AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

P20 Summit: ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ: ಪ್ರಧಾನಿ ಮೋದಿ

ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಸ್ರೇಲ್​-ಹಮಾಸ್ ಸಂಘರ್ಷದ ಕುರಿತು ಮಾತನಾಡಿರುವ ಅವರು, ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಪಿ20 ಸಮ್ಮೇಳನ ಆರಂಭವಾಗಿದೆ.

P20 Summit: ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Oct 13, 2023 | 3:28 PM

Share

ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಸ್ರೇಲ್​-ಹಮಾಸ್ ಸಂಘರ್ಷದ ಕುರಿತು ಮಾತನಾಡಿರುವ ಅವರು, ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಪಿ20 ಸಮ್ಮೇಳನ ಆರಂಭವಾಗಿದೆ.

ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಅತಿ ದೊಡ್ಡ ಹಬ್ಬವೆಂದು ಪರಿಗಣಿಸಲಾಗಿದೆ, ಸ್ವಾತಂತ್ರ್ಯದ ನಂತರ, ಭಾರತವು 17 ಸಾರ್ವತ್ರಿಕ ಚುನಾವಣೆಗಳನ್ನು ಮತ್ತು 300 ಕ್ಕೂ ಹೆಚ್ಚು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಕಂಡಿದೆ.

ಮತ್ತಷ್ಟು ಓದಿ: ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ಮಾಡುತ್ತೇವೆ: ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ

P20 ಶೃಂಗಸಭೆಯು ಭಾರತದಲ್ಲಿ ನಡೆಯುತ್ತಿದೆ, ಇದು ಪ್ರಜಾಪ್ರಭುತ್ವದ ಜನನಿ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ಇದು ಚರ್ಚೆಗೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಿದರು. ಇಂಡೋನೇಷ್ಯಾ, ಮೆಕ್ಸಿಕೋ, ಸೌದಿ ಅರೇಬಿಯಾ, ಓಮನ್, ಸ್ಪೇನ್, ಯುರೋಪಿಯನ್ ಪಾರ್ಲಿಮೆಂಟ್, ಇಟಲಿ, ದಕ್ಷಿಣ ಆಫ್ರಿಕಾ, ರಷ್ಯಾ, ಟರ್ಕಿಯೆ, ನೈಜೀರಿಯಾ, ಆಸ್ಟ್ರೇಲಿಯಾ, ಬ್ರೆಜಿಲ್, ಯುಎಇ, ಸಿಂಗಾಪುರ್, ಜಪಾನ್, ಈಜಿಪ್ಟ್ ಮತ್ತು ಬಾಂಗ್ಲಾದೇಶದ ಸ್ಪೀಕರ್‌ಗಳು ಮತ್ತು ನಿಯೋಗದ ಮುಖ್ಯಸ್ಥರು ಉಪಸ್ಥಿತರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿ20 ಥೀಮ್, ಒಂದು ಭೂಮಿ ಒಂದು ಕುಟುಂಬ ಒಂದು ಭವಿಷ್ಯಕ್ಕಾಗಿ ಸಂಸತ್ತು, ಮಾಹಿತಿ ಪ್ರಕಾರ ಕೆನಡಾದ ಸೆನೆಟ್ ಸ್ಪೀಕ್ ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ.

ಇತ್ತೀಚಿನ ದಿನಗಳಲ್ಲಿ ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ವಿವಾದದ ಹಿನ್ನೆಲೆಯಲ್ಲಿ ಕೆನಡಾದ ಸೆನೆಟ್ ಸ್ಪೀಕರ್ ರೇಮೊಂಡೆ ಗಾಗ್ನಿ ಪಿ20 ಸಭೆಯಿಂದ ದೂರ ಉಳಿದಿದ್ದಾರೆ.

ಪಿ20 ಶೃಂಗಸಭೆಗೂ ಮೊದಲು ಸೆಪ್ಟೆಂಬರ್​ನಲ್ಲಿ ಭಾರತವು ಜಿ20 ಶೃಂಗಸಭೆಯನ್ನು ಆಯೋಜಿಸಿತ್ತು, ಸೆಪ್ಟೆಂಬರ್ 9-10ರಂದು ಶೃಂಗಸಭೆ ನಡೆದಿತ್ತು. ವಿಶ್ವದ ಅನೇಕ ನಾಯಕರು ಭೇಟಿಯಾಗಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:34 pm, Fri, 13 October 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?