Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ – ಪ್ರಧಾನಿ ನರೇಂದ್ರ ಮೋದಿ

BJP 41th Samsthapana Divas: ನಮ್ಮ ಪಕ್ಷ ಸಣ್ಣ ರೈತರ ಪರ ಸಂಪೂರ್ಣ ಒಲವನ್ನು ಹೊಂದಿದೆ. ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ದೇಶದ ಪ್ರತಿಯೊಬ್ಬ ನಾಗರೀಕರ ಅಭಿವೃದ್ಧಿಗೂ ಸರ್ಕಾರ ಮತ್ತು ಬಿಜೆಪಿ ಬದ್ಧವಾಗಿದೆ ಎಂದರು. 

Narendra Modi: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ - ಪ್ರಧಾನಿ ನರೇಂದ್ರ ಮೋದಿ
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಎಕ್ಸಾಮ್ ವಾರಿಯರ್​ಗಳೆಂದು ವ್ಯಾಖ್ಯಾನಿಸಿದ ಪ್ರಧಾನಿ ಮೋದಿ ಎಲ್ಲಾ ಪರೀಕ್ಷಾರ್ಥಿಗಳಿಗೂ ಶುಭಕೋರಿದರು
Follow us
guruganesh bhat
| Updated By: Skanda

Updated on: Apr 06, 2021 | 12:34 PM

ದೆಹಲಿ: ಎಲ್ಲಾ ಚುನಾವಣೆಗಳಲ್ಲೂ ಗೆಲ್ಲುತ್ತಾ ಹೋಗಲು ಬಿಜೆಪಿ ಯಂತ್ರವಲ್ಲ. ದೇಶದ ಜನರು ನಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಹೆಮ್ಮೆಯಿದೆ. ಭಾರತೀಯ ಜನ ಸಂಘ ಮತ್ತು ಭಾರತೀಯ ಜನತಾ ಪಕ್ಷವನ್ನು ಕಟ್ಟಲು ಹಗಲಿರುಳು ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಗೌರವ ಸಮರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಪಕ್ಷದ ಕಾರ್ಯಕರ್ತರ ಶ್ರಮದಿಂದಲೇ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ಪಕ್ಷದ ಬಲವನ್ನು ದೇಶದ ಉನ್ನತಿಗೆ ಬಳಸಿಕೊಳ್ಳುತ್ತೇವೆ ಎಂದು ನರೇಂದ್ರ ಮೋದಿ ತಿಳಿಸಿದರು. ಅವರು ಭಾರತೀಯ ಜನ ಸಂಘದ 41ನೇ ಸಂಸ್ಥಾಪನಾ ದಿನದ ನಿಮಿತ್ತ ವರ್ಚುವಲ್ ಕಾನ್ಫರೆನ್ಸ್​ನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ದೊಡ್ಡದು ಎಂದ ಸಂಪ್ರದಾಯವನ್ನು ಬಿಜೆಪಿ ಅನೂಚಾನವಾಗಿ ಪಾಲಿಸುತ್ತಾ ಬಂದಿದೆ. ಸೇವೆಯ ಮೂಲಕ ಸಂಘಟನೆ ಎಂಬ ತತ್ವವನ್ನು ಪಕ್ಷ ನಂಬಿ ನಡೆಯುತ್ತಿದೆ. ಪ್ರತಿ ಗ್ರಾಮ ಗ್ರಾಮಗಳಲ್ಲೂ ಪಕ್ಷದ ಕಾರ್ಯಕರ್ತರು ಮಾಡಿದ ಸೇವೆಯ ಪ್ರತಿಫಲದಿಂದಲೇ ಇಂದು ಅಧಿಕಾರಕ್ಕೆ ಏರಲು ಸಾಧ್ಯವಾಗಿದೆ. ಈ ಸಂಕಟದ ಕಾಲದಲ್ಲಿ ಹೊಸ ಭಾರತದ ನಿರ್ಮಾಣ ಮಾಡಲು ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.  ಪಕ್ಷದ ಕಾರ್ಯಕರ್ತರ ಶ್ರಮದಿಂದಲೇ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕೊವಿಡ್​ನಂತಹ ಸಂದಿಗ್ಧ ಪರಿಸ್ಥಿತಿಯೇ ದೇಶವನ್ನು ಇನ್ನಷ್ಟು ಉನ್ನತಿಗೆ ಏರಿಸಲು ಸಿಕ್ಕಿರುವ ಅವಕಾಶವೆಂದೇ ಅರಿತುಕೊಳ್ಳಬೇಕು. ಪಕ್ಷದ ಕಾರ್ಯಕರ್ತರು ದೇಶದ ಮೂಲೆಮೂಲೆಯನ್ನು ದಲಿತರು, ಹಿಂದುಳಿದ ವರ್ಗದವರ ಕಲ್ಯಾಣಕ್ಕಾಗಿ  ದುಡಿಯುತ್ತಿದ್ದಾರೆ. ನಮ್ಮ ಪಕ್ಷ ಸಣ್ಣ ರೈತರ ಪರ ಸಂಪೂರ್ಣ ಒಲವನ್ನು ಹೊಂದಿದೆ. ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ. ದೇಶದ ಪ್ರತಿಯೊಬ್ಬ ನಾಗರೀಕರ ಅಭಿವೃದ್ಧಿಗೂ ಸರ್ಕಾರ ಮತ್ತು ಬಿಜೆಪಿ ಬದ್ಧವಾಗಿದೆ. ನಾವು ಯಾವಾಗಲೂ ಜನರೊಂದಿಗೆ ಇರುತ್ತೇವೆ, ಜನರಿಗಾಗಿ ಗೆಲ್ಲುತ್ತಲೇ ಇರುತ್ತೇವೆ. ಜನರು ನಮ್ಮನ್ನು ಗೆಲ್ಲಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವರಿಸಿದರು.

