ ಇನ್ನು ಸ್ವದೇಶಿ ಲಸಿಕೆ! ಪ್ರಧಾನಿ ಮೋದಿ ಮಹತ್ವದ ಘೋಷಣೆ
ಜಾನುವಾರುಗಳ ಬಾಧಿಸುತ್ತಿರುವ ಚರ್ಮ ಗಂಟು ಕಾಯಿಲೆಗೆ ಇನ್ನು ಸ್ವದೇಶಿ ಲಸಿಕೆ! ಪ್ರಧಾನಿ ಮೋದಿ ಮಹತ್ವದ ಘೋಷಣೆ
Follow us
| Updated By: ಸಾಧು ಶ್ರೀನಾಥ್​

Updated on:Sep 29, 2022 | 9:15 PM

ಲಂಪಿ ಸ್ಕಿನ್ ಡಿಸೀಸ್: ಜಾನುವಾರುಗಳನ್ನು ಬಾಧಿಸುತ್ತಿರುವ ಚರ್ಮ ಗಂಟು ಕಾಯಿಲೆಯ (Lumpy Skin Disease -ಎಲ್‌ಎಸ್‌ಡಿ) ನಿಯಂತ್ರಣಕ್ಕೆ ರಾಜ್ಯಗಳೊಂದಿಗೆ ಕೇಂದ್ರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಈ ಸೋಂಕಿಗೆ ಭಾರತೀಯ ವಿಜ್ಞಾನಿಗಳು ಸ್ವದೇಶಿ ಲಸಿಕೆಯನ್ನು ಸಿದ್ಧಪಡಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೆಮ್ಮೆಯಿಂದ ಹೇಳಿದ್ದಾರೆ. ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಲೋದಲ್ಲಿ ನಡೆದ ಅಂತಾರಾಷ್ಟ್ರೀಯ ಡೈರಿ ಫೆಡರೇಶನ್ ವರ್ಲ್ಡ್ ಡೈರಿ ಶೃಂಗಸಭೆಯಲ್ಲಿ (ಐಡಿಎಫ್ ಡಬ್ಲ್ಯುಡಿಎಸ್ International Dairy Federation World Dairy Summit 2022) ಮೋದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಲಂಪಿ ಸ್ಕಿನ್ ಜಾನುವಾರು ರೋಗದಿಂದ ಹೈನುಗಾರಿಕೆ ಸದ್ಯ ಬಿಕ್ಕಟ್ಟಿಗೆ ಸಿಲುಕಿದೆ ಎಂದು ಕಳವಳ ವ್ಯಕ್ತಪಡಿಸಿದರು. ರೋಗವನ್ನು ನಿಯಂತ್ರಣದಲ್ಲಿಡು ಸಲುವಾಗಿ ಪ್ರಾಣಿಗಳ ಚಲನವಲನವನ್ನು ಪತ್ತೆ ಹಚ್ಚಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಇದರ ಭಾಗವಾಗಿ ಭಾರತೀಯ ವಿಜ್ಞಾನಿಗಳು ಸ್ವದೇಶಿ ಲಸಿಕೆ ಸಿದ್ಧಪಡಿಸಿದ್ದಾರೆ ಎಂದು ಪ್ರಕಟಿಸಿದರು. ಪ್ರಾಣಿಗಳ ಲಸಿಕೆ ಅಥವಾ ಇನ್ನಾವುದೇ ಆಧುನಿಕ ತಂತ್ರಜ್ಞಾನದ ಸಹಾಯದಿಂದ ಹೈನುಗಾರಿಕೆ ಉದ್ಯಮಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನಿ ಭರವಸೆ ನೀಡಿದರು.