ನಮ್ಮ ದೇಶದಲ್ಲಿ ಶೇ 80ರಷ್ಟು ಸಣ್ಣ ರೈತರಿದ್ದು, ಹಿಂದಿನ ಸರ್ಕಾರಗಳು ಅವರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಲಿಲ್ಲ. ನೂತನ ಕೃಷಿ ಕಾಯ್ದೆ, ಕಿಸಾನ್ ಸಮ್ಮಾನ್​ನಂತಹ ಯೋಜನೆಗಳ ಮೂಲಕ ರೈತ ಸಮುದಾಯದ ಅಭಿವೃದ್ಧಿ ಮಾಡಲಾಗುತ್ತಿದೆ. ಪ್ರತಿ ರೈತರ ಹೊಲಗಳಿಗೆ ನೀರಾವರಿ, ಕೃಷಿಕರ ಕಂಪನಿಗಳ ಸ್ಥಾಪನೆ ಮಾಡುವ ಮೂಲಕ ಸಣ್ಣ ರೈತರ ಉನ್ನತಿಗೆ ಯೋಜನೆ ರೂಪಿಸಲಾಗುತ್ತಿದೆ. ಮಹಿಳೆಯರಿಗೆ ಮನೆ ಮತ್ತು ಸಮಾಜದಲ್ಲಿ ಎಲ್ಲಾ ರೀತಿಯ ಗೌರವ ದೊರೆಯುವಂತೆ ಮಾಡಲಾಗಿದೆ. ನಮ್ಮ ಸರ್ಕಾರದ ಕಾರ್ಯಕ್ರಮಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿವೆ. ದೇಶದಲ್ಲಿ ಬಿಜೆಪಿ ಚುನಾವಣೆಯಲ್ಲಿ ಗೆದ್ದರೆ ವೋಟಿಂಗ್ ಮೆಷಿನ್ ಮೇಲೆ ಆರೋಪ ಮಾಡಲಾಗುತ್ತದೆ. ಬೇರೆಯವರು ಚುನಾವಣೆ ಗೆದ್ದರೆ ಆ ಪಕ್ಷಗಳ ನಾಯಕರ ಸಾಧನೆ ಹೊಗಳಲಾಗುತ್ತದೆ. ಈ ರೀತಿಯ ಮನಸ್ಥಿತಿ ದೇಶದಲ್ಲಿ ಬೆಳೆಯುತ್ತಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: Covid-19 India Update: ಭಾರತದಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಸೋಂಕು, ಗುರುವಾರ ಮುಖ್ಯಮಂತ್ರಿಗಳೊಂದಿಗೆ ನರೇಂದ್ರ ಮೋದಿ ಸಭೆ

ಕೊರೊನಾ ವಿರುದ್ಧ ಸೂಕ್ತ ನಡವಳಿಕೆಯ ಬಗ್ಗೆ ಏಪ್ರಿಲ್ 6ರಿಂದ 21ರವರೆಗೆ ಜಾಗೃತಿ ಅಭಿಯಾನ: ಪ್ರಧಾನಿ ನರೇಂದ್ರ ಮೋದಿ

(PM Narendra Modi says will use the power of BJP to Indias development at 41th Sansthapana Diwas)

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