ಚರ್ಮ ಗಂಟು ಕಾಯಿಲೆಯಿಂದ ಹಾಲಿನ ಉತ್ಪಾದನೆ ಕುಂಠಿತ

ಏತನ್ಮಧ್ಯೆ, ದೇಶಾದ್ಯಂತ 57,000 ಜಾನುವಾರುಗಳು ಚರ್ಮ ಗಂಟು ಕಾಯಿಲೆಯಿಂದ ಸಾವನ್ನಪ್ಪಿವೆ ಎಂದು ಕೇಂದ್ರ ಹೇಳಿದೆ. ಈ ಕಾಯಿಲೆಯಿಂದ ರಾಜಸ್ಥಾನ ಒಂದರಲ್ಲೇ ಸುಮಾರು 37,000 ಮೂಕ ಪ್ರಾಣಿಗಳು ಸಾವನ್ನಪ್ಪಿವೆ. ರಾಜಸ್ಥಾನವಲ್ಲದೆ, ಗುಜರಾತ್, ದೆಹಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿಯೂ ಈ ವೈರಸ್ ಹಾನಿಯನ್ನುಂಟುಮಾಡುತ್ತಿದೆ. ಈ ರೋಗವು ಮೊದಲು ಯುರೋಪ್ನಲ್ಲಿ ಕಾಣಿಸಿಕೊಂಡಿತು, ನಂತರ ಏಷ್ಯಾಕ್ಕೆ ಹರಡಿದೆ. 2019 ರಲ್ಲಿ, ಬಾಂಗ್ಲಾದೇಶದಲ್ಲಿ ಲಂಪಿ ಸ್ಕಿನ್ ಕಾಯಿಲೆಯ ಪ್ರಕರಣಗಳು ಬೆಳಕಿಗೆ ಬಂದವು. ಅದಾದ ಮಾರನೆಯ ವರ್ಷವೇ ಭಾರತದಲ್ಲಿ ಮೊದಲ ಪ್ರಕರಣ ವರದಿಯಾಗಿದೆ. ವಿಶ್ವದ ಅತಿದೊಡ್ಡ ಹಾಲು ಉತ್ಪಾದಕ ಭಾರತ, 2019 ರಲ್ಲಿ 192.5 ಮಿಲಿಯನ್ ಜಾನುವಾರು ಜನಸಂಖ್ಯೆಯನ್ನು ಹೊಂದಿತ್ತು. ಆದಾಗ್ಯೂ, ಲಂಪಿ ಸ್ಕಿನ್ ಡಿಸೀಸ್ ಪತ್ತೆಯಾದ ನಂತರ ಹಾಲು ಸಂಗ್ರಹಣೆ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.

ಚರ್ಮ ಗಂಟು ಕಾಯಿಲೆ ಎಂದರೇನು?

ಜಾನುವಾರುಗಳ ಕಾಡುವ ಚರ್ಮಗಂಟು ರೋಗ ತಡೆಗಟ್ಟಲು ಈ ಮಾರ್ಗಗಳನ್ನು ಅನುಸರಿಸಿ

ಲಂಪಿ ಚರ್ಮದ ಕಾಯಿಲೆಯು ಜಾನುವಾರುಗಳಲ್ಲಿ ಕಾಣಬರುವ ಅಪಾಯಕಾರಿ ಸಾಂಕ್ರಾಮಿಕ ಮತ್ತು ವೈರಲ್ ಸೋಂಕು. ಬಾಧಿತ ಜಾನುವಾರುಗಳಿಗೆ ಚರ್ಮದ ದದ್ದುಗಳ ಜೊತೆಗೆ ತೀವ್ರ ಜ್ವರ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಜ್ವರ ತೀವ್ರತೆಯು ಹೆಚ್ಚಾಗುತ್ತದೆ ಮತ್ತು ಸಾವಿಗೆ ಕಾರಣವಾಗುತ್ತದೆ. ಸೊಳ್ಳೆಗಳು, ನೊಣಗಳು, ಹೇನುಗಳು ಮತ್ತು ಕಣಜಗಳಿಂದ ಈ ರೋಗವು ಹರಡುತ್ತದೆ. ಇದು ಕಲುಷಿತ ಆಹಾರ ಮತ್ತು ನೀರಿನ ಮೂಲಕವೂ ಹರಡುತ್ತದೆ.

Published On - 3:57 pm, Mon, 12 September 22

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​